AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇನ್ಸ್​ಟಾಗ್ರಾಮ್​ನಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ರಾ ರೋಹಿತ್-ಹಾರ್ದಿಕ್?

IPL 2024: ಐಪಿಎಲ್ 2024 ರ ಮೊದಲು ಮುಂಬೈ ಇಂಡಿಯನ್ಸ್‌ ತಂಡದ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಲಾರಂಭಿಸಿವೆ. ಈಗ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಇನ್​ಸ್​ಟ್ರಾಗ್ರಾಂನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಆರೋಪ ಕೇಳಿ ಬರುತ್ತಿದ್ದರೂ ಇದರ ಹಿಂದೆ ಎಷ್ಟು ಸತ್ಯಾಂಶವಿದೆ ಎಂಬುದು ಯಾರಿಗೂ ತಿಳಿದಿಲ್ಲ.

IPL 2024: ಇನ್ಸ್​ಟಾಗ್ರಾಮ್​ನಲ್ಲಿ ಒಬ್ಬರನ್ನೊಬ್ಬರು ಅನ್ ಫಾಲೋ ಮಾಡಿದ್ರಾ ರೋಹಿತ್-ಹಾರ್ದಿಕ್?
ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ
ಪೃಥ್ವಿಶಂಕರ
| Edited By: |

Updated on:Feb 14, 2024 | 3:06 PM

Share

2024 ರ ಐಪಿಎಲ್ (IPL 2024) ಆರಂಭಕ್ಕೂ ಮೊದಲು ಮುಂಬೈ ಇಂಡಿಯನ್ಸ್ (Mumbai Indians) ಫ್ರಾಂಚೈಸ್ ತಂಡದಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಅದರಂತೆ ರೋಹಿತ್ ಶರ್ಮಾ (Rohit Sharma) ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಅವರ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಅವರಿಗೆ ಜವಾಬ್ದಾರಿ ನೀಡಲಾಗಿದೆ. ವಾಸ್ತವವಾಗಿ ಕಳೆದೆರಡು ಆವೃತ್ತಿಗಳಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವವಹಿಸಿಕೊಂಡಿದ್ದ ಪಾಂಡ್ಯರನ್ನು ಮುಂಬೈ ತಂಡಕ್ಕೆ ಟ್ರೇಡ್ ಮಾಡಿಕೊಳ್ಳಲಾಗಿತ್ತು. ಆ ಬಳಿಕ ಅವರಿಗೆ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಗಿತ್ತು. ತಂಡದ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ರೋಹಿತ್ ಶರ್ಮಾ ಅಭಿಮಾನಿಗಳು ಕೆಂಡಕಾರಿದ್ದರು. ಇದಾದ ನಂತರ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಯೂ ಹರಿದಾಡಿತ್ತು. ಇದೀಗ ಹೊಸ ಗಾಳಿ ಸುದ್ದಿಯೊಂದು ಹರಿದಾಡುತ್ತಿದ್ದು, ರೋಹಿತ್ ಮತ್ತು ಹಾರ್ದಿಕ್ ಪಾಂಡ್ಯ ತಮ್ಮ ಇನ್‌ಸ್ಟಾಗ್ರಾಮ್‌ನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ವಾಸ್ತವವಾಗಿ, ಹಾರ್ದಿಕ್ ಮತ್ತು ರೋಹಿತ್ ಇನ್‌ಸ್ಟಾಗ್ರಾಮ್‌ನಿಂದ ಪರಸ್ಪರ ಅನ್‌ಫಾಲೋ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಳ್ಳಲಾಗುತ್ತಿದೆ. ಈ ಹೇಳಿಕೆಯ ಸತ್ಯಾಸತ್ಯತೆ ತಿಳಿಯಲು, ನಾವು ಅವರಿಬ್ಬರ ಪ್ರೊಫೈಲ್‌ಗಳನ್ನು ಪರಿಶೀಲಿಸಿದ್ದೇವು. ಅದರಲ್ಲಿ ತಿಳಿದುಬಂದಂತೆ ರೋಹಿತ್ ಮತ್ತು ಹಾರ್ದಿಕ್ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಆದರೆ ಈ ಹಿಂದೆ ಇಬ್ಬರೂ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿದ್ದರೋ, ಇಲ್ಲವೋ ಗೊತ್ತಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಈ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ.

ಮುಂಬೈ ತೊರೆಯುತ್ತಾರಾ ರೋಹಿತ್?

ಇದಲ್ಲದೆ ಕಳೆದ ಹಲವಾರು ದಿನಗಳಿಂದ ರೋಹಿತ್ ಶರ್ಮಾ ಐಪಿಎಲ್ 2024 ರ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಬಹುದು ಎಂದು ಸೋಶಿಯಲ್ ಮೀಡಿಯಾದಲ್ಲಿ ವರದಿಯಾಗಿದೆ. ವಾಸ್ತವವಾಗಿ, ಮುಂಬೈ ಇಂಡಿಯನ್ಸ್‌ನ ನಾಯಕತ್ವ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಿದ್ದಕ್ಕಾಗಿ ಅವರ ಪತ್ನಿ ರಿತಿಕಾ ಸಜ್ದೆ ಕೂಡ ತುಂಬಾ ನಿರಾಶೆಗೊಂಡಿದ್ದಾರೆ. ಇದೀಗ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಇನ್‌ಸ್ಟಾಗ್ರಾಮ್‌ನಿಂದ ಅನ್‌ಫಾಲೋ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಆದರೆ ಈ ವಿಷಯಗಳಲ್ಲಿ ಎಷ್ಟು ಸತ್ಯವಿದೆ ಎಂಬುದು ಯಾರಿಗೂ ತಿಳಿದಿಲ್ಲ.

ಹಾರ್ದಿಕ್ ಐಪಿಎಲ್ ವೃತ್ತಿ ಬದುಕು

ರೋಹಿತ್ ಸುದೀರ್ಘ ಸಮಯದವರೆಗೆ ಮುಂಬೈ ತಂಡದ ನಾಯಕತ್ವ ನಿರ್ವಹಿಸಿ ತಂಡವನ್ನು ಪ್ರಶಸ್ತಿಯತ್ತ ಮುನ್ನಡೆಸಿದ್ದರು ಎಂಬುದು ಗಮನಾರ್ಹ. ಆದರೆ ತಂಡದ ಮ್ಯಾನೇಜ್‌ಮೆಂಟ್ ಈಗ ಪಾಂಡ್ಯಗೆ ನಾಯಕನ ಸ್ಥಾನ ನೀಡಿದೆ. ಈ ಹಿಂದೆ ಹಾರ್ದಿಕ್ ಗುಜರಾತ್ ಟೈಟಾನ್ಸ್ ಪರ ಆಡಿದ್ದು, ಅಲ್ಲಿಯೂ ನಾಯಕತ್ವಹಿಸುತ್ತಿದ್ದರು. ಹಾರ್ದಿಕ್ ನಾಯಕತ್ವದಲ್ಲಿ ಗುಜರಾತ್ ಅದ್ಭುತ ಪ್ರದರ್ಶನ ನೀಡಿದಲ್ಲದೆ ಒಮ್ಮೆ ಐಪಿಎಲ್ ಪ್ರಶಸ್ತಿಯನ್ನೂ ಗೆದ್ದಿತ್ತು.ಅಲ್ಲದೆ ಈ ವೇಳೆ ಹಾರ್ದಿಕ್ ಅವರ ವೈಯಕ್ತಿಕ ಪ್ರದರ್ಶನವೂ ಉತ್ತಮವಾಗಿತ್ತು. ಐಪಿಎಲ್‌ನಲ್ಲಿ ಇದುವರೆಗೆ 123 ಪಂದ್ಯಗಳನ್ನು ಆಡಿರುವ ಪಾಂಡ್ಯ 2309 ರನ್ ಕಲೆಹಾಕುವುದರೊಂದಿಗೆ 53 ವಿಕೆಟ್ ಸಹ ಕಬಳಿಸಿದ್ದಾರೆ.

ರೋಹಿತ್ ಐಪಿಎಲ್ ವೃತ್ತಿ ಜೀವನ

ರೋಹಿತ್ ಶರ್ಮಾ ಬಗ್ಗೆ ಮಾತನಾಡುವುದಾದರೆ, ಅವರು ಐಪಿಎಲ್‌ನಲ್ಲಿ ಇದುವರೆಗೆ 243 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 42 ಅರ್ಧಶತಕಗಳನ್ನೊಳಗೊಂಡಂತೆ 6211 ರನ್ ಗಳಿಸಿದ್ದಾರೆ. ಇದರಲ್ಲಿ ಅವರ ಅತ್ಯುತ್ತಮ ಐಪಿಎಲ್ ಸ್ಕೋರ್ 109 ರನ್. ಬೌಲಿಂಗ್‌ನಲ್ಲೂ ಕೈಚೆಳಕ ತೋರಿರುವ ರೋಹಿತ್ ಐಪಿಎಲ್‌ನಲ್ಲಿ 15 ವಿಕೆಟ್ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Thu, 8 February 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ