AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರನೌಟ್ ಆಗುವುದು ಧೋನಿಗೆ ಮೊದಲೇ ತಿಳಿದಿತ್ತಾ? ಸಾಕ್ಷಿ ನುಡಿಯುತ್ತಿದೆ ಈ ವೈರಲ್ ವಿಡಿಯೋ

IPL 2023: ಕೊನೆಯ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಧೋನಿ ಚಾಣಾಕ್ಷತನದಿಂದ ರನೌಟ್ ಮಾಡುವಲ್ಲಿ ಯಶಸ್ವಿಯಾದರು. ಈಗ ಇದೇ ರನೌಟ್​ನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

IPL 2023: ರನೌಟ್ ಆಗುವುದು ಧೋನಿಗೆ ಮೊದಲೇ ತಿಳಿದಿತ್ತಾ? ಸಾಕ್ಷಿ ನುಡಿಯುತ್ತಿದೆ ಈ ವೈರಲ್ ವಿಡಿಯೋ
ಧೋನಿ
TV9 Web
| Edited By: |

Updated on:Apr 22, 2023 | 6:29 PM

Share

ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (CSk vs SRH) ನಡುವಿನ ಪಂದ್ಯದಲ್ಲಿ ಸಿಎಸ್‌ಕೆ ತಂಡ 7 ವಿಕೆಟ್‌ಗಳ ಸುಲಭ ಜಯ ಸಾಧಿಸಿತು. ಇದರೊಂದಿಗೆ ಧೋನಿ ಬಳಗ ಟೂರ್ನಿಯಲ್ಲಿ 4ನೇ ಗೆಲುವು ಕಂಡಿತು. ಹೈದರಾಬಾದ್ ತಂಡ ನೀಡಿದ 135 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಸಿಎಸ್‌ಕೆ ಕಾನ್ವೇ ಅವರ ಅರ್ಧಶತಕದ ನೆರವಿನಿಂದಾಗಿ 3 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ತಂಡದ ಪರ ಡೆವೊನ್ ಕಾನ್ವೇ (Devon Conway) ಅಜೇಯ 77 ರನ್ ಬಾರಿಸಿದರೆ, ಮತ್ತೊಬ್ಬ ಆರಂಭಿಕ ರುತುರಾಜ್ ಗಾಯಕ್ವಾಡ್ ಕೂಡ 35 ರನ್ ಗಳಿಸಿದರು. ಇವರೊಂದಿಗೆ ಕೀಪಿಂಗ್​ನಲ್ಲೂ ಮಿಂಚಿದ ಧೋನಿ ಒಂದು ಕ್ಯಾಚ್, ಒಂದು ರನೌಟ್ ಮತ್ತು ಸ್ಟಂಪ್ ಔಟ್ ಮಾಡಿದರು. ಅದರಲ್ಲೂ ಹೈದರಾಬಾದ್ ಇನ್ನಿಂಗ್ಸ್​ನ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಧೋನಿ (MS Dhoni) ಮಾಡಿದ ರನೌಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

3 ವಿಕೆಟ್ ಉರುಳಿಸಿದ ಧೋನಿ

ಈ ಪಂದ್ಯದಲ್ಲಿ ಧೋನಿ ಪ್ರಮುಖ 3 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಅದರಲ್ಲಿ ಮೊದಲನೇಯ ವಿಕೆಟ್ ಆಗಿ ಹೈದರಾಬಾದ್ ನಾಯಕ ಐಡೆನ್ ಮಾರ್ಕ್ರಾಮ್ ಅವರ ಅದ್ಭುತ ಕ್ಯಾಚ್ ಪಡೆದ ಧೋನಿ, ಆನಂತರ ರವೀಂದ್ರ ಜಡೇಜಾ ಎಸೆತದಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಸ್ಟಂಪ್ ಔಟ್ ಮಾಡುವಲ್ಲಿ ಯಶಸ್ವಿಯಾದರು. ಹಾಗೆಯೇ ಇನ್ನಿಂಗ್ಸ್​ನ ಕೊನೆಯ ಎಸೆತದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಧೋನಿ ಚಾಣಾಕ್ಷತನದಿಂದ ರನೌಟ್ ಮಾಡುವಲ್ಲಿ ಯಶಸ್ವಿಯಾದರು. ಈಗ ಇದೇ ರನೌಟ್​ನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

IPL 2023: ಸಿಎಸ್​ಕೆ ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಆಲ್​​ರೌಂಡರ್ ಒಂದು ವಾರ ತಂಡದಿಂದ ಔಟ್..!

ರನೌಟ್​ಗೂ ಮುನ್ನ ಅಭ್ಯಾಸ ನಡೆಸಿದ್ದ ಧೋನಿ

ಅಷ್ಟಕ್ಕೂ ಧೋನಿ ಮಾಡಿದ ಈ ರನೌಟ್ ಇಷ್ಟೊಂದು ವೈರಲ್ ಆಗಲು ಕಾರಣ, ಧೋನಿ ರನ್ ಔಟ್ ಮಾಡುವುದಕ್ಕೂ ಮೊದಲು ಅಂದರೆ, ಪತಿರಾನ ಕೊನೆಯ ಎಸೆತವನ್ನು ಬೌಲ್ ಮಾಡುವುದಕ್ಕೂ ಕೆಲವು ಸೆಕೆಂಡುಗಳ ಮೊದಲು ಧೋನಿ ರನೌಟ್ ಅಭ್ಯಾಸ ನಡೆಸಿದ್ದರು. ತಮ್ಮ ಕೈಗವಸನ್ನು ತೆಗೆದ ಧೋನಿ ತಮ್ಮ ಬಲಗೈಯಿಂದ ಚೆಂಡನ್ನು ಸ್ಟಂಪ್​ಗೆ ಹೊಡೆಯುವ ಅಭ್ಯಾಸ ನಡೆಸಿದ್ದರು. ಆ ಬಳಿಕ ಪತಿರಾನ ಎಸೆದ ಕೊನೆಯ ಎಸೆತವನ್ನು ಯಾನ್ಸೆನ್ ದಂಡಿಸುವಲ್ಲಿ ವಿಫಲರಾದರು. ಚೆಂಡು ನೇರವಾಗಿ ಧೋನಿ ಕೈಸೇರಿತು. ಕೂಡಲೇ ಧೋನಿ ಮೊದಲೇ ಅಭ್ಯಾಸ ನಡೆಸಿದಂತೆ ಸೀದಾ ಚೆಂಡನ್ನು ವಿಕೆಟ್​​ಗೆ ಹೊಡೆಯುವಲ್ಲಿ ಯಶಸ್ವಿಯಾದರು. ಇದೀಗ ಧೋನಿಯ ಈ ಅಭ್ಯಾಸದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕೊನೆಯ ಎಸೆತದಲ್ಲಿ ರನೌಟ್ ಆಗುವುದು ಧೋನಿಗೆ ಮೊದಲೇ ತಿಳಿದಿತ್ತಾ ಎಂದು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಇದೇ ಪಂದ್ಯದಲ್ಲಿ ಅಪರೂಪದ ದಾಖಲೆಯೊಂದನ್ನು ಬರೆದ ಧೋನಿ, ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಪಡೆದ ವಿಕೆಟ್‌-ಕೀಪರ್‌ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಹಿಂದೆ ಕ್ವಿಂಟನ್ ಡಿಕಾಕ್ ಅವರು ಈ ದಾಖಲೆಯನ್ನು ಹೊಂದಿದ್ದರು. ಇದೀಗ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮೀರಿಸಿದ್ದಾರೆ. ಈ ಪಂದ್ಯಕ್ಕು ಮುನ್ನ ಧೋನಿ ಹಾಗೂ ಡಿಕಾಕ್ ಒಟ್ಟು 207 ಕ್ಯಾಚ್‌ಗಳನ್ನು ಪಡೆದು ನಂಬರ್ 1 ಸ್ಥಾನದಲ್ಲಿದ್ದರು. ಮಹೇಶ್ ತೀಕ್ಷಣ ಅವರ ಬೌಲಿಂಗ್‌ನಲ್ಲಿ ಆ್ಯಡಂ ಮಾರ್ಕ್ರಮ್ ಅವರ ಕ್ಯಾಚ್ ಅನ್ನು ಧೋನಿ ಪಡೆದ ಕೂಡಲೆ ಇತಿಹಾಸ ನಿರ್ಮಿಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:25 pm, Sat, 22 April 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್