AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Points Table: ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದ ರಾಹುಲ್ ಪಡೆ: ಆರೆಂಜ್ ಕ್ಯಾಪ್ ಯಾರಿಗೆ?

LSG vs SRH, IPL 2023: ಎಲ್​ಎಸ್​ಜಿ-ಎಸ್​ಆರ್​ಹೆಚ್ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

IPL 2023 Points Table: ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದ ರಾಹುಲ್ ಪಡೆ: ಆರೆಂಜ್ ಕ್ಯಾಪ್ ಯಾರಿಗೆ?
LSG Team
Vinay Bhat
|

Updated on:Apr 08, 2023 | 9:07 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್​ ಲೀಗ್ (IPL 2023) ಟೂರ್ನಿ ದಿನದಿಂದ ದಿನಕ್ಕೆ ರೋಚಕತೆ ಪಡೆಯುತ್ತಿದೆ. ಕೆಲ ತಂಡಗಳಿಂದ ಊಹಿಸಲಾಗದ ಪ್ರದರ್ಶನ ಬರುತ್ತಿದೆ. ಶುಕ್ರವಾರ ಐಪಿಎಲ್​ನಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ನಡುವೆ ಪಂದ್ಯ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಕೆಎಲ್ ರಾಹುಲ್ ನೇತೃತ್ವದ ಎಲ್​ಎಸ್​ಜಿ ತಂಡ 5 ವಿಕೆಟ್​ಗಳ ಸುಲಭ ಜಯ ಸಾಧಿಸಿತು. ಇದೀಗ ಎಲ್​ಎಸ್​ಜಿ-ಎಸ್​ಆರ್​ಹೆಚ್ ಪಂದ್ಯದ ಬಳಿಕ ಐಪಿಎಲ್ 2023 ಪಾಯಿಂಟ್ ಟೇಬಲ್​ನಲ್ಲಿ ಸಂಪೂರ್ಣ ಬದಲಾವಣೆ ಆಗಿದೆ. ಹಾಗಾದರೆ ಪಾಯಿಂಟ್ಸ್ ಟೇಬಲ್ ಹೇಗಿದೆ ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿಯಿದೆ ಎಂಬುದನ್ನು ನೋಡೋಣ.

  • ಹೈದರಾಬಾದ್ ವಿರುದ್ಧ ಜಯ ಸಾಧಿಸುವ ಮೂಲಕ ಲಖನೌ ಸೂಪರ್ ಜೇಂಟ್ಸ್ ಅಗ್ರಸ್ಥಾನಕ್ಕೇರಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲುಂಡು ಎಲ್​ಎಸ್​ಜಿ ಟೇಬಲ್ ಟಾಪ್​ನಲ್ಲಿದೆ. +1.358 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿರುವ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ. +0.700 ರನ್​ರೇಟ್​ನೊಂದಿಗೆ 4 ಅಂಕ ಸಂಪಾದಿಸಿದೆ.
  • ಪಂಜಾಬ್ ಕಿಂಗ್ಸ್ ಕೂಡ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಕಂಡು 4 ಅಂಕ ಹೊಂದಿ +0.333ರನ್​ರೇಟ್​ ಆಧಾರದ ಮೇಲೆ ತೃತೀಯ ಸ್ಥಾನದಲ್ಲಿದೆ.
  • ನಾಲ್ಕನೇ ಸ್ಥಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವಿದೆ. ಆಡಿದ ಎರಡು ಪಂದ್ಯಗಳ ಪೈಕಿ ಸೋಲು-ಗೆಲುವನ್ನು ಕಂಡು +2.056 ರನ್​ರೇಟ್​ನೊಂದಿಗೆ 2 ಅಂಕ ಪಡೆದುಕೊಂಡಿದೆ.
  • ರಾಜಸ್ಥಾನ್ ರಾಯಲ್ಸ್ ಆರನೇ ಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯಗಳಲ್ಲಿ ಒಂದು ಸಾಧಿಸಿ 2 ಅಂಕದೊಂದಿಗೆ +1.675 ರನ್​ರೇಟ್ ಕಾಪಾಡಿಕೊಂಡಿದೆ.
  • ನಂತರದ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವಿದೆ. ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು ಒಂದು ಸೋಲುಂಡು 2 ಅಂಕದೊಂದಿಗೆ +0.036 ರನ್​ರೇಟ್ ಕಾಪಾಡಿಕೊಂಡಿದೆ.
  • ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಎರಡು ಪಂದ್ಯಗಳ ಪೈಕಿ ಒಂದು ಒಂದು ಸೋಲು ಕಂಡು 2 ಅಂಕ ಸಂಪಾದಿಸಿ -1.256 ರನ್​ರೇಟ್ ಹೊಂದಿದೆ.
  • ಡೆಲ್ಲಿ ಕ್ಯಾಪಿಟಲ್ಸ್ ಎಂಟನೇ ಸ್ಥಾನದಲ್ಲಿದೆ. ಆಡಿದ ಎರಡು ಪಂದ್ಯಗಳಲ್ಲಿ ಎರಡರಲ್ಲೂ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.703 ರನ್​ರೇಟ್ ಹೊಂದಿದೆ.
  • ಮುಂಬೈ ಇಂಡಿಯನ್ಸ್ ಒಂಬತ್ತನೆ ಸ್ಥಾನದಲ್ಲಿದೆ. ಆಡಿದ ಒಂದು ಪಂದ್ಯದಲ್ಲಿ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -1.981 ರನ್​ರೇಟ್ ಹೊಂದಿದೆ.
  • ಕೊನೆಯ ಸ್ಥಾನದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವಿದೆ. ಆಡಿದ ಎರಡು ಪಂದ್ಯದಲ್ಲಿ ಎರಡರಲ್ಲೂ ಸೋಲು ಕಂಡು ಯಾವುದೇ ಅಂಕ ಸಂಪಾದಿಸದೆ -2.867 ರನ್​ರೇಟ್ ಹೊಂದಿದೆ.

IPL 2023: ಶತಕ ಬಾರಿಸು ಎಂದ ಧೋನಿ ಫ್ಯಾನ್​ಗೆ ಕೊಹ್ಲಿ ಪಾಠ ಕಲಿಸಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಆರೆಂಜ್ ಕ್ಯಾಪ್:

ಇದನ್ನೂ ಓದಿ
Image
LSG vs SRH, IPL 2023: ನಾಯಕನೇ ಶೂನ್ಯಕ್ಕೆ ಔಟ್: ಸತತ ಎರಡನೇ ಪಂದ್ಯ ಸೋತ ಹೈದರಾಬಾದ್
Image
LSG vs SRH: 13, 3.. 30 ನಿಮಿಷ; ಹೈದರಾಬಾದ್​ಗೆ ದುಬಾರಿಯಾದ 13.25 ಕೋಟಿ ರೂ. ಪ್ಲೇಯರ್!
Image
LSG vs SRH Highlights IPL 2023: ಹೈದರಾಬಾದ್​ಗೆ ಸತತ 2ನೇ ಸೋಲು; ತವರಿನಲ್ಲಿ ಗೆದ್ದ ಲಕ್ನೋ
Image
IPL- ಐಪಿಎಲ್​ಗೆ ಡಿಜಿಟಲ್ ಧಮಾಕ, ಟಿವಿ ವೀಕ್ಷಕರ ಸಂಖ್ಯೆ ಇಳಿಮುಖ; ಜಿಯೋ ವಿಶ್ವದಾಖಲೆ

ಸಿಎಸ್​ಕೆ ತಂಡದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಇವರು ಜಿಟಿ ವಿರುದ್ಧ 92 ರನ್ ಹಾಗೂ ಲಖನೌ ವಿರುದ್ಧ 57 ರನ್ ಸಿಡಿಸಿದ್ದರು. ಈ ಮೂಲಕ ಆಡಿದ ಎರಡು ಪಂದ್ಯಗಳಲ್ಲಿ ಒಟ್ಟು 149 ರನ್ ಕಲೆಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಎಲ್​ಎಸ್​ಜಿಯ ಖೈಲ್ ಮೇಯರ್ಸ್ ಅವರಿದ್ದು 139 ರನ್ ಕಲೆಹಾಕಿದ್ದಾರೆ.

ಪರ್ಪಲ್ ಕ್ಯಾಪ್:

ಲಖನೌ ಸೂಪರ್ ಜೇಂಟ್ಸ್ ತಂಡದ ಮಾರ್ಕ್ ವುಡ್ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತೊಟ್ಟಿದ್ದಾರೆ. ಇವರು ಡೆಲ್ಲಿ ವಿರುದ್ಧ 5 ವಿಕೆಟ್ ಕಬಳಿಸಿದ್ದರು. ಹಾಗೆಯೆ ಚೆನ್ನೈ ವಿರುದ್ಧ 3 ವಿಕೆಟ್ ಕಿತ್ತಿದ್ದಾರೆ. ಒಟ್ಟು 8 ವಿಕೆಟ್ ಪಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಾರೆ. ಇದೇ ಲಖನೌ ತಂಡದ ರವಿ ಬಿಷ್ಟೋಯಿ ದ್ವಿತೀಯ ಸ್ಥಾನಕ್ಕೆ ಜಿಗಿದಿದ್ದು ಆಡಿದ ಮೂರು ಪಂದ್ಯಗಳಲ್ಲಿ 6 ವಿಕೆಟ್ ಪಡೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:07 am, Sat, 8 April 23

‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್
ರಾಜಣ್ಣಗಿರುವ ಮಾಹಿತಿ ನಂಗಿರಲ್ಲ, ನಾನೊಬ್ಬ ಸಣ್ಣ ಕಾರ್ಯಕರ್ತ: ಸುರೇಶ್