AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ಗೆ ಮತ್ತೆ ಕೋವಿಡ್​ ಭೀತಿ..!

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023: ಐಪಿಎಲ್​ಗೆ ಮತ್ತೆ ಕೋವಿಡ್​ ಭೀತಿ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 19, 2023 | 4:09 PM

Share

IPL 2023: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಐಪಿಎಲ್ ಆಡಳಿತ ಮಂಡಳಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳಲ್ಲಿ ಮುಖ್ಯವಾಗಿ ಉಲ್ಲೇಖಿಸಿರುವುದು ಕೋವಿಡ್​ಗೆ ಸಂಬಂಧಿಸಿದ ನಿಯಮಗಳು ಎಂಬುದು ವಿಶೇಷ. ಅಂದರೆ ಈ ಬಾರಿಯ ಕೊರೋನಾ ಭೀತಿಯಿಲ್ಲದೆ ಐಪಿಎಲ್ ಆಯೋಜಿಸಲು ಮುಂದಾಗಿದ್ದ ಬಿಸಿಸಿಐಗೆ ಇದೀಗ ಕೋವಿಡ್ ಭಯ ಶುರುವಾಗಿದೆ. ಇದಕ್ಕಾಗಿ ಆಟಗಾರರಿಗೆ ವಿಶೇಷ ವೈದ್ಯಕೀಯ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಐಪಿಎಲ್​ ವೇಳೆ ಯಾವುದಾದರು ಆಟಗಾರನು ಕೋವಿಡ್ ಪಾಸಿಟಿವ್ ಆದರೆ ಕೂಡಲೇ ತಂಡವನ್ನು ತೊರೆಯಬೇಕು. ಅಲ್ಲದೆ ಒಂದು ವಾರಗಳ ಕಾಲ ಕ್ವಾರಂಟೈನ್​ನಲ್ಲಿರಬೇಕಾಗುತ್ತದೆ. ಈ ನಿಯಮಗಳನ್ನು ಎಲ್ಲಾ ಫ್ರಾಂಚೈಸಿಗಳು ಕಡ್ಡಾಯವಾಗಿ ಪಾಲಿಸಬೇಕೆಂದು ತಿಳಿಸಲಾಗಿದೆ.

ಭಾರತದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದರೂ, ವಿಭಿನ್ನ ರೂಪಾಂತರ ವೈರಸ್​ಗಳ ಬಗ್ಗೆ ಎಚ್ಚರಿಕೆಯಿಂದರಲು ಈ ನಿಯಮಗಳನ್ನು ರೂಪಿಸಲಾಗಿದೆ. ಹೀಗಾಗಿಯೇ ಈ ಹಿಂದಿನಂತೆ ಕೊರೋನಾ ಸೋಂಕು ತಗುಲಿದ ಆಟಗಾರರನ್ನು ಗರಿಷ್ಠ ಏಳು ದಿನಗಳವರೆಗೆ ಪತ್ಯೇಕವಾಗಿ ಇರಿಸಲಾಗುತ್ತದೆ. ಈ ಕ್ವಾರಂಟೈನ್​ ಅವಧಿಯಲ್ಲಿ ಸೋಂಕು ತಗುಲಿರುವ ಆಟಗಾರನು ತಂಡದೊಂದಿಗಿನ ಎಲ್ಲಾ ಚಟುವಟಿಕೆಗಳು ಮತ್ತು ಈವೆಂಟ್‌ಗಳಿಂದ ದೂರವಿರಬೇಕು ಎಂದು ತಿಳಿಸಲಾಗಿದೆ.

ಇನ್ನು ಕೋವಿಡ್ ಪಾಸಿಟಿವ್ ಆದ ಆಟಗಾರನ ಟೆಸ್ಟ್ ರಿಪೋರ್ಟ್​ ಐದನೇ ದಿನಗಳಲ್ಲಿ ನೆಗೆಟಿವ್ ಬಂದರೆ, ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ. 24 ಗಂಟೆಯೊಳಗೆ ನಡೆಯಲಿರುವ ಎರಡನೇ ಟೆಸ್ಟ್ ವರದಿಯು ನೆಗೆಟಿವ್ ಬಂದರೆ, ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಅಂದರೆ ಕೋವಿಡ್ ಪಾಸಿಟಿವ್ ಆದರೆ 5 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದೆ.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕಳೆದ ಮೂರು ಸೀಸನ್ ಐಪಿಎಲ್​ ಅನ್ನು ವಿವಿಧ ನಗರಗಳಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರು ವರ್ಷಗಳ ಆಯಾ ತಂಡಗಳ ಹೋಮ್​ ಗ್ರೌಂಡ್​ನಲ್ಲಿ ಐಪಿಎಲ್ ಪಂದ್ಯಗಳು ನಡೆಯುತ್ತಿದೆ. ಹೀಗಾಗಿಯೇ ಕ್ರಿಕೆಟ್ ಪ್ರೇಮಿಗಳು ಕೂಡ ತಮ್ಮ ತಂಡಗಳಿಗೆ ಬೆಂಬಲ ವ್ಯಕ್ತಪಡಿಸಲು ಸ್ಟೇಡಿಯಂಗೆ ಆಗಮಿಸಲಿದ್ದಾರೆ. ಇತ್ತ ದೇಶದಲ್ಲಿ ಕೋವಿಡ್‌ ಉಪತಳಿ XBB1.16 ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಬಿಸಿಸಿಐ ಐಪಿಎಲ್ ಆಟಗಾರರಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಐಪಿಎಲ್ ಆರಂಭಕ್ಕೆ ದಿನಗಣನೆ:

ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯು ಮಾರ್ಚ್ 31 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದ್ದು,  ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಲಿಸಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ