AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೃಷ್ಟಿಯಾಗಲ್ಲಿರುವ ಪ್ರಮುಖ 8 ದಾಖಲೆಗಳಿವು

IPL 2023: ಇನ್ನು ಕ್ವಾಲಿಫೈಯರ್-1ರಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ತಲುಪಲಿದೆ. ಅದೇ ಸಮಯದಲ್ಲಿ, ಸೋತ ತಂಡಕ್ಕೆ ಫೈನಲ್ ತಲುಪಲು ಮತ್ತೊಂದು ಅವಕಾಶ ಸಿಗುತ್ತದೆ.

IPL 2023: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೃಷ್ಟಿಯಾಗಲ್ಲಿರುವ ಪ್ರಮುಖ 8 ದಾಖಲೆಗಳಿವು
ಗುಜರಾತ್- ಚೆನ್ನೈ ಮುಖಾಮುಖಿ
ಪೃಥ್ವಿಶಂಕರ
|

Updated on: May 22, 2023 | 10:18 PM

Share

ಐಪಿಎಲ್-2023ರ (IPL 2023) ಲೀಗ್ ಹಂತ ಮುಗಿದಿದೆ. ಈಗ ಪ್ಲೇಆಫ್‌ನ ಸರದಿ. ಮಂಗಳವಾರದಿಂದ ಪ್ಲೇಆಫ್‌ ಪಂದ್ಯಗಳು ಆರಂಭವಾಗಲಿವೆ. ನಾಲ್ಕು ತಂಡಗಳು ಈಗಾಗಲೇ ಪ್ಲೇ ಆಫ್​ಗೆ ತಲುಪಿದ್ದು, ಪ್ರಸ್ತುತ ವಿಜೇತ ಗುಜರಾತ್ ಟೈಟಾನ್ಸ್ ಮತ್ತು ನಾಲ್ಕು ಬಾರಿ ವಿಜೇತ ಚೆನ್ನೈ ಸೂಪರ್ ಕಿಂಗ್ಸ್ (Gujarat Titans and Chennai Super Kings) ಹೊರತುಪಡಿಸಿ, ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (Mumbai Indians and Lucknow Super Giants) ತಂಡಗಳು ಸಹ ಪ್ಲೇ ಆಫ್ ತಲುಪಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಚೆನ್ನೈ ಮತ್ತು ಗುಜರಾತ್ ನಡುವೆ ನಡೆಯಲಿದ್ದು, ಈ ಪಂದ್ಯದಲ್ಲಿ ಉಭಯ ತಂಡಗಳ ಕೆಲವು ಆಟಗಾರರು ದಾಖಲೆ ಬರೆಯುವ ಹೊಸ್ತಿಲಿನಲ್ಲಿದ್ದಾರೆ.

ಇನ್ನು ಕ್ವಾಲಿಫೈಯರ್-1ರಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ತಲುಪಲಿದೆ. ಅದೇ ಸಮಯದಲ್ಲಿ, ಸೋತ ತಂಡಕ್ಕೆ ಫೈನಲ್ ತಲುಪಲು ಮತ್ತೊಂದು ಅವಕಾಶ ಸಿಗುತ್ತದೆ. ಈ ತಂಡ ಕ್ವಾಲಿಫೈಯರ್-2ರಲ್ಲಿ ಎಲಿಮಿನೇಟರ್ ಪಂದ್ಯದ ವಿಜೇತ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್‌ಗೆ ತಲುಪಲಿದೆ.

IPL 2023, GT vs CSK Live Streaming: ಕ್ವಾಲಿಫೈಯರ್ 1 ಪಂದ್ಯ ಯಾವಾಗ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ಮಾಹಿತಿ

ದಾಖಲೆ ಬರೆಯಲ್ಲಿರುವ ಆಟಗಾರರ ಪಟ್ಟಿ ಹೀಗಿದೆ.

  1. ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ತಮ್ಮ ತಂಡವನ್ನು ಪ್ರಶಸ್ತಿ ಪಡೆಯಲು ಪ್ರಯತ್ನಿಸಲಿದ್ದಾರೆ. ಚೆನ್ನೈ ವಿರುದ್ಧದ ಕ್ವಾಲಿಫೈಯರ್ ಪಂದ್ಯದಲ್ಲಿ ಪಾಂಡ್ಯ ಇನ್ನೆರಡು ವಿಕೆಟ್ ಪಡೆದರೆ ಟಿ20ಯಲ್ಲಿ 150 ವಿಕೆಟ್ ಪೂರೈಸಲಿದ್ದಾರೆ.
  2. ಚೆನ್ನೈ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ ಇನ್ನೂ ಎರಡು ಸಿಕ್ಸರ್‌ಗಳನ್ನು ಬಾರಿಸಿದರೆ, ಐಪಿಎಲ್‌ನಲ್ಲಿ 100 ಸಿಕ್ಸರ್‌ಗಳನ್ನು ಪೂರ್ಣಗೊಳಿಸಲ್ಲಿದ್ದಾರೆ.
  3. ಅಲ್ಲದೆ ಜಡೇಜಾ ಇನ್ನೂ ಒಂದು ವಿಕೆಟ್ ಪಡೆದರೆ, ಐಪಿಎಲ್‌ನಲ್ಲಿ 150 ವಿಕೆಟ್‌ಗಳನ್ನು ಪೂರೈಸಿದ ದಾಖಲೆಯನ್ನು ಬರೆಯಲ್ಲಿದ್ದಾರೆ.
  4. ಚೆನ್ನೈ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಟಿ20 ಕ್ರಿಕೆಟ್‌ನಲ್ಲಿ 6000 ರನ್ ಪೂರೈಸಲು ಎಂಟು ರನ್‌ಗಳ ಅಂತರದಲ್ಲಿದ್ದಾರೆ. ಇದಲ್ಲದೆ, ರಾಯುಡು ಐದು ಬೌಂಡರಿಗಳನ್ನು ಬಾರಿಸಿದರೆ, ಟಿ20 ಕ್ರಿಕೆಟ್‌ನಲ್ಲಿ 500 ಬೌಂಡರಿಗಳನ್ನು ಪೂರ್ಣಗೊಳಿಸುತ್ತಾರೆ.
  5. ಚೆನ್ನೈನ ಅಜಿಂಕ್ಯ ರಹಾನೆ ಕೂಡ ಟಿ20 ಕ್ರಿಕೆಟ್‌ನಲ್ಲಿ 6000 ರನ್ ಪೂರೈಸಲು 78 ರನ್‌ಗಳ ಅಂತರದಲ್ಲಿದ್ದಾರೆ.
  6. ಗುಜರಾತ್‌ನ ಇನ್ ಫಾರ್ಮ್ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ ಇನ್ನೂ 41 ರನ್ ಬಾರಿಸಿದರೆ ಟಿ20 ಮಾದರಿಯಲ್ಲಿ 3500 ರನ್ ಪೂರ್ಣಗೊಳಿಸುತ್ತಾರೆ. ಇನ್ನು ಎಂಟು ಬೌಂಡರಿಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್‌ನಲ್ಲಿ 350 ಬೌಂಡರಿಗಳನ್ನು ಪೂರೈಸಲಿದ್ದಾರೆ.
  7. ಹಾಗೆಯೇ ಗುಜರಾತ್‌ನ ಅಲ್ಜಾರಿ ಜೋಸೆಫ್ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೆ 99 ವಿಕೆಟ್‌ಗಳನ್ನು ಪಡೆದಿದ್ದು, ಇನ್ನು ಒಂದು ವಿಕೆಟ್ ಪಡೆದರೆ ವಿಕೆಟ್​ಗಳ ಶತಕ ಬಾರಿಸಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ