AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೋಲಿನೊಂದಿಗೆ ಲೀಗ್ ಆರಂಭಿಸಿದ ಆರ್​ಸಿಬಿ

IPL 2024: ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಚೆಪಾಕ್ ಮೈದಾನದಲ್ಲಿ ಆರ್​ಸಿಬಿಯ ಸೋಲಿನ ಸರಣಿ ಮುಂದುವರೆದಿದೆ.

IPL 2024: ಸೋಲಿನೊಂದಿಗೆ ಲೀಗ್ ಆರಂಭಿಸಿದ ಆರ್​ಸಿಬಿ
ಸಿಎಸ್​ಕೆ
ಪೃಥ್ವಿಶಂಕರ
|

Updated on:Mar 23, 2024 | 12:09 AM

Share

ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್ (IPL 2024) ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ಆತಿಥೇಯ ಚೆನ್ನೈ ಸೂಪರ್ ಕಿಂಗ್ಸ್ ತಂಡ (Chennai Super Kings vs Royal Challengers Bengaluru) ಲೀಗ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಚೆಪಾಕ್ ಮೈದಾನದಲ್ಲಿ ಆರ್​ಸಿಬಿಯ ಸೋಲಿನ ಸರಣಿ ಮುಂದುವರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ಅನುಜ್ ರಾವತ್ (Anuj Rawat) ಹಾಗೂ ದಿನೇಶ್ ಕಾರ್ತಿಕ್ (Dinesh Karthik)​ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಸಿಎಸ್​ಕೆ ತಂಡ 18.4 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು ಗೆಲುವಿನ ದಡ ಸೇರಿತು.

ಸಿಎಸ್​ಕೆಗೂ ಸರಾಸರಿ ಆರಂಭ

ಆರ್​​ಸಿಬಿ ನೀಡಿದ 174 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ಕೂಡ ಸರಾಸರಿ ಆರಂಭ ಪಡೆಯಿತು. ಆರಂಭಿಕರಾದ ರುತುರಾಜ್ ಗಾಯಕ್ವಾಡ್ ಮತ್ತು ರಚಿನ್ ರವೀಂದ್ರ ಮೊದಲ ವಿಕೆಟ್‌ಗೆ 38 ರನ್ ಸೇರಿಸಿದರು. ನಾಲ್ಕನೇ ಓವರ್‌ನ ಕೊನೆಯ ಎಸೆತದಲ್ಲಿ ಯಶ್ ದಯಾಳ್ ಈ ಜೊತೆಯಾಟವನ್ನು ಮುರಿದರು. ರುತುರಾಜ್ ಫಸ್ಟ್ ಸ್ಲಿಪ್​ನಲ್ಲಿ ನಿಂತಿದ್ದ ಕ್ಯಾಮರೂನ್ ಗ್ರೀನ್​ಗೆ ಕ್ಯಾಚಿತ್ತು ಔಟಾದರು. ರುತುರಾಜ್ 15 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 15 ರನ್ ಗಳಿಸಿದರು. ಆ ನಂತರ 7ನೇ ಓವರ್‌ನ ಕೊನೆಯ ಎಸೆತದಲ್ಲಿ ಚೆನ್ನೈನ ಎರಡನೇ ವಿಕೆಟ್ ಪತನವಾಯಿತು. ಈ ಬಾರಿ ಕರ್ಣ್ ಶರ್ಮಾ 15 ಎಸೆತಗಳಲ್ಲಿ 37 ರನ್ ಬಾರಿಸಿದ್ದ ರಚಿನ್ ರವೀಂದ್ರರನ್ನು ಬೇಟೆಯಾಡಿದರು.

ಗ್ರೀನ್​ಗೆ 2 ವಿಕೆಟ್

ಬಳಿಕ 99 ರನ್ ಗಳಿಸಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ ಮೂರನೇ ವಿಕೆಟ್ ಪತನವಾಯಿತು. ಕ್ಯಾಮರೂನ್ ಗ್ರೀನ್ ಎಸೆತದಲ್ಲಿ ಅಜಿಂಕ್ಯ ರಹಾನೆ 19 ಎಸೆತಗಳಲ್ಲಿ 27 ರನ್ ಬಾರಿಸಿ ಗ್ಲೆನ್ ಮ್ಯಾಕ್ಸ್‌ವೆಲ್​ಗೆ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ನಂತರ 13ನೇ ಓವರ್‌ನಲ್ಲಿ ಕ್ಯಾಮರೂನ್ ಗ್ರೀನ್ ಡ್ಯಾರಿಲ್ ಮಿಚೆಲ್ ವಿಕೆಟ್ ಪಡೆಯುವ ಮೂಲಕ ಸಿಎಸ್​ಕೆ ತಂಡದ 4ನೇ ವಿಕೆಟ್ ಕಬಳಿಸಿದರು. ಆದರೆ ಇಲ್ಲಿಂದ ಜೊತೆಯಾದ ರವೀಂದ್ರ ಜಡೇಜಾ ಹಾಗೂ ಶಿವಂ ದುಬೆ ಅಜೇಯ 64 ರನ್​​ಗಳ ಜೊತೆಯಾಟವನ್ನಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಲ್ಲದೆ ಇಬ್ಬರು ತಲಾ 25 ಹಾಗೂ 34 ರನ್ ಸಿಡಿಸಿದರು.

ಆರ್​ಸಿಬಿಗೆ ಉತ್ತಮ ಆರಂಭ

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭವನ್ನೇ ನೀಡಿದರು. ಈ ಇಬ್ಬರು ಮೊದಲ ವಿಕೆಟ್​ಗೆ 41 ರನ್​ಗಳ ಜೊತೆಯಾಟ ಹಂಚಿಕೊಂಡರು. ಆದರೆ ಈ ವೇಳೆ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ನಾಯಕ ಡುಪ್ಲೆಸಿಸ್, ಮುಸ್ತಫಿಜುರ್ ಬೌಲಿಂಗ್​ನಲ್ಲಿ 35 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆ ನಂತರ ಬಂದ ರಜತ್ ಪಾಟಿದರ್, ಐಪಿಎಲ್​ನಲ್ಲೂ ತಮ್ಮ ಕಳಪೆ ಫಾರ್ಮ್​ ಮುಂದುವರೆಸಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಸೊನ್ನೆ ಸುತ್ತಿದ ರಜತ್- ಗ್ಲೆನ್

ಮೂರನೇ ಕ್ರಮಾಂಕದಲ್ಲಿ ಬಂದ ಭರವಸೆಯ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಯಾವುದೇ ಪರಿಣಾಮ ಬೀರದೆ ಮೊದಲ ಎಸೆತದಲ್ಲೇ ವಿಕೆಟ್​ ಕೀಪರ್​ಗೆ ಕ್ಯಾಚಿತ್ತು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಉತ್ತಮ ಆರಂಭದ ಹೊರತಾಗಿಯೂ ವಿಕೆಟ್​ಗಳ ದಿಢೀರ್​ ಪತನದಿಂದಾಗಿ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಕ್ಯಾಮರಾನ್ ಗ್ರೀನ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದರೆ ರಹಾನೆ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ವಿರಾಟ್ ಕೊಹ್ಲಿ ಇನ್ನಿಂಗ್ಸ್ 21 ರನ್​ಗಳಿಗೆ ಅಂತ್ಯವಾಯಿತು.

ಡಿಕೆ- ಅನುಜ್ 95 ರನ್ ಜೊತೆಯಾಟ

ಕೊಹ್ಲಿ ವಿಕೆಟ್ ಬಳಿಕ ಗ್ರೀನ್ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಅವರು ಕೂಡ 18 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ ತಂಡ ಕೇವಲ 78 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಜೊತೆಯಾದ ದಿನೇಶ್ ಕಾರ್ತಿಕ್ ಹಾಗೂ ಅನುಜ್ ರಾವತ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟದ ಜೊತೆಗೆ ತಂಡವನ್ನು 170 ರನ್​ಗಳ ಗಡಿ ದಾಟಿಸಿದರು.

ಮುಸ್ತಫಿಜುರ್ 4 ವಿಕೆಟ್

ಅಂತಿಮವಾಗಿ ಅನುಜ್ ರಾವತ್ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 48 ರನ್ ಕಲೆಹಾಕಿದರೆ, ದಿನೇಶ್ ಕಾರ್ತಿಕ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 38 ರನ್ ಸಿಡಿಸಿದರು. ಇನ್ನು ಸಿಎಸ್​ಕೆ ಪರ ಅದ್ಭುತವಾಗಿ ಬೌಲಿಂಗ್ ಮಾಡಿದ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ 29 ರನ್ ನೀಡಿ 4 ವಿಕೆಟ್ ಪಡೆದರೆ, ದೀಪಕ್ ಚಹಾರ್ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 pm, Fri, 22 March 24

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ