AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!

IPL 2024 Final: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ 17ನೇ ಆವೃತ್ತಿಯ ಐಪಿಎಲ್​ನ ಫೈನಲ್ ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್​ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ.

IPL 2024 Final: ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಕಿರೀಟ ತೊಟ್ಟ ಕೆಕೆಆರ್​..!
ಕೆಕೆಆರ್
ಪೃಥ್ವಿಶಂಕರ
|

Updated on:May 26, 2024 | 10:49 PM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (MA Chidambaram Stadium) ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ (Kolkata Knight Riders vs Sunrisers Hyderabad) ನಡುವಿನ 17ನೇ ಆವೃತ್ತಿಯ ಐಪಿಎಲ್​ನ ಫೈನಲ್ (IPL 2024 Final) ಪಂದ್ಯದಲ್ಲಿ ಏಕಪಕ್ಷೀಯವಾಗಿ ಹೈದರಾಬಾದ್ ತಂಡವನ್ನು ಮಣಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಕೆಕೆಆರ್​ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್​ ಪಟ್ಟಕ್ಕೇರಿದೆ. ಈ ಮೂಲಕ ಅಧಿಕ ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ತಂಡಗಳ ಪೈಕಿ ಕೆಕೆಆರ್​ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ತಲಾ 5 ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿವೆ. ಫೈನಲ್ ಪಂದ್ಯದಲ್ಲಿ ಹೈದರಾಬಾದ್ ತಂಡ ಟಾಸ್ ಗೆದ್ದಿದ್ದನ್ನು ಬಿಟ್ಟರೆ, ಉಳಿದಂತೆ ಇಡೀ ಪಂದ್ಯದಲ್ಲಿ ಎಲ್ಲಿಯೂ ಗೆಲುವಿಗಾಗಿ ಹೋರಾಟ ನೀಡಲಿಲ್ಲ. ಹೀಗಾಗಿ ಕೆಕೆಆರ್ ತಂಡ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸಿತು.

ಹೈದರಾಬಾದ್​ಗೆ ಕಳಪೆ ಆರಂಭ

ಮೇಲಿ ಹೇಳಿದಂತೆ ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹೈದರಾಬಾದ್ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಕೆಕೆಆರ್​ ವೇಗಿಗಳು ಸಾಭೀತು ಪಡಿಸಿದರು. ಮೊದಲ ಓವರ್​ನಲ್ಲೇ ವೇಗಿ ಮಿಚೆಲ್ ಸ್ಟಾರ್ಕ್, ಅಭಿಷೇಕ್ ಶರ್ಮಾರ ವಿಕೆಟ್ ಉರುಳಿಸಿದರು. ಮತ್ತೊಬ್ಬ ಸ್ಫೋಟಕ ಬ್ಯಾಟರ್ ಟ್ರಾವಿಸ್​ ಹೆಡ್​ಗೆ ಈ ಪಂದ್ಯದಲ್ಲೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡ ಪಂದ್ಯದ ಮೊದಲ 6 ಓವರ್‌ಗಳ ಅಂತ್ಯಕ್ಕೆ 3 ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

IPL: ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಆಡಿದ ಆಟಗಾರ ಯಾರು ಗೊತ್ತಾ?

113 ರನ್​​ಗಳಿಗೆ ಹೈದರಾಬಾದ್ ಆಲೌಟ್

ಇದಾದ ಬಳಿಕ ಸ್ಕೋರ್ 62 ರನ್ ಆಗುವಷ್ಟರಲ್ಲಿ ಅರ್ಧದಷ್ಟು ತಂಡ ಪೆವಿಲಿಯನ್ ಸೇರಿಕೊಂಡಿತ್ತು. ಇಲ್ಲಿಂದ ಹೈದರಾಬಾದ್​ ತಂಡಕ್ಕೆ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುವುದು ಅಸಾಧ್ಯವೆನಿಸಿತು. ಇಡೀ ಪಂದ್ಯದಲ್ಲಿ ಹೈದರಾಬಾದ್​ ಬ್ಯಾಟರ್​ಗಳ ಮೇಲೆ ಸವಾರಿ ಮಾಡಿದ ಕೆಕೆಆರ್ ಬೌಲರ್‌ಗಳು ಹೈದರಾಬಾದ್ ಇನ್ನಿಂಗ್ಸ್ ಅನ್ನು ಕೇವಲ 113 ರನ್‌ಗಳಿಗೆ ಸೀಮಿತಗೊಳಿಸಿದರು. ಕೆಕೆಆರ್ ಪರ ಬೌಲಿಂಗ್​ನಲ್ಲಿ ಆಂಡ್ರೆ ರಸೆಲ್ ಗರಿಷ್ಠ 3 ವಿಕೆಟ್ ಪಡೆದರೆ, ಮಿಚೆಲ್ ಸ್ಟಾರ್ಕ್ ಮತ್ತು ಹರ್ಷಿತ್ ರಾಣಾ ತಲಾ 2 ವಿಕೆಟ್ ಪಡೆದರು. ಉಳಿದಂತೆ ವೈಭವ್ ಅರೋರಾ, ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಅಲ್ಪಮೊತ್ತಕೆ ನರೈನ್ ಔಟ್

ಹೈದರಾಬಾದ್ ತಂಡವನ್ನು ಕೇವಲ 113 ರನ್​ಗಳಿಗೆ ಸೀಮಿತಗೊಳಿಸುವಲ್ಲಿ ಕೆಕೆಆರ್ ತಂಡದ ಬೌಲರ್‌ಗಳು ಯಶಸ್ವಿಯಾದರೆ, ಆ ನಂತರ ಗುರಿ ಬೆನ್ನಟ್ಟಿದ ವೇಳೆ ತಂಡದ ಬ್ಯಾಟರ್​​ಗಳಿಂದಲೂ ಅದ್ಭುತ ಪ್ರದರ್ಶನ ಕಂಡುಬಂತು. ಆದರೆ ಇಡೀ ಲೀಗ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದ ಸುನಿಲ್ ನರೈನ್ ಕೇವಲ 6 ರನ್‌ಗಳಿಗೆ ಪ್ಯಾಟ್ ಕಮಿನ್ಸ್‌ಗೆ ಬಲಿಯಾದರು. ಇದಾದ ಬಳಿಕ ಬ್ಯಾಟಿಂಗ್​ಗೆ ಬಂದ ವೆಂಕಟೇಶ್ ಅಯ್ಯರ್ ರಹಮಾನುಲ್ಲಾ ಗುರ್ಬಾಜ್ ಜತೆಗೂಡಿ ಆಕ್ರಮಣಕಾರಿ ಆಟ ಪ್ರದರ್ಶಿಸಿ ತಂಡದ ಸ್ಕೋರ್ ಅನ್ನು ಮೊದಲ 6 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 72 ರನ್​ಗಳಿಗೆ ಕೊಂಡೊಯ್ದರು.

ಗೆಲುವಿನ ಅರ್ಧಶತಕ ಸಿಡಿಸಿದ ವೆಂಕಟೇಶ್

ಇವರಿಬ್ಬರು ಎರಡನೇ ವಿಕೆಟ್‌ಗೆ 45 ಎಸೆತಗಳಲ್ಲಿ 91 ರನ್‌ಗಳ ಜೊತೆಯಾಟವನ್ನು ಮಾಡುವ ಮೂಲಕ ಪಂದ್ಯವನ್ನು ಸಂಪೂರ್ಣ ಏಕಪಕ್ಷೀಯವಾಗಿಸಿದರು. ಗುರ್ಬಾಜ್ 39 ರನ್‌ಗಳಿಸಿ ವಿಕೆಟ್ ಒಪ್ಪಿಸಿದರೆ, ವೆಂಕಟೇಶ್ ಅಯ್ಯರ್ 52 ರನ್‌ಗಳ ಅಜೇಯ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಹೈದರಾಬಾದ್ ಪರ ಈ ಪಂದ್ಯದಲ್ಲಿ ಪ್ಯಾಟ್ ಕಮ್ಮಿನ್ಸ್ ಮತ್ತು ಶಹಬಾಜ್ ಅಹ್ಮದ್ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:24 pm, Sun, 26 May 24

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ