Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಭಾವನಾತ್ಮಕ ವಿಡಿಯೋ ಮೂಲಕ ದಿನೇಶ್ ಕಾರ್ತಿಕ್​ಗೆ ವಿದಾಯ ಹೇಳಿದ ಆರ್​ಸಿಬಿ

Dinesh Karthik Retires: ರಾಜಸ್ಥಾನ್ ವಿರುದ್ಧ ಸೋತ ಬಳಿಕ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಕಾರ್ತಿಕ್ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದರು. ಇದೀಗ ಆರ್​ಸಿಬಿ ಫ್ರಾಂಚೈಸಿ ಕಾರ್ತಿಕ್​ಗಾಗಿ ವಿಶೇಷ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಇದರಲ್ಲಿ ವಿರಾಟ್ ಕೊಹ್ಲಿ ಮತ್ತು ಕಾರ್ತಿಕ್ ಪತ್ನಿ ದೀಪಿಕಾ ಪಳ್ಳಿಕಲ್, ದಿನೇಶ್ ಬಗ್ಗೆ ಮಾತನಾಡುತ್ತಿರುವುದು ಕಂಡುಬಂದಿದೆ.

IPL 2024: ಭಾವನಾತ್ಮಕ ವಿಡಿಯೋ ಮೂಲಕ ದಿನೇಶ್ ಕಾರ್ತಿಕ್​ಗೆ ವಿದಾಯ ಹೇಳಿದ ಆರ್​ಸಿಬಿ
ದಿನೇಶ್ ಕಾರ್ತಿಕ್
Follow us
ಪೃಥ್ವಿಶಂಕರ
|

Updated on:May 24, 2024 | 4:10 PM

ಟೀಂ ಇಂಡಿಯಾದ ಮಾಜಿ ಹಾಗೂ ಆರ್‌ಸಿಬಿಯ (RCB) ಹಾಲಿ ಸ್ಟಾರ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ (Dinesh Karthik) ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ, ಇದು ಅವರ ಕೊನೆಯ ಐಪಿಎಲ್ ಸೀಸನ್ ಎಂದು ಕಾರ್ತಿಕ್ ಈಗಾಗಲೇ ಈ ಬಗ್ಗೆ ಹೇಳಿದ್ದರು. ಅದರಂತೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೊನೆಯ ಬಾರಿಗೆ ಆರ್​ಸಿಬಿ ಪರ (RCB vs RR) ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಮಿಲಿಯನ್ ಡಾಲರ್ ಟೂರ್ನಿಗೆ ವಿದಾಯ ಹೇಳಿದ್ದಾರೆ. ಕೊನೆಯ ಆವೃತ್ತಿಯಲ್ಲೂ ಅವಕಾಶ ಸಿಕ್ಕಾಗಲೆಲ್ಲಾ ತಂಡದ ಪರ ಅದ್ಭುತ ಪ್ರದರ್ಶನ ನೀಡಿದ್ದ ಕಾರ್ತಿಕ್, ತಂಡವನ್ನು ಎಲಿಮಿನೇಟರ್​ವರೆಗೂ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ರಾಜಸ್ಥಾನ್ ವಿರುದ್ಧ ಸೋತ ಬಳಿಕ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಕಾರ್ತಿಕ್ ಅವರಿಗೆ ಭಾವಪೂರ್ಣ ವಿದಾಯ ಹೇಳಿದ್ದರು. ಇದೀಗ ಆರ್​ಸಿಬಿ ಫ್ರಾಂಚೈಸಿ ಕಾರ್ತಿಕ್​ಗಾಗಿ ವಿಶೇಷ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಇದರಲ್ಲಿ ವಿರಾಟ್ ಕೊಹ್ಲಿ ಮತ್ತು ಕಾರ್ತಿಕ್ ಪತ್ನಿ ದೀಪಿಕಾ ಪಳ್ಳಿಕಲ್, ದಿನೇಶ್ ಬಗ್ಗೆ ಮಾತನಾಡುತ್ತಿರುವುದು ಕಂಡುಬಂದಿದೆ.

ದಿನೇಶ್ ಪತ್ನಿ ದೀಪಿಕಾ ಭಾವುಕ

ಆರ್​​ಸಿಬಿ ತನ್ನ ಎಕ್ಸ್ ಖಾತೆಯಲ್ಲಿ ದಿನೇಶ್ ಕಾರ್ತಿಕ್ ಬಗ್ಗೆ ವಿಶೇಷ ವೀಡಿಯೊವನ್ನು ಹಂಚಿಕೊಂಡಿದೆ. ಇದರಲ್ಲಿ ದಿನೇಶ್ ಕಾರ್ತಿಕ್ ಅವರ ಪತ್ನಿ ದೀಪಿಕಾ ಪಳ್ಳಿಕಲ್ ಅವರು ಉತ್ತಮ ಪ್ರದರ್ಶನ ನೀಡದಿದ್ದಾಗ ಅವರನ್ನು ತಂಡದಿಂದ ಕೈಬಿಡುವುದನ್ನು ನಾನು ನೋಡಿದ್ದೇನೆ. ಕಾರ್ತಿಕ್ ಸ್ಥಾನದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ, ಅವರು ಬೇಗನೇ ಸೊಲೊಪ್ಪಿಕೊಳ್ಳುತ್ತಿದ್ದರೇನೋ ಆದರೆ ಕಾರ್ತಿಕ್ ಮಾತ್ರ ಎಂದಿಗೂ ಛಲ ಬಿಡಲಿಲ್ಲ. ಪ್ರತಿ ಬಾರಿ ಕಳಪೆ ಪ್ರದರ್ಶನ ನೀಡಿದಾಗಲೆಲ್ಲ ಅವರು ಮತ್ತೊಮ್ಮೆ ಪುಟಿದೆದ್ದು, ತಮ್ಮನ್ನು ತಾವು ಸಾಬೀತುಪಡಿಸಿದರು. ಅವರು ಈ ಧೋರಣೆಯನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಇದು ಅವರ ಬಗ್ಗೆ ಹೆಮ್ಮೆ ಪಡಬೇಕಾದ ಸಂಗತಿ ಎಂದಿದ್ದಾರೆ.

IPL: ಸೊನ್ನೆ ಶೂರ ಮ್ಯಾಕ್ಸ್​ವೆಲ್; ಬೇಡದ ದಾಖಲೆ ಬರೆದ ಆರ್​ಸಿಬಿ ಬ್ಯಾಟರ್

ಒಡನಾಟ ಹಂಚಿಕೊಂಡ ವಿರಾಟ್ ಕೊಹ್ಲಿ

ಈ ವಿಡಿಯೋದಲ್ಲಿ ಕಾರ್ತಿಕ್ ಜೊತೆ ಕಳೆದ ಕ್ಷಣಗಳನ್ನು ವಿರಾಟ್ ಕೊಹ್ಲಿ ನೆನಪಿಸಿಕೊಂಡಿದ್ದಾರೆ. 2009 ರಲ್ಲಿ ನಾವು ದಕ್ಷಿಣ ಆಫ್ರಿಕಾದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡುತ್ತಿದ್ದಾಗ ನಾನು ಮೊದಲ ಬಾರಿಗೆ ದಿನೇಶ್ ಅವರನ್ನು ಭೇಟಿಯಾಗಿದ್ದೆ ಎಂದು ಕೊಹ್ಲಿ ಹೇಳಿದ್ದಾರೆ. ಆ ಸಮಯದಲ್ಲಿ ನಾವು ಮೊದಲ ಬಾರಿಗೆ ಡ್ರೆಸ್ಸಿಂಗ್ ಕೋಣೆಯನ್ನು ಹಂಚಿಕೊಂಡಿದ್ದೇವು. ದಿನೇಶ್ ಅವರ ಬಗ್ಗೆ ನಾನು ಹೇಳ ಬಯಸುವುದೇನೆಂದರೆ, ಅವರು ಎಂದಿಗೂ ನಿಲ್ಲಲಿಲ್ಲ. ಅವರು ಮೊದಲಿನಿಂದಲೂ ಶ್ರೇಷ್ಠ ಬ್ಯಾಟ್ಸ್‌ಮನ್‌. ಮೈದಾನದ ಹೊರಗೂ ದಿನೇಶ್ ಜೊತೆ ಮಾತನಾಡುತ್ತೇನೆ ಮತ್ತು ಕ್ರಿಕೆಟ್ ಜೊತೆಗೆ ಹಲವು ವಿಷಯಗಳ ಬಗ್ಗೆ ಅವರಿಗೆ ಜ್ಞಾನವಿದೆ. ನನ್ನ ಐಪಿಎಲ್ 2022 ರ ಸೀಸನ್ ಸರಿಯಾಗಿ ನಡೆಯದಿದ್ದಾಗ, ನಾನು ದಿನೇಶ್ ಅವರೊಂದಿಗೆ ಮಾತನಾಡಿದೆ ಮತ್ತು ಅವರು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿದರು, ಅದು ನನಗೆ ಇಂದಿಗೂ ನೆನಪಿದೆ ಎಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Fri, 24 May 24

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ