IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!

IPL 2024 Final: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 17ನೇ ಆವೃತ್ತಿಯ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್​ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ.

IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!
ಕೆಕೆಆರ್
Follow us
|

Updated on:May 26, 2024 | 10:49 PM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (MA Chidambaram Stadium) ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವಿನ 17ನೇ ಆವೃತ್ತಿಯ ಐಪಿಎಲ್​ನ ಫೈನಲ್ (IPL 2024 Final) ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್​ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ. ಈ ಮೂಲಕ ಅಧಿಕ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ತಂಡಗಳ ಪೈಕಿ ಕೆಕೆಆರ್​ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ತಲಾ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿವೆ. ಫೈನಲ್ ಪಂದ್ಯದಲ್ಲಿ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದನ್ನು ಬಿಟ್ಟರೆ, ಉಳಿದಂತೆ ಇಡೀ ಪಂದ್ಯದಲ್ಲಿ ಎಲ್ಲಿಯೂ ಗೆಲುವಿಗಾಗಿ ಹೋರಾಟ ನೀಡಲಿಲ್ಲ. ಹೀಗಾಗಿ ಕೆಕೆಆರ್ ತಂಡ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸಿತು.

ಹೈದರಾಬಾದ್​ಗೆ ಕಳಪೆ ಆರಂಭ

ಮೇಲಿ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹೈದರಾಬಾದ್ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಕೆಕೆಆರ್​ ವೇಗಿಗಳು ಸಾಭೀತು ಪಡಿಸಿದರು. ಮೊದಲ ಓವರ್​ನಲ್ಲೇ ವೇಗಿ ಮಿಚೆಲ್ ಸ್ಟಾರ್ಕ್, ಅಭಿಷೇಕ್ ಶರ್ಮಾರ ವಿಕೆಟ್ ಉರುಳಿಸಿದರು. ಮತ್ತೊಬ್ಬ ಸ್ಫೋಟಕ ಬ್ಯಾಟರ್ ಟ್ರಾವಿಸ್​ ಹೆಡ್​ಗೆ ಈ ಪಂದ್ಯದಲ್ಲೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡ ಪಂದ್ಯದ ಮೊದಲ 6 ಓವರ್‌ಗಳ ಅಂತ್ಯಕ್ಕೆ 3 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

IPL: ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಆಡಿದ ಆಟಗಾರ ಯಾರು ಗೊತ್ತಾ?

113 ರನ್​​ಗಳಿಗೆ ಹೈದರಾಬಾದ್ ಆಲೌಟ್

ಇದಾದ ಬಳಿಕ ಸ್ಕೋರ್ 62 ರನ್ ಆಗುವಷ್ಟರಲ್ಲಿ ಅರ್ಧದಷ್ಟು ತಂಡ ಪೆವಿಲಿಯನ್ ಸೇರಿಕೊಂಡಿತ್ತು. ಇಲ್ಲಿಂದ ಹೈದರಾಬಾದ್​ ತಂಡಕ್ಕೆ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವುದು ಅಸಾಧ್ಯವೆನಿಸಿತು. ಇಡೀ ಪಂದ್ಯದಲ್ಲಿ ಹೈದರಾಬಾದ್​ ಬ್ಯಾಟರ್​ಗಳ ಮೇಲೆ ಸವಾರಿ ಮಾಡಿದ ಕೆಕೆಆರ್ ಬೌಲರ್‌ಗಳು ಹೈದರಾಬಾದ್ ಇನ್ನಿಂಗ್ಸ್ ಅನ್ನು ಕೇವಲ 113 ರನ್‌ಗಳಿಗೆ ಸೀಮಿತಗೊಳಿಸಿದರು. ಕೆಕೆಆರ್ ಪರ ಬೌಲಿಂಗ್​ನಲ್ಲಿ ಆಂಡ್ರೆ ರಸೆಲ್ ಗರಿಷ್ಠ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಮತ್ತು ಹರ್ಷಿತ್ ರಾಣಾ ತಲಾ 2 ವಿಕೆಟ್ ಪಡೆದರು. ಉಳಿದಂತೆ ವೈಭವ್ ಅರೋರಾ, ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಅಲ್ಪಮೊತ್ತಕೆ ನರೈನ್ ಔಟ್

ಹೈದರಾಬಾದ್ ತಂಡವನ್ನು ಕೇವಲ 113 ರನ್​ಗಳಿಗೆ ಸೀಮಿತಗೊಳಿಸುವಲ್ಲಿ ಕೆಕೆಆರ್ ತಂಡದ ಬೌಲರ್‌ಗಳು ಯಶಸ್ವಿಯಾದರೆ, ಆ ನಂತರ ಗುರಿ ಬೆನ್ನಟ್ಟಿದ ವೇಳೆ ತಂಡದ ಬ್ಯಾಟರ್​​ಗಳಿಂದಲೂ ಅದ್ಭುತ ಪ್ರದರ್ಶನ ಕಂಡುಬಂತು. ಆದರೆ ಇಡೀ ಲೀಗ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದ ಸುನಿಲ್ ನರೈನ್ ಕೇವಲ 6 ರನ್‌ಗಳಿಗೆ ಪ್ಯಾಟ್ ಕಮಿನ್ಸ್‌ಗೆ ಬಲಿಯಾದರು. ಇದಾದ ಬಳಿಕ ಬ್ಯಾಟಿಂಗ್​ಗೆ ಬಂದ ವೆಂಕಟೇಶ್ ಅಯ್ಯರ್ ರಹಮಾನುಲ್ಲಾ ಗುರ್ಬಾಜ್ ಜತೆಗೂಡಿ ಆಕ್ರಮಣಕಾರಿ ಆಟ ಪ್ರದರ್ಶಿಸಿ ತಂಡದ ಸ್ಕೋರ್ ಅನ್ನು ಮೊದಲ 6 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 72 ರನ್​ಗಳಿಗೆ ಕೊಂಡೊಯ್ದರು.

ಗೆಲುವಿನ ಅರ್ಧಶತಕ ಸಿಡಿಸಿದ ವೆಂಕಟೇಶ್

ಇವರಿಬ್ಬರು ಎರಡನೇ ವಿಕೆಟ್‌ಗೆ 45 ಎಸೆತಗಳಲ್ಲಿ 91 ರನ್‌ಗಳ ಜೊತೆಯಾಟವನ್ನು ಮಾಡುವ ಮೂಲಕ ಪಂದ್ಯವನ್ನು ಸಂಪೂರ್ಣ ಏಕಪಕ್ಷೀಯವಾಗಿಸಿದರು. ಗುರ್ಬಾಜ್ 39 ರನ್‌ಗಳಿಸಿ ವಿಕೆಟ್ ಒಪ್ಪಿಸಿದರೆ, ವೆಂಕಟೇಶ್ ಅಯ್ಯರ್ 52 ರನ್‌ಗಳ ಅಜೇಯ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಹೈದರಾಬಾದ್ ಪರ ಈ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ಮತ್ತು ಶಹಬಾಜ್ ಅಹ್ಮದ್ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Sun, 26 May 24

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ