AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ ಆರಂಭಕ್ಕೂ ಮುನ್ನವೇ SRH ತಂಡದಲ್ಲಿ ಪ್ರಮುಖ ಬದಲಾವಣೆ..!

IPL 2023: ಐಪಿಎಲ್ 2023 ರ ಆರಂಭಕ್ಕೂ ಮುನ್ನವೇ ಕೆಕೆಆರ್ ತಂಡವು ಹೊಸ ಕೋಚ್ ಅನ್ನು ನೇಮಿಸಿದೆ. ಕಳೆದ ಬಾರಿ ಕೋಚ್ ಆಗಿದ್ದ ಬ್ರೆಂಡನ್ ಮೆಕಲಂ ಬದಲಿಗೆ ಚಂದ್ರಕಾಂತ್ ಪಂಡಿತ್​ಗೆ ಹೊಸ ಜವಾಬ್ದಾರಿವಹಿಸಲಾಗಿದೆ.

IPL 2023: ಐಪಿಎಲ್​ ಆರಂಭಕ್ಕೂ ಮುನ್ನವೇ SRH ತಂಡದಲ್ಲಿ ಪ್ರಮುಖ ಬದಲಾವಣೆ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 03, 2022 | 11:31 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ಸೀಸನ್ 16 ಆರಂಭಕ್ಕೂ ಮುನ್ನವೇ ಪ್ರತಿ ತಂಡಗಳಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ. ಈಗಾಗಲೇ ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ತಮ್ಮ ಕೋಚ್​ಗಳನ್ನು ಬದಲಿಸಿದೆ. ಇದೀಗ ಈ ಪಟ್ಟಿಗೆ ಸನ್‌ರೈಸರ್ಸ್ ಹೈದರಾಬಾದ್ ಕೂಡ ಸೇರ್ಪಡೆಯಾಗಿದೆ. ಎಸ್​ಆರ್​ಹೆಚ್ ಫ್ರಾಂಚೈಸಿಯು ತಂಡದ ಮುಖ್ಯ ಕೋಚ್ ಸ್ಥಾನದಿಂದ ಆಸ್ಟ್ರೇಲಿಯಾದ ಟಾಮ್ ಮೂಡಿ ಅವರನ್ನು ವಜಾಗೊಳಿಸಿದೆ. ಇದರೊಂದಿಗೆ ಸನ್​​ರೈಸರ್ಸ್ ಹೈದರಾಬಾದ್ ತಂಡದ ಪರ ಕೂಡ ಹೊಸ ಕೋಚ್ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಟಾಮ್ ಮೂಡಿ ಇತ್ತೀಚೆಗೆ ಐಎಲ್‌ಟಿ-20 ಲೀಗ್​ನಲ್ಲಿ ಡೆಸರ್ಟ್ ವೈಪರ್‌ ತಂಡದ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಯುಎಇಯ ಈ ಟಿ20 ಲೀಗ್ 2023ರ ಜನವರಿಯಿಂದ ಆರಂಭವಾಗಲಿದೆ. ಇದರ ಬೆನ್ನಲ್ಲೇ ಇದೀಗ ಎಸ್​ಆರ್​ಹೆಚ್ ತಂಡವು ಮೂಡಿ ಅವರನ್ನು ಕೈ ಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಎಸ್​ಆರ್​ಹೆಚ್ ತಂಡದ ಕೋಚ್ ಆಗಿದ್ದ ಮೂಡಿ 2013 ರಿಂದ 2019ರವರೆಗೆ ಬಲಿಷ್ಠ ತಂಡವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅಲ್ಲದೆ 2016 ರಲ್ಲಿ ಎಸ್​ಆರ್​​ಹೆಚ್​ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸುವಲ್ಲಿ ಮೂಡಿ ಪಾತ್ರ ಮಹತ್ವದ್ದಾಗಿತ್ತು. ಇದಾಗ್ಯೂ 2019ರ ಬಳಿಕ ತಮ್ಮ ಕೋಚ್ ಸ್ಥಾನವನ್ನು ತ್ಯಜಿಸಿದ್ದರು.

ಆದರೆ 2021 ರಲ್ಲಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಟಾಮ್ ಮೂಡಿ ಅವರನ್ನು ಮತ್ತೆ ಕರೆಸಿಕೊಂಡಿತು. ಅಲ್ಲದೆ ಕೋಚ್ ಸ್ಥಾನದಿಂದ ಟ್ರೆವರ್ ಬೇಲಿಸ್ ತೆಗೆದುಹಾಕುವ ಮೂಲಕ ಮತ್ತೆ ಸಂಪೂರ್ಣ ಜವಾಬ್ದಾರಿವಹಿಸಲಾಗಿತ್ತು. ಆದರೆ 2021 ಹಾಗೂ 2022 ರಲ್ಲಿ ಎಸ್​ಆರ್​ಹೆಚ್​ ತಂಡವು ಕಳಪೆ ಪ್ರದರ್ಶನ ನೀಡಿತ್ತು. ಹೀಗಾಗಿ ಇದೀಗ ಎಸ್​ಆರ್​ಹೆಚ್ ಫ್ರಾಂಚೈಸಿ ಕೋಚ್ ಸ್ಥಾನದಿಂದ ಟಾಮ್ ಮೂಡಿಯನ್ನು ವಜಾಗೊಳಿಸಲಾಗಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡದ ಹೊಸ ಕೋಚ್ ರೇಸ್​ನಲ್ಲಿ ವೆಸ್ಟ್ ಇಂಡೀಸ್​ನ ದಂತಕಥೆ ಬ್ರಿಯಾನ್ ಲಾರಾ ಹೆಸರು ಮುಂಚೂಣಿಯಲ್ಲಿದೆ. ಸದ್ಯ ಎಸ್​ಆರ್​ಹೆಚ್ ತಂಡದ ಬ್ಯಾಟಿಂಗ್ ಕೋಚ್ ಆಗಿರುವ ಲಾರಾ ಅವರೇ ಮುಂಬರುವ ಸೀಸನ್​ನಲ್ಲಿ ಎಸ್​ಆರ್​ಹೆಚ್ ತಂಡದ ಮುಖ್ಯ ಕೋಚ್ ಆಗುವ ಸಾಧ್ಯತೆಯಿದೆ.

ಕೆಕೆಆರ್-ಪಂಜಾಬ್ ಕಿಂಗ್ಸ್ ಕೋಚ್​ಗಳ ಬದಲಾವಣೆ:

ಐಪಿಎಲ್ 2023 ರ ಆರಂಭಕ್ಕೂ ಮುನ್ನವೇ ಕೆಕೆಆರ್ ತಂಡವು ಹೊಸ ಕೋಚ್ ಅನ್ನು ನೇಮಿಸಿದೆ. ಕಳೆದ ಬಾರಿ ಕೋಚ್ ಆಗಿದ್ದ ಬ್ರೆಂಡನ್ ಮೆಕಲಂ ಬದಲಿಗೆ ಚಂದ್ರಕಾಂತ್ ಪಂಡಿತ್​ಗೆ ಹೊಸ ಜವಾಬ್ದಾರಿವಹಿಸಲಾಗಿದೆ. ಇನ್ನು ಪಂಜಾಬ್ ಕಿಂಗ್ಸ್ ಕೂಡ ಮುಖ್ಯ ಕೋಚ್ ಸ್ಥಾನದಿಂದ ಅನಿಲ್ ಕುಂಬ್ಳೆಯನ್ನು ಕೈಬಿಟ್ಟಿದೆ. ಮುಂದಿನ ಸೀಸನ್​ಗಾಗಿ ಪಂಜಾಬ್ ಕಿಂಗ್ಸ್​ ಕುಂಬ್ಳೆ ಅವರೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ. ಹೀಗಾಗಿ ಪಂಜಾಬ್ ಪರ ಕೂಡ ಹೊಸ ಕೋಚ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ