AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: CSK ಕೊನೆಯ ಕಸರತ್ತು: ಮಿನಿ ಹರಾಜಿನತ್ತ ರವೀಂದ್ರ ಜಡೇಜಾ

IPL 2023 Retention: ಇತರೆ ಫ್ರಾಂಚೈಸಿಗಳು ಕೂಡ ಸಿಎಸ್​ಕೆ ತಂಡದಿಂದ ಜಡೇಜಾ ಹೊರಬರುವುದನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಹರಾಜಿನಲ್ಲಿ ಕಾಣಿಸಿಕೊಂಡರೆ ಎಡಗೈ ಆಲ್​ರೌಂಡರ್ ಕೋಟಿ ಮೊತ್ತಕ್ಕೆ ಬಿಕರಿಯಾಗುವುದರಲ್ಲಿ ಅನುಮಾನವೇ ಇಲ್ಲ.

IPL 2023: CSK ಕೊನೆಯ ಕಸರತ್ತು: ಮಿನಿ ಹರಾಜಿನತ್ತ ರವೀಂದ್ರ ಜಡೇಜಾ
Ravindra Jadeja
TV9 Web
| Edited By: |

Updated on: Oct 17, 2022 | 7:55 PM

Share

IPL 2023: ಐಪಿಎಲ್ ಸೀಸನ್ 16 ಸಿದ್ಧತೆಗಳು ಶುರುವಾದ ಬೆನ್ನಲ್ಲೇ ಇದೀಗ ಯಾವ ಫ್ರಾಂಚೈಸಿ ಯಾರನ್ನು ತಂಡದಲ್ಲೇ ಉಳಿಸಿ ಯಾರನ್ನು ಬಿಡುಗಡೆ ಮಾಡಲಿದೆ  ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ನವೆಂರ್ 15 ರೊಳಗೆ ಎಲ್ಲಾ ತಂಡಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕೆಂದು ಐಪಿಎಲ್ ಆಡಳಿತ ಮಂಡಳಿ ಸೂಚಿಸಿದೆ. ಇದರ ಬೆನ್ನಲ್ಲೇ ರವೀಂದ್ರ ಜಡೇಜಾ ಅವರ ನಡೆಯೇನು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.  ಏಕೆಂದರೆ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬುದು ಈ ಹಿಂದೆಯೇ ಸುದ್ದಿಯಾಗಿತ್ತು. ಇದನ್ನು ಪುಷ್ಠೀಕರಿಸುವಂತೆ ಅವರು ಕೂಡ ಸಿಎಸ್​ಕೆ ತಂಡವನ್ನು ಪ್ರತಿನಿಧಿಸುವ ತಮ್ಮೆಲ್ಲಾ ಪೋಸ್ಟ್​ಗಳನ್ನು ಸೋಷಿಯಲ್ ಮೀಡಿಯಾದಿಂದ ಅಳಿಸಿ ಹಾಕಿದ್ದರು. ಹೀಗಾಗಿಯೇ ರವೀಂದ್ರ ಜಡೇಜಾ ಸಿಎಸ್​ಕೆ ತಂಡದಲ್ಲೇ ಉಳಿದುಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.

ಇತ್ತ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸಲು ದಿನಾಂಕ ನಿಗದಿಯಾಗುತ್ತಿದ್ದಂತೆ ಸಿಎಸ್​ಕೆ ಫ್ರಾಂಚೈಸಿಯು ಜಡೇಜಾ ಅವರ ಮನವೊಲಿಸಲು ಕಸರತ್ತು ನಡೆಸಲು ಮುಂದಾಗಿದೆ ಎಂದು ವರದಿಯಾಗಿದೆ. ಏಕೆಂದರೆ ಜಡೇಜಾ ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಇದೇ ವೇಳೆ ಅವರ ಮನವೊಲಿಸಿ ತಂಡದಲ್ಲೇ ಉಳಿಸಿಕೊಳ್ಳಲು ಸಿಎಸ್​ಕೆ ಫ್ರಾಂಚೈಸಿ ತೆರೆಮರೆಯ ಪ್ರಯತ್ನಕ್ಕೆ ಕೈಹಾಕಿದೆ.

ನಾಯಕತ್ವ ತೊರೆದಿದ್ದ ಜಡ್ಡು:

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಐಪಿಎಲ್​ ಸೀಸನ್​ 15 ನಲ್ಲಿ ಸಿಎಸ್​ಕೆ ಫ್ರಾಂಚೈಸಿ ಜಡೇಜಾರನ್ನು ನಾಯಕರಾಗಿ ಆಯ್ಕೆ ಮಾಡಿಕೊಂಡಿತು. ಆದರೆ ತಂಡದ ಕಳಪೆ ಪ್ರದರ್ಶನದ ನಂತರ ಅವರು ನಾಯಕತ್ವವನ್ನು ತೊರೆದರು. ಇದಾದ ಬಳಿಕ ಎಂಎಸ್ ಧೋನಿ ಮತ್ತೆ ತಂಡವನ್ನು ಮುನ್ನಡೆಸಿದರು. ಆದರೆ ನಾಯಕತ್ವ ತೊರೆದ ಬಳಿಕ ಜಡೇಜಾ ಗಾಯದ ಕಾರಣ ಸಂಪೂರ್ಣ ಟೂರ್ನಿಯನ್ನು ಆಡಿರಲಿಲ್ಲ. ಇದೀಗ ಜಡೇಜಾ ಹಾಗೂ ಸಿಎಸ್​ಕೆ ಫ್ರಾಂಚೈಸಿ ಮುನಿಸಿಕೊಂಡಿರುವುದು ಸ್ಪಷ್ಟವಾಗಿದೆ.

ಏಕೆಂದರೆ ರವೀಂದ್ರ ಜಡೇಜಾ ಮತ್ತು ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಐಪಿಎಲ್ 2022 ರ ಬಳಿಕ ಪರಸ್ಪರ ಸಂಪರ್ಕದಲ್ಲಿಲ್ಲ. ಐಪಿಎಲ್ 15ನೇ ಸೀಸನ್ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಸಿಎಸ್​ಕೆ ತಂಡಕ್ಕೆ ಸಂಬಂಧಿಸಿದ ಪೋಸ್ಟ್​ಗಳನ್ನು ಜಡೇಜಾ ಡಿಲೀಟ್ ಕೂಡ ಮಾಡಿದ್ದರು. ಇದೀಗ ಸಿಎಸ್​ಕೆ ಫ್ರಾಂಚೈಸಿ ಜೊತೆ ಜಡ್ಡು ಯಾವುದೇ ಸಂಪರ್ಕದಲ್ಲಿ ಇರದ ಕಾರಣ ತಂಡವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.

16 ಕೋಟಿಗೆ ಬಿಗ್ ಡೀಲ್:

ಐಪಿಎಲ್2022 ರ ಮೆಗಾ ಹರಾಜಿಗೂ ಮುನ್ನ ಸಿಎಸ್‌ಕೆ ರವೀಂದ್ರ ಜಡೇಜಾ ಅವರನ್ನು ಗರಿಷ್ಠ 16 ಕೋಟಿ ರೂ.ಗೆ ಉಳಿಸಿಕೊಂಡಿತ್ತು. ಮತ್ತೊಂದೆಡೆ ಎಂಎಸ್ ಧೋನಿ ಪಡೆದದ್ದು ಕೇವಲ 12 ಕೋಟಿ ರೂ. ಮಾತ್ರ. ಧೋನಿ ಅವರೇ ತಮ್ಮ ಸಂಭಾವನೆ ಕಡಿಮೆ ಮಾಡುವಂತೆ ಕೇಳಿಕೊಂಡಿದ್ದರು. ಅಷ್ಟೇ ಅಲ್ಲದೆ ತಂಡದ ದುಬಾರಿ ಆಟಗಾರ ಜಡೇಜಾ ಅವರಿಗೆ ನಾಯಕನ ಪಟ್ಟ ಕೂಡ ನೀಡಲಾಗಿತ್ತು.

ಆದರೆ ಟೂರ್ನಿಯ ನಡುವೆ ಜಡೇಜಾ ಹಾಗೂ ಸಿಎಸ್​ಕೆ ಮ್ಯಾನೇಜ್ಮೆಂಟ್ ನಡುವೆ ಅಹಿತಕರ ಘಟನೆಗಳು ನಡೆದಿವೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಜಡೇಜಾ ನಾಯಕತ್ವವನ್ನು ತೊರೆದಿದ್ದರು. ಅಷ್ಟೇ ಅಲ್ಲದೆ ಆ ಬಳಿಕ ತಂಡದಿಂದ ಹೊರಗುಳಿದ ಜಡ್ಡು ಸಿಎಸ್​ಕೆ ಜೊತೆಗೆ ಯಾವುದೇ ಸಂಪರ್ಕದಲ್ಲಿಲ್ಲ. ಇದೀಗ ಜಡೇಜಾ ಅವರ ಮನವೊಲಿಸಲು ಸಿಎಸ್​ಕೆ ಮುಂದಾಗಿದೆ ಎಂದು ವರದಿಯಾಗಿದೆ. ಈ ಮೂಲಕ ಸ್ಟಾರ್ ಆಟಗಾರನನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲೇ ಉಳಿಸಿಕೊಳ್ಳಲು ಕೊನೆಯ ಪ್ರಯತ್ನಕ್ಕೆ ಕೈಹಾಕಿದೆ.

ಇತ್ತ ಸಿಎಸ್​ಕೆ ಫ್ರಾಂಚೈಸಿ ರವೀಂದ್ರ ಜಡೇಜಾರನ್ನು ತಂಡದಲ್ಲೇ ಉಳಿಸಿಕೊಳ್ಳಲು ಬಯಸಿದರೂ ಅವರು ಅದರ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದಾಗಿ ಸಿಎಸ್​ಕೆ ಮ್ಯಾನೇಜ್ಮೆಂಟ್ ಜೊತೆಗಿನ ಎಲ್ಲಾ ರೀತಿಯ ಸಂಪರ್ಕಗಳನ್ನು ಅವರು ಕಡಿದುಕೊಂಡಿದ್ದಾರು.

ಹೀಗಾಗಿ ರವೀಂದ್ರ ಜಡೇಜಾ ಮುಂದಿನ ಐಪಿಎಲ್​ಗಾಗಿ ಮಿನಿ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದೇ ಈಗ ಕೌತುಕವಾಗಿದೆ.  ಇತ್ತ ಇತರೆ ಫ್ರಾಂಚೈಸಿಗಳು ಕೂಡ ಸಿಎಸ್​ಕೆ ತಂಡದಿಂದ ಜಡೇಜಾ ಹೊರಬರುವುದನ್ನು ಎದುರು ನೋಡುತ್ತಿದ್ದಾರೆ. ಹೀಗಾಗಿ ಹರಾಜಿನಲ್ಲಿ ಕಾಣಿಸಿಕೊಂಡರೆ ಎಡಗೈ ಆಲ್​ರೌಂಡರ್ ಕೋಟಿ ಮೊತ್ತಕ್ಕೆ ಬಿಕರಿಯಾಗುವುದರಲ್ಲಿ ಅನುಮಾನವೇ ಇಲ್ಲ.

ಐಪಿಎಲ್​ನ ಸ್ಟಾರ್ ಆಟಗಾರ:

ಐಪಿಎಲ್​ನಲ್ಲಿ ಇದುವರೆಗೆ 210 ಪಂದ್ಯಗಳನ್ನು ಆಡಿರುವ ಜಡೇಜಾ 132 ವಿಕೆಟ್ ಪಡೆದಿದ್ದಾರೆ. 16 ರನ್‌ಗೆ 5 ವಿಕೆಟ್ ಪಡೆದದ್ದು ಅತ್ಯುತ್ತಮ ಪ್ರದರ್ಶನ. ಹಾಗೆಯೇ 2502 ರನ್ ಕೂಡ ಗಳಿಸಿದ್ದಾರೆ. ಈ ವೇಳೆ 2 ಅರ್ಧಶತಕಗಳನ್ನು ಬಾರಿಸಿದ್ದರು. ಅಂದರೆ 100 ಕ್ಕೂ ಅಧಿಕ ವಿಕೆಟ್ ಹಾಗೂ 2 ಸಾವಿರಕ್ಕೂ ಅಧಿಕ ರನ್​ ಕಲೆಹಾಕುವ ಮೂಲಕ ರವೀಂದ್ರ ಜಡೇಜಾ ಐಪಿಎಲ್​ನಲ್ಲಿ ಪರಿಪೂರ್ಣ ಆಲ್​ರೌಂಡರ್ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಸಿಎಸ್​ಕೆ ತಂಡದಿಂದ ಜಡೇಜಾ ಹೊರಬಂದರೆ 9 ಫ್ರಾಂಚೈಸಿಗಳು ಟೀಮ್ ಇಂಡಿಯಾ ಆಲ್​ರೌಂಡರ್​ನ ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ಖಚಿತ.

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!