AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ? ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತಾ?

IPL 2023: ಐಪಿಎಲ್ ಸಮಯದಲ್ಲಿ ಯಾವುದೇ ಆಟಗಾರ ವಿರಾಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.

IPL 2023: ಐಪಿಎಲ್​ನಲ್ಲಿ ಟೀಂ ಇಂಡಿಯಾ ಆಟಗಾರರಿಗೆ ವಿಶ್ರಾಂತಿ? ರೋಹಿತ್ ಶರ್ಮಾ ಹೇಳಿದ್ದೇನು ಗೊತ್ತಾ?
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Mar 23, 2023 | 11:58 AM

Share

ಮುಖ್ಯಾಂಶಗಳು

  • ಐಪಿಎಲ್ ಸಮಯದಲ್ಲಿ ಯಾವುದೇ ಆಟಗಾರ ವಿರಾಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ.
  • ಐಪಿಎಲ್​ನಲ್ಲಿ ಪ್ರತಿಯೊಂದು ತಂಡವೂ ಲೀಗ್ ಸುತ್ತಿನಲ್ಲಿ ತಲಾ 14 ಪಂದ್ಯಗಳನ್ನು ಆಡಬೇಕಿದ್ದು, ಆಯಾಸ ಖಚಿತ.
  • ಮಾರ್ಚ್​ 31ರಿಂದ ಐಪಿಎಲ್ ಆರಂಭವಾಗುತ್ತಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿ ಮುಗಿಸಿರುವ ಟೀಂ ಇಂಡಿಯಾ (India Vs Australia) ಆಟಗಾರರು ಇದೀಗ ಐಪಿಎಲ್​ಗೆ (IPL) ತಯಾರಿ ಆರಂಭಿಸಿದ್ದಾರೆ. ಇದೇ ತಿಂಗಳ ಅಂತ್ಯದಿಂದ ಅಂದರೆ, ಮಾರ್ಚ್​ 31ರಿಂದ ಐಪಿಎಲ್ ಆರಂಭವಾಗುತ್ತಿದೆ. ಆದರೆ ಈ ನಡುವೆ ಹುಟ್ಟಿಕೊಂಡಿದ್ದ ವದಂತಿಗೆ ಸ್ಪಷ್ಟನೆ ಸಿಕ್ಕಿದ್ದು, ಆ ವದಂತಿಗೆ ನಾಯಕ ರೋಹಿತ್ ಶರ್ಮಾ (Rohit Sharma) ತೆರೆ ಎಳೆದಿದ್ದಾರೆ. ಅದೆನೇಂದರೆ ಐಪಿಎಲ್ ನಂತರ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (World Test Championship) ಹಾಗೂ ಏಕದಿನ ವಿಶ್ವಕಪ್ (ODI World Cup) ಆಡಬೇಕು. ಹೀಗಾಗಿ ಕೆಲಸದ ಹೊರನಿರ್ವಹಣೆಯನ್ನು ಗಮದಲ್ಲಿಟ್ಟುಕೊಂಡು ಟೀಂ ಇಂಡಿಯಾದ ಪ್ರಮುಖ ಆಟಗಾರರಿಗೆ ಐಪಿಎಲ್​ ಪಂದ್ಯಗಳ ನಡುವೆ ವಿರಾಮ ನೀಡಲು ಬಿಸಿಸಿಐ ಚಿಂತಿಸುತ್ತಿದೆ ಎಂಬ ಸುದ್ದಿ ಹರಿದಾಡಲಾರಂಭಿಸಿತ್ತು. ಆದರೆ ಇದೀಗ ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ, ಹಾಗಾಗುವ ಸಾಧ್ಯತೆಗಳಿಲ್ಲ ಎಂದಿದ್ದಾರೆ.

ಭಾರತ ಈ ವರ್ಷ ಏಕದಿನ ವಿಶ್ವಕಪ್‌ಗೆ ಆತಿಥ್ಯ ವಹಿಸುತ್ತಿದೆ. ಕಳೆದ ಬಾರಿ ಭಾರತದಲ್ಲಿ ವಿಶ್ವಕಪ್ ನಡೆದಾಗ ಟೀಂ ಇಂಡಿಯಾ ಚಾಂಪಿಯನ್ ಆಗಿತ್ತು. ಬಿಸಿಸಿಐ ಈ ಬಾರಿಯೂ ತನ್ನ ತಂಡದಿಂದ ಅದೇ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ. ಅಲ್ಲದೆ ಈ ವಿಶ್ವಕಪ್‌ನ ಹೊರತಾಗಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಯಾರಿ ನಡೆಸುವ ಸಲುವಾಗಿ ಮಂಡಳಿ, ಐಪಿಎಲ್ ಫ್ರಾಂಚೈಸಿಗಳ ಬಳಿ ಪ್ರಮುಖ ಆಟಗಾರರ ವಿರಾಮದ ಬಗ್ಗೆ ಮಾತನಾಡಲಿದೆ ಎಂದು ವರದಿಯಾಗಿತ್ತು.

IND vs AUS: ಗೆಲುವಿನ ಟ್ರ್ಯಾಕ್​ನಲ್ಲಿದ್ದ ಭಾರತ ಎಡವಿದ್ದೆಲ್ಲಿ? ತಂಡದ ಸೋಲಿಗೆ ಪ್ರಮುಖ 4 ಕಾರಣಗಳಿವು

ಐಪಿಎಲ್‌ನಿಂದ ವಿರಾಮ ತೆಗೆದುಕೊಳ್ಳುವುದಿಲ್ಲ

ಆದರೆ ಈ ಬಗ್ಗೆ ಮಾತನಾಡಿರುವ ರೋಹಿತ್ ಶರ್ಮಾ , ಆಟಗಾರರು ವಿಶ್ರಾಂತಿ ಪಡೆಯುತ್ತಾರೋ ಇಲ್ಲವೋ ಎಂಬುದು ಅವರ ತಂಡಗಳ ಮೇಲೆ ಅವಲಂಬಿತವಾಗಿರುತ್ತದೆ. ಐಪಿಎಲ್ ಸಮಯದಲ್ಲಿ ಯಾವುದೇ ಆಟಗಾರ ವಿರಾಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುವುದಿಲ್ಲ. ನಾವು ಕೆಲವು ತಂಡಗಳಿಗೆ ಸಲಹೆಗಳನ್ನು ನೀಡಿದ್ದೇವೆ ಆದರೆ ಒಪ್ಪಿಕೊಳ್ಳುವುದು ಅಥವಾ ಬಿಡುವುದು ಫ್ರಾಂಚೈಸಿಗೆ ಬಿಟ್ಟದ್ದು. ಅವರು ಲೀಗ್‌ನಲ್ಲಿ ಆಟಗಾರರ ಮಾಲೀಕರಾಗಿರುವುದರಿಂದ ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಲ್ಲದೆ ಇದು ಆಟಗಾರರ ಮೇಲೆ ಅವಲಂಬಿತವಾಗಿರುತ್ತದೆ. ಪ್ರತಿಯೊಬ್ಬರೂ ಬೆಳೆದಿದ್ದಾರೆ ಮತ್ತು ವಿಷಯಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ನಾವು ಹೆಚ್ಚು ಆಡುತ್ತಿದ್ದೇವೆ ಎಂದು ಅವರು ಭಾವಿಸಿದರೆ ಅವರು 1 ಅಥವಾ 2 ಪಂದ್ಯಗಳ ವಿರಾಮವನ್ನು ತೆಗೆದುಕೊಳ್ಳಬಹುದು ಎಂದು ರೋಹಿತ್ ಹೇಳಿದ್ದಾರೆ.

ತಂಡಗಳಿಗೆ ಸಲಹೆಗಳನ್ನು ನೀಡಿದ ಬಿಸಿಸಿಐ

ಐಪಿಎಲ್​ನಲ್ಲಿ ಪ್ರತಿಯೊಂದು ತಂಡವೂ ಲೀಗ್ ಸುತ್ತಿನಲ್ಲಿ ತಲಾ 14 ಪಂದ್ಯಗಳನ್ನು ಆಡಬೇಕಿದ್ದು, ಆಯಾಸ ಖಚಿತ. ಐಪಿಎಲ್ ಬಳಿಕ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಬೇಕಿದೆ. ಐಪಿಎಲ್‌ನ ಆಯಾಸದಿಂದ ಆಟಗಾರರು ಈ ಮಹತ್ವದ ಪಂದ್ಯಕ್ಕೆ ಅಣಿಯಾಗುವುದು ಕೊಂಚ ತ್ರಾಸದಾಯಕ. ಅಲ್ಲದೆ ಐಪಿಎಲ್‌ನಲ್ಲಿ ಆಡುವ ಟೀಂ ಇಂಡಿಯಾ ಆಟಗಾರರು ಇಂಜುರಿಗೆ ತುತ್ತಾದರೆ, ಅದು ಮುಂದಿನ ಐಸಿಸಿ ಸರಣಿಗಳಲ್ಲಿ ತಂಡದ ಮೇಲೆ ಪರಿಣಾಮ ಬೀರಲಿದೆ. ಈ ಕಾರಣಕ್ಕಾಗಿ, ಬಿಸಿಸಿಐ ಕೆಲವು ಆಟಗಾರರ ಬಗ್ಗೆ ಅವರವರ ತಂಡಗಳಿಗೆ ಸಲಹೆಗಳನ್ನು ನೀಡಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:56 am, Thu, 23 March 23

Follow Us
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು