AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs GT Head To Head: ಬಲಿಷ್ಠರ ನಡುವೆ ಕಾಳಗ; ಮುಖಾಮುಖಿಯಲ್ಲಿ ಯಾರು ಬೆಸ್ಟ್?

MI vs GT Head To Head: ಐಪಿಎಲ್​ನಲ್ಲಿ ಮುಂಬೈ ಮತ್ತು ಗುಜರಾತ್ ಇದುವರೆಗೆ ಎರಡು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ ಮತ್ತು ಗುಜರಾತ್ ತಲಾ 1 ಪಂದ್ಯ ಗೆದ್ದಿವೆ.

MI vs GT Head To Head: ಬಲಿಷ್ಠರ ನಡುವೆ ಕಾಳಗ; ಮುಖಾಮುಖಿಯಲ್ಲಿ ಯಾರು ಬೆಸ್ಟ್?
ಮುಂಬೈ- ಗುಜರಾತ್ ಮುಖಾಮುಖಿ
ಪೃಥ್ವಿಶಂಕರ
|

Updated on: May 11, 2023 | 6:30 PM

Share

ಐಪಿಎಲ್ 16ನೇ (IPL 2023) ಸೀಸನ್​ನ 57ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (Mumbai Indians vs Gujarat Titans) ತಂಡವನ್ನು ಎದುರಿಸಲಿದೆ. ಶುಕ್ರವಾರ, ಮೇ 12 ರಂದು ಈ ಎರಡು ತಂಡಗಳು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಮುಖಾಮುಖಿಯಾಗಲಿವೆ. ಈ ಆವೃತ್ತಿಯಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಗೆ. ಇದಕ್ಕೂ ಮುನ್ನ ಏಪ್ರಿಲ್ 25 ರಂದು ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಗುಜರಾತ್ ಚೊಚ್ಚಲ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಮುಂಬೈ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಅಖಾಡಕ್ಕಿಳಿಯಲಿದೆ.

ಹೆಡ್ ಟು ಹೆಡ್ ರೆಕಾರ್ಡ್

ಐಪಿಎಲ್​ನಲ್ಲಿ ಮುಂಬೈ ಮತ್ತು ಗುಜರಾತ್ ಇದುವರೆಗೆ ಎರಡು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ ಮತ್ತು ಗುಜರಾತ್ ತಲಾ 1 ಪಂದ್ಯ ಗೆದ್ದಿವೆ. ಇನ್ನು ಈ ಎರಡೂ ತಂಡಗಳ ಬಲಾಬಲ ನೋಡುವುದಾದರೆ ಮುಂಬೈನ ಬೌಲಿಂಗ್ ವಿಭಾಗ ದುರ್ಬಲ ಭಾಗವಾಗಿದೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ಗುಜರಾತ್ ತಂಡದ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಪೇಪರ್​ನಲ್ಲಿ ಸಮಾನವಾಗಿರುವ ಉಭಯ ತಂಡಗಳ ನಡುವೆ ಶುಕ್ರವಾರ ಜಿದ್ದಾಜಿದ್ದಿನ ಹೋರಾಟ ಕಾಣಬಹುದಾಗಿದೆ.

IPL 2023: ಐಪಿಎಲ್ ನಡುವೆ ಸಿಹಿ ಸುದ್ದಿ ನೀಡಿದ ಗ್ಲೆನ್ ಮ್ಯಾಕ್ಸ್​ವೆಲ್ ದಂಪತಿಗಳು

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಕ್ಯಾಮರೂನ್ ಗ್ರೀನ್, ಜೇ ರಿಚರ್ಡ್ಸನ್, ಪಿಯೂಷ್ ಚಾವ್ಲಾ, ಡ್ವೇನ್ ಯಾನ್ಸನ್, ಶಾಮ್ಸ್ ಮುಲಾನಿ, ರಾಘವ್ ಗೋಯಲ್, ವಿಷ್ಣು ವಿನೋದ್, ನೆಹಾಲ್ ವಧೇರಾ, ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕಿನ್ , ಬೆಹ್ರೆನ್‌ಡಾರ್ಫ್, ಅರ್ಜುನ್ ತೆಂಡೂಲ್ಕರ್, ಆಕಾಶ್ ಮಧ್ವಲ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೇವಾಲ್ಡ್ ಬ್ರೂಯಿಸ್, ಕ್ರಿಸ್ ಜೋರ್ಡಾನ್ ಮತ್ತು ಸಂದೀಪ್ ವಾರಿಯರ್.

ಗುಜರಾತ್ ಟೈಟಾನ್ಸ್ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜಯಂತ್ ಯಾದವ್, ಜೋಶ್ ಲಿಟಲ್, ಶಿವಂ ಮಾವಿ, ಸಾಯಿ ಕಿಶೋರ್, ಶ್ರೀಕರ್ ಭರತ್, ಸಾಯಿ ಸುದರ್ಶನ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶನಕ, ಓಡಿಯನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್ ಮತ್ತು ಯಶ್ ದಯಾಳ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ