AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ರೆಡ್ ಆರ್ಮಿಗೆ ‘ಗ್ರೀನ್’ ಬಲ; ಆದರೂ ತಂಡದಲ್ಲಿದೆ ಅದೊಂದು ಕೊರತೆ..!

IPL 2024: ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್‌ನ ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅವರನ್ನು ಟ್ರೇಡ್ ಮಾಡಿದೆ. ಮುಂಬೈ ಇಂಡಿಯನ್ಸ್ ಐಪಿಎಲ್ 2023 ಹರಾಜಿನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ರೀನ್ ಅವರನ್ನು 17.5 ಕೋಟಿ ರೂ.ಗೆ ಖರೀದಿಸಿತ್ತು.

RCB: ರೆಡ್ ಆರ್ಮಿಗೆ ‘ಗ್ರೀನ್’ ಬಲ; ಆದರೂ ತಂಡದಲ್ಲಿದೆ ಅದೊಂದು ಕೊರತೆ..!
ಆರ್​ಸಿಬಿ
ಪೃಥ್ವಿಶಂಕರ
|

Updated on:Nov 27, 2023 | 4:14 PM

Share

ಐಪಿಎಲ್ 2024ರ (IPL 2024) ಕಿರು ಹರಾಜು ದುಬೈನಲ್ಲಿ ನಡೆಯಲಿದೆ. ವಿದೇಶದಲ್ಲಿ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ ಹರಾಜಿಗೂ ಮುನ್ನವೇ ಎಲ್ಲಾ ತಂಡಗಳು ಬಿಡುಗಡೆಯಾದ ಮತ್ತು ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಿವೆ. ಪಟ್ಟಿ ಬಿಡುಗಡೆಯಾದ ಬಳಿಕ ಐಪಿಎಲ್ ತಂಡಗಳ ನಡುವೆ ಟ್ರೇಡಿಂಗ್ ಶುರುವಾಗಿದೆ. ಅದರಂತೆ ಹಾರ್ದಿಕ್ ಪಾಂಡ್ಯ (Hardik Pandya) ಅವರನ್ನು ಮುಂಬೈ ಇಂಡಿಯನ್ಸ್ (Mumbai Indians) ತಂಡ ಗುಜರಾತ್ ಟೈಟಾನ್ಸ್ ತಂಡದಿಂದ ಟ್ರೇಡ್ ಮಾಡಿದ್ದರೆ, ಮುಂಬೈ ತಂಡದ ಸ್ಟಾರ್ ಆಲ್ ರೌಂಡರ್ ಕ್ಯಾಮರೂನ್ ಗ್ರೀನ್ (Cameron Green) ಅವರನ್ನು ಆರ್​ಸಿಬಿ (RCB) ಟ್ರೇಡ್ ಮಾಡಿದೆ.

ಆರ್​ಸಿಬಿ ಸೇರಿದ ಗ್ರೀನ್

ಆರ್‌ಸಿಬಿ ತಂಡ ಮುಂಬೈ ಇಂಡಿಯನ್ಸ್‌ನ ಸ್ಟಾರ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಅವರನ್ನು ಟ್ರೇಡ್ ಮಾಡಿದೆ. ಮುಂಬೈ ಇಂಡಿಯನ್ಸ್ ಐಪಿಎಲ್ 2023 ಹರಾಜಿನಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ರೀನ್ ಅವರನ್ನು 17.5 ಕೋಟಿ ರೂ.ಗೆ ಖರೀದಿಸಿತ್ತು. ಇದರ ನಂತರ ಅವರು ಐಪಿಎಲ್ 2023 ರಲ್ಲಿ ಮುಂಬೈ ಪರ ಉತ್ತಮ ಪ್ರದರ್ಶನ ನೀಡಿದ್ದರು. ಆಡಿದ 16 ಪಂದ್ಯಗಳಲ್ಲಿ ಗ್ರೀನ್ ಒಂದು ಶತಕ ಮತ್ತು ಮೂರು ಅರ್ಧ ಶತಕ ಸೇರಿದಂತೆ ಒಟ್ಟು 452 ರನ್ ಕಲೆಹಾಕಿದ್ದರು. ಇದಲ್ಲದೇ ಬೌಲಿಂಗ್​ನಲ್ಲಿ 6 ವಿಕೆಟ್ ಕೂಡ ಕಬಳಿಸಿದ್ದರು.

ಆರ್‌ಸಿಬಿ ಒಂದೇ ಒಂದು ಪ್ರಶಸ್ತಿ ಗೆದ್ದಿಲ್ಲ

ಆರ್‌ಸಿಬಿ ತಂಡ ಇದುವರೆಗೆ ಒಮ್ಮೆಯೂ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಆರ್‌ಸಿಬಿ ಮೂರು ಬಾರಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು, ಆದರೆ ಒಮ್ಮೆಯೂ ಪ್ರಶಸ್ತಿ ಗೆಲ್ಲಲು ತಂಡಕ್ಕೆ ಸಾಧ್ಯವಾಗಲಿಲ್ಲ. ಈ ಬಾರಿ ಐಪಿಎಲ್ 2024ರ ಹರಾಜಿಗೂ ಮುನ್ನ ಆರ್‌ಸಿಬಿ 11 ಆಟಗಾರರನ್ನು ಬಿಡುಗಡೆ ಮಾಡಿದೆ. ಅಲ್ಲದೆ ಶಹಬಾಜ್ ಅಹ್ಮದ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್‌ನಿಂದ ಮಯಾಂಕ್ ದಾಗರ್ ಅವರನ್ನು ಟ್ರೇಡಿಂಗ್ ಮಾಡಿಕೊಂಡಿದೆ.

ಆರ್‌ಸಿಬಿಗೆ ಬೇಕು ಸ್ಟಾರ್ ಬೌಲರ್‌

ಈಗಿರುವ ಆರ್​ಸಿಬಿ ತಂಡದಲ್ಲಿ ಸ್ಟಾರ್ ಬ್ಯಾಟರ್​ಗಳ ದಂಡೇ ಇದೆ. ಆದರೆ ತಂಡದಲ್ಲಿ ಸ್ಟಾರ್ ಬೌಲರ್​ಗಳ ಕೊರತೆ ಎದುರಾಗಿದೆ. ಏಕೆಂದರೆ ತಂಡ ಜೋಸ್ ಹ್ಯಾಜಲ್‌ವುಡ್, ವನಿಂದು ಹಸರಂಗ, ಹರ್ಷಲ್ ಪಟೇಲ್​ರಂತಹ ಸ್ಟಾರ್ ಬೌಲರ್​ಗಳನ್ನು ತಂಡದಿಂದ ಕೈಬಿಟ್ಟಿದೆ. ಹೀಗಾಗಿ ಮುಂದಿನ ತಿಂಗಳು ನಡೆಯಲ್ಲಿರುವ ಮಿನಿ ಹರಾಜಿನಲ್ಲಿ ಬೌಲಿಂಗ್ ವಿಭಾಗವನ್ನು ಬಲಪಡಿಸುವುದು ತಂಡಕ್ಕೆ ಮೊದಲ ಆದ್ಯತೆಯಾಗಿದೆ. ತಂಡಕ್ಕೆ ಕನಿಷ್ಠ ಒಬ್ಬ ಭಾರತೀಯ ಮತ್ತು ಒಬ್ಬ ವಿದೇಶಿ ಅಗ್ರ ಬೌಲರ್ ಅಗತ್ಯವಿದೆ. ವಿದೇಶಿ ಆಟಗಾರರಾಗಿ, ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಸ್ಥಾನಗಳು ಬಹುತೇಕ ಖಚಿತವಾಗಿದ್ದು, ರೀಸ್ ಟೋಪ್ಲಿ ಕೂಡ ಆಡುವುದನ್ನು ಕಾಣಬಹುದು. ಆದರೆ ಎರಡನೇ ವಿದೇಶಿ ವೇಗದ ಬೌಲರ್ ಯಾರು ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಮಿಚೆಲ್ ಸ್ಟಾರ್ಕ್ ಕೂಡ ಹರಾಜಿಗೆ ಬರುತ್ತಿದ್ದಾರೆ. ಬಹುಶಃ ಅವರಿಗಾಗಿ ಆರ್​ಸಿಬಿ ಭಾರಿ ಮೊತ್ತ ಬಿಡ್ ಮಾಡುವ ಸಾಧ್ಯತೆ ಇದೆ. ಅತ್ಯುತ್ತಮ ಬ್ಯಾಟಿಂಗ್ ಲೈನ್‌ಅಪ್‌ಗೆ ಹೆಸರುವಾಸಿಯಾಗಿರುವ ಆರ್‌ಸಿಬಿ ಈ ಬಾರಿ ಬೌಲಿಂಗ್‌ಗೆ ಹೆಚ್ಚು ಹಣ ವ್ಯಯಿಸಿದರೆ ಶ್ರೇಷ್ಠ ತಂಡವಾಗಬಲ್ಲದು.

IPL 2024: ಮುಂಬೈಗೆ ಹಾರಿದ ಹಾರ್ದಿಕ್; ಗುಜರಾತ್ ತಂಡದ ನೂತನ ನಾಯಕ ಯಾರು ಗೊತ್ತಾ?

ಆರ್​ಸಿಬಿ ಉಳಿಸಿಕೊಂಡ ಮತ್ತು ಬಿಡುಗಡೆ ಮಾಡಿದ ಆಟಗಾರರು:

ಬಿಡುಗಡೆಗೊಂಡ ಆಟಗಾರರು: ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್, ಸಿದ್ಧಾರ್ಥ್ ಕೌಲ್, ಕೇದಾರ್ ಜಾಧವ್.

ಉಳಿಸಿಕೊಂಡಿರುವ ಆಟಗಾರರು: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವೈಶಾಕ್ ವಿಜಯಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:12 pm, Mon, 27 November 23

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ