AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವಾಟ್ ಎ ಕ್ಯಾಚ್…ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಂಜು ಸ್ಯಾಮ್ಸನ್

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (60) ಹಾಗೂ ಜೋಸ್ ಬಟ್ಲರ್ (79) ಸ್ಪೋಟಕ ಆರಂಭ ಒದಗಿಸಿದ್ದರು.

IPL 2023: ವಾಟ್ ಎ ಕ್ಯಾಚ್...ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಂಜು ಸ್ಯಾಮ್ಸನ್
Sanju Samson
TV9 Web
| Edited By: |

Updated on:Apr 09, 2023 | 5:13 AM

Share

ಮುಖ್ಯಾಂಶಗಳು

  • ಗುವಾಹಟಿ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಅದ್ಭುತ ಕ್ಯಾಚ್
  • ಡೆಲ್ಲಿ ಕ್ಯಾಪಿಟಲ್ಸ್-ರಾಜಸ್ಥಾನ್ ರಾಯಲ್ಸ್ ನಡುವಣ ಪಂದ್ಯದಲ್ಲಿ ಮಿಂಚಿದ ಸಂಜು ಸ್ಯಾಮ್ಸನ್
  • ಮೊದಲ ಓವರ್​ನಲ್ಲೇ 2 ವಿಕೆಟ್ ಕಬಳಿಸಿ ಮಿಂಚಿದ ಟ್ರೆಂಟ್ ಬೌಲ್ಡ್

IPL 2023: ಮೊದಲ ಓವರ್​ನಲ್ಲೇ ಮೊದಲ ವಿಕೆಟ್​…ಟ್ರೆಂಟ್ ಬೌಲ್ಟ್ (Trent Boult) ಅವರ ಟ್ರೇಡ್ ಮಾರ್ಕ್​ ಈ ಬಾರಿಯ ಐಪಿಎಲ್​ನಲ್ಲೂ ಮುಂದುವರೆದಿದೆ. ಗುವಾಹಟಿ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಕ್ಕೆ ಆರಂಭಿಕ ಆಘಾತ ನೀಡುವ ಮೂಲಕ ಬೌಲ್ಟ್ ಮತ್ತೊಮ್ಮೆ ಗಮನ ಸೆಳೆದರು. ಆದರೆ ಈ ಬಾರಿ ಮೊದಲ ವಿಕೆಟ್ ಪತನಕ್ಕೆ ಸಾಥ್ ನೀಡಿದ್ದು ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ (Sanju Samson) ಎಂಬುದು ವಿಶೇಷ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (60) ಹಾಗೂ ಜೋಸ್ ಬಟ್ಲರ್ (79) ಸ್ಪೋಟಕ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ಹೆಟ್ಮೆಯರ್ ಕೂಡ 21 ಎಸೆತಗಳಲ್ಲಿ ಅಜೇಯ 39 ರನ್ ಬಾರಿಸಿ ತಂಡದ ಮೊತ್ತವನ್ನು 4 ವಿಕೆಟ್ ನಷ್ಟಕ್ಕೆ 199 ಕ್ಕೆ ತಂದು ನಿಲ್ಲಿಸಿದರು.

200 ರನ್​ಗಳ ಕಠಿಣ ಗುರಿ ಪಡೆದ ಡೆಲ್ಲಿ ಕ್ಯಾಪಿಟಲ್ಸ್ ಪರ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಆರಂಭಿಕರಾಗಿ ಮೈದಾನಕ್ಕಿಳಿದರು. ಸ್ಟ್ರೈಕ್ ತೆಗೆದುಕೊಂಡ ಪೃಥ್ವಿ ಶಾ ಟ್ರೆಂಟ್ ಬೌಲ್ಟ್ ಅವರ ಮೊದಲೆರಡು ಎಸೆತಗಳನ್ನು ಎದುರಿಸಲು ವಿಫಲರಾದರು. ಎಲ್​ಬಿಡಬ್ಲ್ಯೂ ಅನ್ನೇ ಟಾರ್ಗೆಟ್ ಮಾಡಿ ಎಸೆದ ಬೌಲ್ಟ್ ಅವರ ಮೂರನೇ ಎಸೆತವು ಪೃಥ್ವಿ ಶಾ ಅವರ ಬ್ಯಾಟ್ ಸವರಿ ಸ್ಲಿಪ್​ನತ್ತ ಚಿಮ್ಮಿತ್ತು.

ಕ್ಷಣಾರ್ಧದಲ್ಲೇ ಬಲಭಾಗಕ್ಕೆ ಅದ್ಭುತವಾಗಿ ಡೈವ್ ಹೊಡೆದ ಸಂಜು ಸ್ಯಾಮ್ಸನ್ ಒಂದೇ ಕೈಯಲ್ಲಿ ಚೆಂಡನ್ನು ಬಂಧಿಸಿದರು. ಈ ಅತ್ಯದ್ಭುತ ಡೈವಿಂಗ್ ಕ್ಯಾಚ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಸ್ಯಾಮ್ಸನ್ ಅವರ ವಿಕೆಟ್ ಕೀಪಿಂಗ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ಜೋಸ್ ಬಟ್ಲರ್ , ಯಶಸ್ವಿ ಜೈಸ್ವಾಲ್ , ಸಂಜು ಸ್ಯಾಮ್ಸನ್ (ನಾಯಕ) , ರಿಯಾನ್ ಪರಾಗ್ , ಶಿಮ್ರಾನ್ ಹೆಟ್ಮೆಯರ್ , ಧ್ರುವ ಜುರೆಲ್ , ರವಿಚಂದ್ರನ್ ಅಶ್ವಿನ್ , ಜೇಸನ್ ಹೋಲ್ಡರ್ , ಟ್ರೆಂಟ್ ಬೌಲ್ಟ್ , ಸಂದೀಪ್ ಶರ್ಮಾ , ಯುಜ್ವೇಂದ್ರ ಚಾಹಲ್

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಡೇವಿಡ್ ವಾರ್ನರ್ (ನಾಯಕ) , ಮನೀಶ್ ಪಾಂಡೆ , ರಿಲೀ ರೊಸೊವ್ , ರೋವ್ಮನ್ ಪೊವೆಲ್ , ಲಲಿತ್ ಯಾದವ್ , ಅಕ್ಷರ್ ಪಟೇಲ್ , ಅಭಿಷೇಕ್ ಪೊರೆಲ್ , ಅನ್ರಿಕ್ ನೋಕಿಯಾ, ಖಲೀಲ್ ಅಹ್ಮದ್ , ಕುಲದೀಪ್ ಯಾದವ್ , ಮುಖೇಶ್ ಕುಮಾರ್.

Published On - 6:32 pm, Sat, 8 April 23

Follow Us
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ