AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಶ್ರೇಯಸ್ ಅಯ್ಯರ್ ಬಳಿಕ ಕೆಕೆಆರ್ ತಂಡದ ಮತ್ತೊಬ್ಬ ಸ್ಟಾರ್ ಆಟಗಾರನಿಗೆ ಇಂಜುರಿ..!

IPL 2023: ಸೀಸನ್ ಪ್ರಾರಂಭವಾಗುವ ಮೊದಲೇ ತಂಡದ ನಾಯಕ ಶ್ರೇಯಸ್ ಅಯ್ಯರ್ ಅಲಭ್ಯತೆಯ ಶಾಕ್​ಗೆ ಒಳಗಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ, ಇದೀಗ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಗಾಯಗೊಂಡಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ.

IPL 2023: ಶ್ರೇಯಸ್ ಅಯ್ಯರ್ ಬಳಿಕ ಕೆಕೆಆರ್ ತಂಡದ ಮತ್ತೊಬ್ಬ ಸ್ಟಾರ್ ಆಟಗಾರನಿಗೆ ಇಂಜುರಿ..!
ಕೆಕೆಆರ್ ತಂಡ
ಪೃಥ್ವಿಶಂಕರ
|

Updated on:Mar 23, 2023 | 5:29 PM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನ 16 ನೇ ಸೀಸನ್ (IPL 2023) ಆರಂಬಕ್ಕೂ ಮೊದಲು ಹಲವಾರು ಫ್ರಾಂಚೈಸಿಗಳಿಗೆ ಆಟಗಾರರ ಇಂಜುರಿ ಸಮಸ್ಯೆ ತಲೆನೋವು ತಂದ್ದೊಡ್ಡಿದೆ. ಸೀಸನ್ ಪ್ರಾರಂಭವಾಗುವ ಮೊದಲೇ ಹಲವಾರು ಪ್ರಮುಖ ಆಟಗಾರರು ಪಂದ್ಯಾವಳಿಯಿಂದ ಹಿಂದೆ ಸರಿದಿದ್ದಾರೆ. ಇದೀಗ ಟೂರ್ನಿ ಆರಂಭಕ್ಕೆ ದಿನಗಳು ಹತ್ತಿರವಾದಂತೆ ದೇಶಿ ಆಟಗಾರರು ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಜುರಿಗೆ ತುತ್ತಾಗುವುದರೊಂದಿಗೆ ಫ್ರಾಂಚೈಸಿಗಳಿಗೆ ಸಂಕಷ್ಟ ಹೆಚ್ಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಕೆಆರ್ (KKR) ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಇಂಜುರಿಯಿಂದಾಗಿ ಇಡೀ ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಇದೀಗ ಬಂದಿರುವ ಮಾಹಿತಿ ಪ್ರಕಾರ, ತಂಡದ ಸ್ಟಾರ್ ವೇಗದ ಬೌಲರ್ ಲಾಕಿ ಫರ್ಗುಸನ್ (Lockie Ferguson) ಗಾಯಗೊಂಡಿರುವುದು ತಂಡದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ವಾಸ್ತವವಾಗಿ, ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಇಂಜುರಿಗೆ ತುತ್ತಾದರು. ಆದ್ದರಿಂದ, ನಾಲ್ಕನೇ ಟೆಸ್ಟ್‌ನಲ್ಲಿ ಮೊದಲ ದಿನ ಕಣಕ್ಕಿಳಿದಿದ್ದ ಅಯ್ಯರ್, ಆನಂತರ ತಂಡದ ಪರ ಬ್ಯಾಟಿಂಗ್ ಮಾಡಲು ಸಹ ಮೈದಾನಕ್ಕೆ ಬರಲಿಲ್ಲ. ವಾಸ್ತವವಾಗಿ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ನಾಗ್ಪುರದಲ್ಲಿ ನಡೆದ ಈ ಸರಣಿಯ ಮೊದಲ ಟೆಸ್ಟ್‌ನಲ್ಲಿಯೂ ಆಡಿರಲಿಲ್ಲ. ಇದೀಗ ಅವರು ಐಪಿಎಲ್‌ನಿಂದ ಹೊರಬಿದ್ದಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

‘ನಾಯಕತ್ವ ನೀಡುವುದಾಗಿ ನಂಬಿಸಿ ತಂಡದಿಂದ ಹೊರಹಾಕಿದ್ರು’; ಶಾಕಿಂಗ್ ಹೇಳಿಕೆ ನೀಡಿದ ವೀರೇಂದ್ರ ಸೆಹ್ವಾಗ್

ಲಾಕಿ ಫರ್ಗುಸನ್​ಗೆ ಇಂಜುರಿ

ಸೀಸನ್ ಪ್ರಾರಂಭವಾಗುವ ಮೊದಲೇ ತಂಡದ ನಾಯಕ ಶ್ರೇಯಸ್ ಅಯ್ಯರ್ ಅಲಭ್ಯತೆಯ ಶಾಕ್​ಗೆ ಒಳಗಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ, ಇದೀಗ ತಂಡದ ವೇಗದ ಬೌಲರ್ ಲಾಕಿ ಫರ್ಗುಸನ್ ಗಾಯಗೊಂಡಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಫರ್ಗುಸನ್ ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದು, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಇದೀಗ ಇಂಜುರಿಗೆ ತುತ್ತಾಗಿರುವ ಫರ್ಗುಸನ್, ಐಪಿಎಲ್ ಆರಂಭಕ್ಕೂ ಮುನ್ನ ಚೇತರಿಸಿಕೊಳ್ಳದಿದ್ದರೆ, ತಂಡದ ಆರಂಭಿಕ ಕೆಲವು ಪಂದ್ಯಗಳಿಗೆ ಅಲಭ್ಯರಾಗುವುದು ಖಚಿತ.

14 ಪಂದ್ಯಗಳಲ್ಲಿ 12 ವಿಕೆಟ್

ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಫರ್ಗುಸನ್ ಅವರನ್ನು ಮಿನಿ ಹರಾಜಿನಲ್ಲಿ ಕೆಕೆಆರ್ ತಂಡ ತನ್ನ ಬತ್ತಳಿಕೆಗೆ ಹಾಕಿಕೊಂಡಿತ್ತು. ಅಲ್ಲದೆ ಕೆಕೆಆರ್ ತಂಡ ಫರ್ಗುಸನ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಏಕೆಂದರೆ ಕಳೆದ ಆವೃತ್ತಿಯಲ್ಲಿ ಪ್ಯಾಟ್ ಕಮ್ಮಿನ್ಸ್ ಮತ್ತು ಟಿಮ್ ಸೌಥಿ ಪವರ್‌ಪ್ಲೇಯಲ್ಲಿ ವಿಕೆಟ್ ಪಡೆಯಲು ಹೆಣಗಾಡಿದ್ದರು. ಹೀಗಾಗಿ ಪವರ್​ಪ್ಲೇನಲ್ಲಿ ವಿಕೆಟ್ ಟೇಕರ್ ಎನಿಸಿಕೊಂಡಿರುವ ಫರ್ಗುಸನ್ ಅಲಭ್ಯತೆ ಕೆಕೆಆರ್ ತಂಡಕ್ಕೆ ಹಿನ್ನಡೆಯುಂಟು ಮಾಡಲಿದೆ. ಇನ್ನು ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಆಡಿದ್ದ ಫರ್ಗುಸನ್, 14 ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Thu, 23 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ