AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs GT, IPL 2023: ಐಪಿಎಲ್​ನಲ್ಲಿಂದು ಎರಡು ರೋಚಕ ಪಂದ್ಯ: ಆರ್​ಸಿಬಿ-ಗುಜರಾತ್ ಮ್ಯಾಚ್ ಮೇಲೆ ಎಲ್ಲರ ಕಣ್ಣು

MI vs SRH, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ ನಡೆಯಲಿದೆ. ಮೊದಲ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಅನ್ನು ಎದುರಿಸಲಿದೆ.

RCB vs GT, IPL 2023: ಐಪಿಎಲ್​ನಲ್ಲಿಂದು ಎರಡು ರೋಚಕ ಪಂದ್ಯ: ಆರ್​ಸಿಬಿ-ಗುಜರಾತ್ ಮ್ಯಾಚ್ ಮೇಲೆ ಎಲ್ಲರ ಕಣ್ಣು
RCB vs GT
Vinay Bhat
|

Updated on: May 21, 2023 | 7:33 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಇಂದು ಎರಡು ರಣರೋಚಕ ಪಂದ್ಯ ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ರೋಹಿತ್ ಶರ್ಮಾ ಅವರ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ (MI vs SRH) ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ (RCB vs GT) ಅನ್ನು ಎದುರಿಸಲಿದೆ. ಇಂದಿನ ಪಂದ್ಯದ ಮೂಲಕ ಐಪಿಎಲ್ 2023 ಲೀಗ್ ಮ್ಯಾಚ್​ಗಳಿಗೆ ತೆರೆಬೀಳಲಿದೆ.

ಮುಂಬೈ-ಹೈದರಾಬಾದ್:

ಮುಂಬೈ 13 ಪಂದ್ಯಗಳಲ್ಲಿ 14 ಅಂಕಗಳನ್ನು ಗಳಿಸಿದ್ದು ಮೈನಸ್​ ನೆಟ್ ರನ್​ರೇಟ್​ ಕಾರಣಕ್ಕೆ ಪಾಯಿಂಟ್ಸ್​ ಟೇಬಲ್​ನಲ್ಲಿ ಆರನೇ ಸ್ಥಾನ ಪಡೆದುಕೊಂಡಿದೆ. ಇಂದಿನ ಪಂದ್ಯದಲ್ಲಿ ಕೇವಲ ಗೆದ್ದರೆ ಪ್ಲೇಆಫ್​ಗೇರಲು ಸಾಧ್ಯವಾಗುವುದಿಲ್ಲ. ಗುಜರಾತ್​ ಹಾಗೂ ಆರ್​ಸಿಬಿ ತಂಡದ ಫಲಿತಾಂಶದ ಮುಂಬೈ ಭವಿಷ್ಯ ನಿರ್ಧಾರವಾಗಲಿದೆ. ಎಲ್ಲಾದರು ಇಂದು ಆರ್​ಸಿಬಿ ಗೆದ್ದರೆ ಮುಂಬೈ ಪ್ಲೇ ಆಫ್ ಕನಸು ನುಚ್ಚುನೂರಾಗಲಿದೆ.

IPL 2023: RCB ತಂಡದಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ ಇಲೆವೆನ್

ಇದನ್ನೂ ಓದಿ
Image
IPL 2023 Playoffs: ಪ್ಲೇಆಫ್​ಗೆ LSG ಲಗ್ಗೆ: ಇನ್ನು RCB ಮತ್ತು MI ನಡುವೆ ಪೈಪೋಟಿ
Image
IPL 2023: RCB vs GT ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್ ರದ್ದಾದರೆ ಯಾರಿಗೆ ಲಾಭ?
Image
IPL 2023: ಕೊನೆಯ ಪಂದ್ಯ RCB ಪಾಲಿಗೆ ಪ್ಲಸ್ ಪಾಯಿಂಟ್
Image
IPL 2023: ಗುಜರಾತ್ ಟೈಟಾನ್ಸ್ ಬಲಿಷ್ಠ, ಆದರೆ RCB…

ಮುಂಬೈ ತಂಡ ಬ್ಯಾಟಿಂಗ್​ನಲ್ಲಿ ಸಾಕಷ್ಟು ಬಲಿಷ್ಠವಾಗಿದೆ. ಎಷ್ಟೇ ದೊಡ್ಡ ಮೊತ್ತದ ಟಾರ್ಗೆಟ್ ಇದ್ದರೂ ಸುಲಭವಾಗಿ ಗೆಲುವು ಸಾಧಿಸುತ್ತಿದೆ. ನಾಯಕ ರೋಹಿತ್ ಶರ್ಮಾ ಅವರ ಸತತ ಕಳಪೆ ಪ್ರದರ್ಶನ ತಂಡಕ್ಕೆ ದೊಡ್ಡ ಚಿಂತೆ. ಈ ಟೂರ್ನಿಯಲ್ಲಿ ಹಿಟ್​ಮ್ಯಾನ್ ಕಡೆಯಿಂದ ಉತ್ತಮ ಆಟ ಬಂದಿಲ್ಲ. ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೀರ ಭರ್ಜರಿ ಫಾರ್ಮ್​ನಲ್ಲಿದ್ದು ರನ್ ಕಲೆಹಾಕುತ್ತಿದ್ದಾರೆ. ಜೇಸನ್ ಬೆಹ್ರೆಂಡಾರ್ಫ್, ಗ್ರೀನ್, ಕ್ರಿಸ್ ಜೋರ್ಡನ್, ಆಕಾಶ್ ಮಧ್ವಾಲ್ ಇನ್ನಷ್ಟು ಮಾರಕವಾಗಬೇಕಿದೆ. ಪಿಯೂಷ್ ಚಾವ್ಲಾ ಮಾತ್ರ ಮುಂಬೈ ಬೌಲಿಂಗ್​ನಲ್ಲಿ ಎದುರಾಳಿಗೆ ಕಂಠಕವಾಗಿ ಪರಿಣಮಿಸಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದ್ದು ಟೂರ್ನಿಯಿಂದ ಹೊರಬಿದ್ದಿದೆ. ತಂಡದಿಂದ ಸಂಘಟಿತ ಪ್ರದರ್ಶನ ಬರುತ್ತಿಲ್ಲ. ಅಭಿಷೇಕ್ ಶರ್ಮಾ, ಅನ್ಮೋಲ್​ಪ್ರೀತ್ ಸಿಂಗ್, ರಾಹುಲ್ ತ್ರಿಪಾಠಿ, ನಾಯಕ ಮರ್ಕ್ರಮ್, ಹೆನ್ರಿಚ್ ಕ್ಲಾಸೆನ್, ಗ್ಲೆನ್ ಪಿಲಿಪ್ಸ್ ಕೆಲ ಪಂದ್ಯ ಆಡಿದರೆ ಉಳಿದ ಪಂದ್ಯದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಬೌಲಿಂಗ್​ನಲ್ಲಿ ಹೈದರಬಾದ್ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಮಾರಕವಾಗಿ ಗೋಚರಿಸುತ್ತಿಲ್ಲ. ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ಲಯಕಂಡುಕೊಳ್ಳಬೇಕಿದೆ. ಮಯಾಂಕ್ ಮಾರ್ಕಂಡೆ ಸ್ಪಿನ್ ಕೆಲಬಾರಿಯಷ್ಟೆ ಕೆಲಸ ಮಾಡಿದೆ.

ಆರ್​ಸಿಬಿ-ಜಿಟಿ:

ಆರ್​ಸಿಬಿ ಹಿಂದಿನ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ವಿರಾಟ್ ಕೊಹ್ಲಿ ಶತಕ ಸಿಡಿಸಿ ಮಿಂಚಿದ್ದರು. ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಮಹಿಪಾಲ್ ಲುಮ್ರೂರ್, ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು. ಕೇದರ್ ಜಾಧವ್ ಒಂದು ಬಾರಿ ಮಾತ್ರ ಕಣಕ್ಕಿಳಿದಿದ್ದರು. ಬೌಲಿಂಗ್​ನಲ್ಲಿ ಆರ್​ಸಿಬಿ ಲಯ ಕಂಡುಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಹನಿಂದು ಹಸರಂಗ ಪ್ಲೇಯಿಂಗ್ ಇಲೆವೆನ್​ಗೆ ಕಮ್​ಬ್ಯಾಕ್ ಮಾಡ್ತಾರ ನೋಡಬೇಕು. ಕರ್ಣ್ ಶರ್ಮಾ ಮಾರಕವಾಗಿದ್ದಾರೆ.

ಜಿಟಿ ತಂಡ ಆಡಿರುವ 13 ಪಂದ್ಯಗಳಲ್ಲಿ 9 ಗೆಲುವು 4 ಸೋಲು ಕಂಡು 18 ಅಂಕ ಪಡೆದುಕೊಂಡು ಕ್ವಾಲಿಫೈಯರ್ ಆಗಿದೆ. ಹಾರ್ದಿಕ್ ಪಡೆ ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್​ಗಳಾಗಿದ್ದಾರೆ. ರಶೀದ್ ಖಾನ್ ಆಲ್ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು