AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs RR: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರೋಚಕತೆ ಸೃಷ್ಟಿಸಿದ ಆರ್​ಸಿಬಿ-ರಾಜಸ್ಥಾನ್ ನಡುವಣ ಕಾದಾಟ

KKR vs CSK, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ. ಮೊದಲ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯದಲ್ಲಿ ಕೋಲ್ಕತ್ತಾ- ಚೆನ್ನೈ ಅನ್ನು ಎದುರಿಸಲಿದೆ.

RCB vs RR: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರೋಚಕತೆ ಸೃಷ್ಟಿಸಿದ ಆರ್​ಸಿಬಿ-ರಾಜಸ್ಥಾನ್ ನಡುವಣ ಕಾದಾಟ
RCB vs RR
Vinay Bhat
|

Updated on: Apr 23, 2023 | 6:56 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡು ಪಂದ್ಯಗಳು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮೊದಲ ಮ್ಯಾಚ್​ನಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದ್ದು ನಿತೀಶ್ ರಾಣ ಅವರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (KKR vs CSK) ಅನ್ನು ಎದುರಿಸಲಿದೆ.

ಆರ್​ಸಿಬಿ-ಆರ್​ಆರ್:

ರಾಯಲ್ ಚಾಲೆಂಜರ್ಸ್ ತಂಡದ ಬ್ಯಾಟಿಂಗ್ ಬಲ ಮೂವರೇ. ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್, ಇವರು ಬೇಗನೆ ನಿರ್ಗಮಿಸಿದರೆ ತಂಡದ ಮೊತ್ತ 100 ದಾಟುವುದು ಅನುಮಾನ. ದಿನೇಶ್ ಕಾರ್ತಿಕ್ ಬ್ಯಾಟ್​ನಿಂದ ರನ್ ಬರುತ್ತಿಲ್ಲ. ಮಹಿಪಾಲ್ ಲುಮ್ರೂರ್, ಶಹ್ಬಾಜ್ ಅಹ್ಮದ್ ಕಡೆಯಿಂದ ಇನ್ನಷ್ಟು ಕೊಡುಗೆ ಬರಬೇಕಿದೆ. ಇನ್ನು ಮೊಹಮ್ಮದ್ ಸಿರಾಜ್ ಬಿಟ್ಟರೆ ಮತ್ಯಾವ ಬೌಲರ್ ಕೂಡ ಮಾರಕವಾಗಿ ಗೋಚರಿಸುತ್ತಿಲ್ಲ. ಕಳೆದ ಪಂದ್ಯದಲ್ಲಿ ಬೌಲರ್​ಗಳು ಕಮ್​ಬ್ಯಾಕ್ ಮಾಡಿದ್ದರೂ ಇನ್ನಷ್ಟು ಲಯಕಂಡುಕೊಳ್ಳಬೇಕಿದೆ. ಬೌಲಿಂಗ್ ವಿಭಾಗದಲ್ಲಿ ಇಂದು ಬದಲಾವಣೆಯಾದರೂ ಅಚ್ಚರಿ ಪಡಬೇಕಿಲ್ಲ. ಜೋಶ್ ಹ್ಯಾಜ್ಲೆವುಡ್ ಪ್ಲೇಯಿಂಗ್ ಇಲೆವೆನ್ ಕಾಣಿಸಿಕೊಳ್ಳುತ್ತಾರ ಎಂಬುದು ನೋಡಬೇಕಿದೆ.

MS Dhoni: ಒಬ್ಬರಲ್ಲ, ಇಬ್ಬರಲ್ಲ: ಪಂದ್ಯದ ಬಳಿಕ 11 ಎಸ್​ಆರ್​ಹೆಚ್ ಆಟಗಾರರಿಗೆ ಧೋನಿಯಿಂದ ಕ್ಲಾಸ್

ಇದನ್ನೂ ಓದಿ
Image
IPL 2023 RCB vs RR Live Streaming: ಆರ್​ಸಿಬಿಗೆ ರಾಜಸ್ಥಾನ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
Image
IPL 2023: ಆರ್​ಸಿಬಿಗೆ ಹಸಿರೇ ಅಪಾಯ! ಗ್ರೀನ್ ಜೆರ್ಸಿ ಪಂದ್ಯಗಳಲ್ಲಿ ಆರ್​ಸಿಬಿ ಪ್ರದರ್ಶನ ಹೇಗಿದೆ ಗೊತ್ತಾ?
Image
MI vs PBKS Highlights IPL 2023: ಮುಂಬೈಗೆ ಸೋಲಿನ ಪಂಚ್ ಕೊಟ್ಟ ಪಂಜಾಬ್
Image
IPL 2023: ರನೌಟ್ ಆಗುವುದು ಧೋನಿಗೆ ಮೊದಲೇ ತಿಳಿದಿತ್ತಾ? ಸಾಕ್ಷಿ ನುಡಿಯುತ್ತಿದೆ ಈ ವೈರಲ್ ವಿಡಿಯೋ

ರಾಜಸ್ಥಾನ್ ತಂಡ ಟೇಬಲ್ ಟಾಪ್​ನಲ್ಲಿದೆ. ಆಡಿರುವ ಆರು ಪಂದ್ಯಗಳ ಪೈಕಿ ಎರಡರಲ್ಲಿ ಮಾತ್ರ ಸೋತಿದೆ. ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಪ್ರಮುಖ ಬ್ಯಾಟಿಂಗ್ ಅಸ್ತ್ರ. ಜೇಸನ್ ಹೋಲ್ಡರ್ ಮತ್ತು ಆರ್. ಅಶ್ವಿನ್ ಆಲ್ರೌಂಡ್ ಪ್ರದರ್ಶನ ತೋರಬೇಕಿದೆ. ಯುಜ್ವೇಂದ್ರ ಚಹಲ್ ವಿಕೆಟ್ ಟೇಕಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರೆ, ಸಂದೀಪ್ ಶರ್ಮಾ, ಕುಲ್ದೀಪ್ ಸೇನ್, ಆ್ಯಡಂ ಝಂಪಾ ಸಾಥ್ ನೀಡುತ್ತಿದ್ದಾರೆ.

ಕೆಕೆಆರ್-ಸಿಎಸ್​ಕೆ:

ಕೆಕೆಆರ್ ಆಡಿದ ಆರು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಎರಡರಲ್ಲಿ ಗೆಲುವು ಕಂಡು ಎಂಟನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಹ್ಯಾಟ್ರಿಕ್ ಸೋಲು ಕಂಡರೂ ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದೆ. ನಾಯಕ ನಿತೀಶ್ ರಾಣ ಹಾಗೂ ರಿಂಕು ಸಿಂಗ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಎನ್. ಜಗದೀಸನ್, ವೆಂಕಟೇಶ್ ಅಯ್ಯರ್ ಕೂಡ ಫಾರ್ಮ್​ನಲ್ಲಿದ್ದಾರೆ. ರೆಹ್ಮಾನುಲ್ಲ ಗುರ್ಬಜ್, ಶಾರ್ದೂಲ್ ಥಾಕೂರ್ ಬ್ಯಾಟಿಂಗ್​ನಲ್ಲಿ ಬಲ ತುಂಬಿದರೆ ತಂಡದ ಮೊತ್ತ ಮತ್ತೊಮ್ಮೆ 200+ ಆಗುವುದು ಖಚಿತ. ಆಂಡ್ರೆ ರಸೆಲ್ ಅಬ್ಬರಿಸಬೇಕಿದೆ. ಸುನಿಲ್ ನರೈನ್, ವರುಣ್ ಚಕ್ರವರ್ತಿ, ಲೂಕಿ ಫರ್ಗುಸನ್, ಉಮೇಶ್ ಯಾದವ್, ಸುಯೇಶ್ ಶರ್ಮಾ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.

ಸಿಎಸ್​ಕೆ ತಂಡ ಬ್ಯಾಟಿಂಗ್ – ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ರುತುರಾಯ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್​ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ. ಅಜಿಂಕ್ಯಾ ರಹಾನೆ ಕೂಡ ಅತ್ಯುತ್ತಮ ಬ್ಯಾಟಿಂಗ್ ನಡೆಸುತ್ತಿದ್ದು, ಶಿವಂ ದುಬೆ ಸ್ಫೋಟಕ ಆಟದ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್​ನಲ್ಲಿ ಸಿಎಸ್​ಕೆ ಪರ ತುಶಾರ್ ದೇಶ್​ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ