AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ ಮಿನಿ ಹರಾಜಿನ ದಿನಾಂಕ ಬಹಿರಂಗ; ಭಾರತದಲ್ಲಿಯೇ ಆಟಗಾರರ ಹರಾಜು ಪ್ರಕ್ರಿಯೆ..!

IPL 2023: ಯಾವ ಆಟಗಾರರನ್ನು ತಂಡದಲ್ಲಿ ಇರಿಸಿಕೊಳ್ಳಬೇಕು ಮತ್ತು ಯಾರನ್ನು ಬಿಡುಗಡೆ ಮಾಡಬೇಕು ಎಂಬ ಪಟ್ಟಿಯನ್ನು ನವೆಂಬರ್ 15 ರೊಳಗೆ ಫ್ರಾಂಚೈಸಿಗಳು ಮಂಡಳಿಗೆ ನೀಡಬೇಕು.

IPL 2023: ಐಪಿಎಲ್ ಮಿನಿ ಹರಾಜಿನ ದಿನಾಂಕ ಬಹಿರಂಗ; ಭಾರತದಲ್ಲಿಯೇ ಆಟಗಾರರ ಹರಾಜು ಪ್ರಕ್ರಿಯೆ..!
IPL auction
TV9 Web
| Edited By: |

Updated on:Nov 09, 2022 | 4:23 PM

Share

ಇಡೀ ದೇಶದ ಕಣ್ಣು ಈಗ ಟಿ20 ವಿಶ್ವಕಪ್ (T20 World Cup) ಮೇಲೆ ನೆಟ್ಟಿದೆ. ಅದರಲ್ಲೂ ನವೆಂಬರ್ 10 ರಂದು ನಡೆಯುವ ಭಾರತ- ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಅಭಿಮಾನಿಗಳು ಕಾದುಕುಳಿತಿದ್ದಾರೆ. ಈ ಟೂರ್ನಮೆಂಟ್ ಮುಗಿದ ನಂತರ ಎಲ್ಲರ ಕಣ್ಣುಗಳು ಐಪಿಎಲ್ ಮೇಲೆ ಇರಲಿವೆ. ಏಕೆಂದರೆ ನವೆಂಬರ್ 15 ರೊಳಗೆ ಎಲ್ಲಾ ಫ್ರಾಂಚೈಸಿಗಳು ತಾವು ಉಳಿಸಿಕೊಂಡ ಹಾಗೂ ತಂಡದಿಂದ ಬಿಡುಗಡೆ ಮಾಡಿದ ಆಟಗಾರರ ಪಟ್ಟಿಯನ್ನು ಐಪಿಎಲ್ ಮಂಡಳಿಗೆ ನೀಡಬೇಕಿದೆ. ಈಗ ಇದೆಲ್ಲವುಗಳ ನಡುವೆ ಐಪಿಎಲ್ 2023 (IPL 2023)ರ ಮಿನಿ ಹರಾಜಿನ ಬಗ್ಗೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಕ್ರಿಕ್ಇನ್ಫೋ ವರದಿ ಪ್ರಕಾರ, ಮಿನಿ ಹರಾಜು ಭಾರತದಲ್ಲಿಯೇ ನಡೆಯಲಿದೆ. ಡಿಸೆಂಬರ್ 23 ರಂದು ಐಪಿಎಲ್‌ ಮಿನಿ ಹರಾಜು ನಡೆಯಲಿದ್ದು, ಕೊಚ್ಚಿಯಲ್ಲಿ (Kochi) ಈ ಮಿನಿ ಹರಾಜು ನಡೆಯಲಿದೆ.

ವಾಸ್ತವವಾಗಿ, ಈ ಮೊದಲು ಮಿನಿ ಹರಾಜನ್ನು ಇಸ್ತಾನ್‌ಬುಲ್‌ನಲ್ಲಿ ನಡೆಸಲು ಯೋಜಿಸಲಾಗಿತ್ತು ಆದರೆ ಈ ಯೋಜನೆಯನ್ನು ಈಗ ಕೈಬಿಡಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಫ್ರಾಂಚೈಸಿಗಳ ಪರ್ಸ್ ಬಗ್ಗೆಯೂ ಬಿಗ್ ಅಪ್​ಡೇಟ್ ಹೊರಬಿದ್ದಿದ್ದು, ಮಾಧ್ಯಮ ವರದಿಗಳ ಪ್ರಕಾರ ಪ್ರತಿ ತಂಡದ ಬಳಿ ಉಳಿದಿರುವ ಪರ್ಸ್​ಗೆ ಹೆಚ್ಚುವರಿಯಾಗಿ ಖರ್ಚು ಮಾಡಲು 5 ಕೋಟಿ ರೂ. ನೀಡಲಾಗುವುದು.

ಇದನ್ನೂ ಓದಿ: Ind vs Eng: ಸೆಮಿಫೈನಲ್​ಗೆ ಹಿಟ್​ಮ್ಯಾನ್ ಫಿಟ್; ಪಂತ್- ಕಾರ್ತಿಕ್ ಯಾರಿಗೆ ತಂಡದಲ್ಲಿ ಸ್ಥಾನ?

ನವೆಂಬರ್ 15 ಕೊನೆಯ ದಿನಾಂಕ

ಎಲ್ಲಾ 10 ಫ್ರಾಂಚೈಸಿಗಳು ಪ್ರಸ್ತುತ ಬಿಸಿಸಿಐ ನೀಡಿದ ಗಡುವಿನ ಮೇಲೆ ಕಾರ್ಯನಿರ್ವಹಿಸುತ್ತಿವೆ. ವಾಸ್ತವವಾಗಿ, ಯಾವ ಆಟಗಾರರನ್ನು ತಂಡದಲ್ಲಿ ಇರಿಸಿಕೊಳ್ಳಬೇಕು ಮತ್ತು ಯಾರನ್ನು ಬಿಡುಗಡೆ ಮಾಡಬೇಕು ಎಂಬ ಪಟ್ಟಿಯನ್ನು ನವೆಂಬರ್ 15 ರೊಳಗೆ ಫ್ರಾಂಚೈಸಿಗಳು ಮಂಡಳಿಗೆ ನೀಡಬೇಕು. ಅಂದರೆ, ಫ್ರಾಂಚೈಸಿಗಳು ತಮ್ಮ ಪಟ್ಟಿಯನ್ನು ಸಲ್ಲಿಸಲು ಕೇವಲ ಒಂದು ವಾರ ಮಾತ್ರ ಉಳಿದಿದೆ.

4 ತಂಡಗಳಲ್ಲಿ ಭಾರಿ ಗೊಂದಲ

ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್‌ನ ಕ್ಯಾಂಪ್‌ಗಳಿಂದ ಉಳಿಸಿಕೊಂಡಿರುವ ಆಟಗಾರರ ಬಗ್ಗೆ ವರದಿಗಳು ಕೇಳಿಬರುತ್ತಿವೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಬಗ್ಗೆ ಸಾಕಷ್ಟು ಮಾತನಾಡಲಾಗುತ್ತಿದೆ. ಐಪಿಎಲ್‌ನ ಎರಡನೇ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಮಿನಿ ಹರಾಜಿಗೂ ಮುನ್ನ ರವೀಂದ್ರ ಜಡೇಜಾ ಅವರನ್ನು ತಂಡದಿಂದ ಬಿಡುಗಡೆ ಮಾಡಲು ಯೋಜಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈ ಮಧ್ಯೆ ಎಂಎಸ್ ಧೋನಿ ಜಡೇಜಾರನ್ನು ತಮ್ಮಲ್ಲಿಯೇ ಉಳಿಸಿಕೊಳ್ಳಲು ಫ್ರಾಂಚೈಸಿ ಬಳಿ ಮನವಿ ಇಟ್ಟಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:23 pm, Wed, 9 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ