IPL 2024: ಆಘಾತಕ್ಕಾರಿ ಸುದ್ದಿ; ರೋಹಿತ್ ವಿಕೆಟ್ ಸಂಭ್ರಮಿಸಿದ ಸಿಎಸ್​ಕೆ ಅಭಿಮಾನಿಯ ಹತ್ಯೆ..!

IPL 2024: ಮಾರ್ಚ್​ 27 ರಂದು ನಡೆದ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಐಪಿಎಲ್ ಪಂದ್ಯದ ವೇಳೆ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಪತನವನ್ನು ಸಂಭ್ರಮಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಯನ್ನು ಮುಂಬೈ ಇಂಡಿಯನ್ಸ್‌ ತಂಡದ ಇಬ್ಬರು ಅಭಿಮಾನಿಗಳು ಸರಿಯಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

IPL 2024: ಆಘಾತಕ್ಕಾರಿ ಸುದ್ದಿ; ರೋಹಿತ್ ವಿಕೆಟ್ ಸಂಭ್ರಮಿಸಿದ ಸಿಎಸ್​ಕೆ ಅಭಿಮಾನಿಯ ಹತ್ಯೆ..!
ರೋಹಿತ್ ಶರ್ಮಾ
Follow us
|

Updated on:Mar 31, 2024 | 8:36 PM

ಮಾರ್ಚ್​ 27 ರಂದು ನಡೆದ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಮುಂಬೈ ಇಂಡಿಯನ್ಸ್‌ (SRH vs MI) ನಡುವಿನ ಐಪಿಎಲ್ (IPL 2024) ಪಂದ್ಯದ ವೇಳೆ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಅವರ ವಿಕೆಟ್ ಪತನವನ್ನು ಸಂಭ್ರಮಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಯನ್ನು ಮುಂಬೈ ಇಂಡಿಯನ್ಸ್‌ ತಂಡದ ಇಬ್ಬರು ಅಭಿಮಾನಿಗಳು ಸರಿಯಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ಪಕ್ಕದ ರಾಜ್ಯ ಮಹಾರಾಷ್ಟ್ರದ ಕೊಲ್ಹಾಪುರದಲ್ಲಾದರೂ ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಆಟವನ್ನು ಕೇವಲ ಮನರಂಜನೆಯಾಗಿ ನೋಡದ ಅಭಿಮಾನಿಗಳು ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಿರುವುದನ್ನು ಇಡೀ ದೇಶವೇ ಖಂಡಿಸುತ್ತಿದೆ.

ಸಂಪೂರ್ಣ ಘಟನೆಯ ವಿವರ ಹೀಗಿದೆ

ಕೊಲ್ಲಾಪುರದ ಹನ್ಮಂತವಾಡಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಮಾರ್ಚ್ 27ರ ಬುಧವಾರದಂದು ರಾತ್ರಿ 10 ಗಂಟೆ ಸುಮಾರಿಗೆ ಬಂಡುಪಂತ್ ಬಾಪುಸೊ ತಿಬಿಲೆ (ಸಾವಿಗೀಡಾಗಿರುವ ವ್ಯಕ್ತಿ), ಸಾಗರ್ ಜಾಂಜಗೆ ಮತ್ತು ಬಲವಂತ ಜಾಂಜಗೆ (ತೀವ್ರವಾಗಿ ಥಳಿಸಿ ಹತ್ಯೆ ಮಾಡಿರುವವರು) ಐಪಿಎಲ್ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಈ ವೇಳೆ ಹೈದರಾಬಾದ್‌ ನೀಡಿದ್ದ 277 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್​ ತಂಡಕ್ಕೆ ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ ಅದ್ಭುತ ಆರಂಭ ನೀಡಿದ್ದರು. ಆದರೆ ಕೆಲವೇ ಎಸೆತ​ಗಳ ಅಂತರದಲ್ಲಿ ಇಬ್ಬರ ವಿಕೆಟ್ ಪತನವಾಯಿತು.

ಅದರಲ್ಲೂ ರೋಹಿತ್ ಶರ್ಮಾ ವಿಕೆಟ್ ಪತನವಾಗಿದ್ದು, ಮುಂಬೈ ಇಂಡಿಯನ್ಸ್‌ ಪಾಳಯಕ್ಕೆ ಆಘಾತವನ್ನುಂಟು ಮಾಡಿತ್ತು. ರೋಹಿತ್ ಔಟಾದುದ್ದನ್ನು ನೋಡಿ ಅಭಿಮಾನಿಗಳು ಕೂಡ ಆಘಾತಕ್ಕೊಳಗಾಗಿದ್ದರು. ಇದು ಸಾಗರ್ ಜಾಂಜಗೆ ಮತ್ತು ಬಲವಂತ ಜಾಂಜಗೆಗೂ ಆಘಾತವನ್ನುಂಟು ಮಾಡಿದೆ. ಆದರೆ ಈ ವೇಳೆ ಅಲ್ಲೇ ಕುಳಿತಿದ್ದ ಸಿಎಸ್​ಕೆ ಅಭಿಮಾನಿ ಬಂಡುಪಂತ್ ತಿಬಿಲೆ ರೋಹಿತ್ ಔಟಾಗಿದುದ್ದನ್ನು ಸಂಭ್ರಮಿಸಿದ್ದಾರೆ. ಇದನ್ನು ನೋಡಿದ ಸಾಗರ್ ಝಂಜಗೆ ಮತ್ತು ಬಲವಂತ ಜಾಂಜಗೆ ಕೋಪ ನೆತ್ತಿಗೇರಿದೆ. ಕೂಡಲೇ ಈ ಇಬ್ಬರು ಬಂಡುಪಂತ್ ಜೊತೆಗೆ ವಾಗ್ವಾದಕ್ಕಿಳಿದಿದ್ದಾರೆ.

IPL 2024: ಕ್ರೀಡಾಂಗಣದಲ್ಲಿ ಹಾರ್ದಿಕ್​ರನ್ನು ನಿಂದಿಸಿದರೆ ಕಠಿಣ ಕ್ರಮ! ಎಂಸಿಎ ಎಚ್ಚರಿಕೆ

ಈ ವಾಗ್ವಾದ ಗಂಭೀರಗೊಂಡಿದೆ. ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ ಹೋಗಿದೆ. ಈ ಹೊಡೆದಾಟದಲ್ಲಿ ಮೂವರಿಗೂ ಗಾಯಗಳಾಗಿವೆ. ಆದರೆ ಜಗಳ ಹೆಚ್ಚಾದಂತೆ ಅಲ್ಲೆ ಇದ್ದ ಕಟ್ಟಿಗೆಗಳನ್ನು ಎತ್ತಿಕೊಂಡ ಸಾಗರ್ ಮತ್ತು ಬಲವಂತ, ಬಂಡುಪಂತ್​ಗೆ ತೀವ್ರವಾಗಿ ಥಳಿಸಿದ್ದಾರೆ. ಈ ವೇಳೆ ಬಂಡುಪಂತ್ ಅವರ ಕಿವಿ ಹಾಗೂ ಮೂಗಿನಲ್ಲಿ ರಕ್ತ ಸುರಿಯಲ್ಲಾರಂಭಿಸಿದೆ.

ಹತ್ಯೆಯಾದ ಬಂಡುಪಂತ್ ಬಾಪುಸೊ ತಿಬಿಲೆ

MI fans kill CSK fan who celebrated Rohit Sharma's dismissal

ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವು

ಗಂಭೀರವಾಗಿ ಗಾಯಗೊಂಡ ಬಂಡುಪಂತ್ ತಿಬಿಲೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೂರು ದಿನಗಳ ಬಳಿಕ ಅವರು ಸಾವನ್ನಪ್ಪಿದ್ದಾರೆ. ತಿಬಿಲೆ ಅವರು ಪತ್ನಿ, ಮೂವರು ಪುತ್ರಿಯರು, ಅಳಿಯ, ಪುತ್ರ, ಮೊಮ್ಮಕ್ಕಳು, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಈ ಪ್ರಕರಣದಲ್ಲಿ ಶಂಕಿತ ಆರೋಪಿಗಳಾದ ಸಾಗರ್ ಜಾಂಜಗೆ ಮತ್ತು ಬಲವಂತ ಜಾಂಜಗೆ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 pm, Sun, 31 March 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ