AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಎದುರಾಳಿ ಬ್ಯಾಟರ್ ಜೊತೆ ದೃಷ್ಟಿಯುದ್ಧಕ್ಕಿಳಿದ ಜಡೇಜಾ! ಸಮಾಧಾನ ಪಡಿಸಿದ ಧೋನಿ

IPL 2023: ವಿಕೆಟ್ ಕಬಳಿಸಿದ್ದರೂ ಜಡೇಜಾ ಕೋಪ ತಣ್ಣಗಾಗದೆ ಮತ್ತೆ ಕ್ಲಾಸೆನ್​ನತ್ತ ಕಣ್ಣು ಹಾಯಿಸುತ್ತಾ ಏನೋ ಮಾತನಾಡತೊಡಗಿದರು. ಆ ಬಳಿಕ ಧೋನಿ ಇಬ್ಬರ ನಡುವಿನ ದೃಷ್ಟಿ ಯುದ್ದಕ್ಕೆ ಅಂತ್ಯ ಹಾಡಿದರು.

IPL 2023: ಎದುರಾಳಿ ಬ್ಯಾಟರ್ ಜೊತೆ ದೃಷ್ಟಿಯುದ್ಧಕ್ಕಿಳಿದ ಜಡೇಜಾ! ಸಮಾಧಾನ ಪಡಿಸಿದ ಧೋನಿ
ಕ್ಲಾಸೆನ್ ಜೊತೆ ಜಡೇಜಾ ಜಗಳ
ಪೃಥ್ವಿಶಂಕರ
|

Updated on:Apr 21, 2023 | 10:36 PM

Share

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ (CSK vs SRH) ನಡುವಿನ ಪಂದ್ಯದಲ್ಲಿ ಸಿಎಸ್​ಕೆ ತಂಡ ಮೇಲುಗೈ ಸಾಧಿಸಿದೆ. ತಂಡದ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ 3 ವಿಕೆಟ್ ಉರುಳಿಸಿ ಹೈದರಾಬಾದ್ ತಂಡವನ್ನು ಕೇವಲ 134 ರನ್​ಗಳಿಗೆ ಕಟ್ಟಿಹಾಕುವಲ್ಲಿ ನೆರವಾದರು. ಸದ್ಯ ಈ ಗುರಿ ಬೆನ್ನಟ್ಟಿರುವ ಸಿಎಸ್​ಕೆ ಸುಲಭವಾಗಿ ಗುರಿ ಮುಟ್ಟುವ ಸೂಚನೆ ನೀಡಿದೆ. ಆದರೆ ಇದೇ ಪಂದ್ಯದಲ್ಲಿ ಸಿಎಸ್​ಕೆ ಸ್ಪಿನ್ನರ್ ರವೀಂದ್ರ ಜಡೇಜಾ (Ravindra Jadeja) ಹಾಗೂ ಹೈದರಾಬಾದ್ ಬ್ಯಾಟರ್ ಕ್ಲಾಸೆನ್ (Heinrich Klaasen) ಪರಸ್ಪರ ವಾಗ್ವಾದ ನಡೆಸಿದ ಘಟನೆ ನಡೆದಿದ್ದು, ಈ ಇಬ್ಬರು ಆಟಗಾರರ ಜಗಳವನ್ನು ಬಿಡಿಸಲು ಅಂತಿಮವಾಗಿ ಕೂಲ್ ಕ್ಯಾಪ್ಟನ್ ಧೋನಿ​ ಬರಬೇಕಾಯಿತು. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

13ನೇ ಓವರ್​ನಲ್ಲಿ ನಡೆದ ಘಟನೆ

ವಾಸ್ತವವಾಗಿ ಹೈದರಾಬಾದ್ ಇನ್ನಿಂಗ್ಸ್​ನ 13ನೇ ಓವರ್​ನಲ್ಲಿ ಈ ಘಟನೆ ನಡೆಯಿತು. ಈ ಓವರ್ ಬೌಲ್ ಮಾಡಿದ ರವೀಂದ್ರ ಜಡೇಜಾಗೆ ಮತ್ತೊಂದು ವಿಕೆಟ್ ಪಡೆಯುವ ಅವಕಾಶವಿತ್ತು. ಈ ಓವರ್‌ನ ಮೊದಲ ಎಸೆತದಲ್ಲಿ ಮಯಾಂಕ್ ಅಗರ್ವಾಲ್ ನೆರವಾಗಿ ಶಾಟ್ ಆಡಿದರು. ಆ ಚೆಂಡು ನೇರವಾಗಿ ಬೌಲಿಂಗ್ ಮಾಡಿದ ಜಡೇಜಾ ಕೈಸೇರುವುದರಲ್ಲಿತ್ತು. ಆದರೆ ನಾನ್-ಸ್ಟ್ರೈಕರ್​ನಲ್ಲಿ ನಿಂತಿದ್ದ ಹೆನ್ರಿಚ್ ಕ್ಲಾಸೆನ್ ಇದಕ್ಕೆ ಅಡ್ಡಿಯಾದರು. ವಾಸ್ತವವಾಗಿ ಚೆಂಡು ನಾನ್-ಸ್ಟ್ರೈಕರ್​ ತುದಿಯಲ್ಲಿ ನಿಂತಿದ್ದ ಕ್ಲಾಸೆನ್​ ಕಡೆಗೆ ಸಾಗಿತು. ಕೂಡಲೇ ಜಡೇಜಾ ಆ ಕ್ಯಾಚ್ ತೆಗೆದುಕೊಳ್ಳಲು ಯತ್ನಿಸಿದರು. ಆದರೆ ಚೆಂಡು ತನ್ನತ್ತ ಬರುತ್ತಿರುವುದನ್ನು ಗಮನಿಸಿದ ಕ್ಲಾಸೆನ್ ಕೂಡಲೇ ಕ್ರೀಸ್ ತಲುಪಲು ಹಿಂದಕ್ಕೆ ಬರಲಾರಂಭಿಸಿದರು. ಇದೇ ವೇಳೆ ಜಡೇಜಾ ಕೂಡ ಆ ಕ್ಯಾಚ್ ಹಿಡಿಯಲು ಪ್ರಯತ್ನಿಸಿದರು. ಆದರೆ ಕ್ಲಾಸೆನ್ ಅಡ್ಡಬಂದಿದ್ದರಿಂದ ಜಡೇಜಾ, ಕ್ಲಾಸೆನ್​ಗೆ ಪರಸ್ಪರ ಡಿಕ್ಕಿ ಹೊಡೆದುಕೊಂಡರು. ಇದರಿಂದ ಜಡೇಜಾ ಆ ಸುಲಭ ಕ್ಯಾಚ್ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ.

ದೃಷ್ಟಿ ಯುದ್ದಕ್ಕೆ ಅಂತ್ಯ ಹಾಡಿದ ಧೋನಿ

ಇಂತಹ ಸುಲಭ ಅವಕಾಶ ಕೈ ತಪ್ಪಿ ಹೋಗಿದನ್ನು ಕಂಡು ಕುಪಿತಗೊಂಡ ಜಡೇಜಾ ನೆಲದ ಮೇಲೆ ಕುಳಿತು ಕ್ಲಾಸೆನ್‌ನತ್ತ ನೋಡತೊಡಗಿದರು. ಆ ಬಳಿಕವೂ ಜಡೇಜಾ, ಕ್ಲಾಸೆನ್​ ಅವರನ್ನು ಕೆಣಕುವುದನ್ನು ಬಿಡಲಿಲ್ಲ. ಪ್ರತಿಯೊಂದು ಎಸೆತವಾದ ಬಳಿಕವೂ ಜಡೇಜಾ, ಕ್ಲಾಸೆನ್​ ಕಡೆ ಗುರಾಯಿಸುತ್ತಿದ್ದರು. ಆದಾಗ್ಯೂ, ಮಯಾಂಕ್ ಅಗರ್ವಾಲ್ ಈ ಜೀವದಾನದ ಉಡುಗೊರೆಯ ಲಾಭವನ್ನು ಪಡೆಯಲು ಸಾಧ್ಯವಾಗಲಿಲ್ಲ. ಬದಲಿಗೆ ಅದೇ ಓವರ್‌ನಲ್ಲಿ ಔಟಾದರು. ಒಮ್ಮೆ ಅವಕಾಶ ಜಡೇಜಾ ಕೈಯಿಂದ ಕೈ ತಪ್ಪಿದರೂ, ಐದನೇ ಎಸೆತದಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಧೋನಿ ಸ್ಟಂಪ್ ಮಾಡಿದರು. ವಿಕೆಟ್ ಕಬಳಿಸಿದ್ದರೂ ಜಡೇಜಾ ಕೋಪ ತಣ್ಣಗಾಗದೆ ಮತ್ತೆ ಕ್ಲಾಸೆನ್​ನತ್ತ ಕಣ್ಣು ಹಾಯಿಸುತ್ತಾ ಏನೋ ಮಾತನಾಡತೊಡಗಿದರು. ಆ ಬಳಿಕ ಧೋನಿ ಇಬ್ಬರ ನಡುವಿನ ದೃಷ್ಟಿ ಯುದ್ದಕ್ಕೆ ಅಂತ್ಯ ಹಾಡಿದರು.

ಈ ಐಪಿಎಲ್​ನಲ್ಲಿ ಜಡೇಜಾ ಅಬ್ಬರ

ಈ ಸಣ್ಣ ಗಲಾಟೆಯ ಹೊರತಾಗಿ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ ತಮ್ಮ 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 3 ವಿಕೆಟ್ ಪಡೆದರು. ಮಯಾಂಕ್ ಅಗರ್ವಾಲ್ ಅವರಿಗೂ ಮೊದಲು ಜಡೇಜಾ, ಅಭಿಷೇಕ್ ಶರ್ಮಾ ಮತ್ತು ರಾಹುಲ್ ತ್ರಿಪಾಠಿ ರೂಪದಲ್ಲಿ ಎರಡು ಪ್ರಮುಖ ವಿಕೆಟ್ಗಳನ್ನು ಪಡೆದರು. ಈ ಸೀಸನ್​ನಲ್ಲಿ ಇದುವರೆಗೆ ಜಡೇಜಾ ಒಟ್ಟು 9 ವಿಕೆಟ್ ಪಡೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:32 pm, Fri, 21 April 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!