AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಬಾರಿಯ ಐಪಿಎಲ್​ನೊಂದಿಗೆ 3 ಆಟಗಾರರು ವಿದಾಯ..!

IPL 2024: ಈ ಬಾರಿಯ ಐಪಿಎಲ್​ ಮಾರ್ಚ್​ ಅಂತ್ಯದಲ್ಲಿ ಶುರುವಾಗಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿದ್ದಾರೆ. ಇದಕ್ಕೂ ಮುನ್ನ ಡಿಸೆಂಬರ್ 19 ರಂದು ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 77 ಸ್ಲಾಟ್​ಗಳಿಗಾಗಿ ಬಿಡ್ಡಿಂಗ್ ನಡೆಯಲಿದೆ.

TV9 Web
| Edited By: |

Updated on:Dec 16, 2023 | 1:14 PM

Share
ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತದ ಮೂವರು ಸ್ಟಾರ್ ಆಟಗಾರರು ಈ ಬಾರಿಯ ಐಪಿಎಲ್​ ಮೂಲಕ ವಿದಾಯ ಹೇಳಲಿದ್ದಾರಂತೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಭಾರತದ ಮೂವರು ಸ್ಟಾರ್ ಆಟಗಾರರು ಈ ಬಾರಿಯ ಐಪಿಎಲ್​ ಮೂಲಕ ವಿದಾಯ ಹೇಳಲಿದ್ದಾರಂತೆ.

1 / 6
ಇಂತಹದೊಂದು ಶಾಕಿಂಗ್ ಸುದ್ದಿ ನೀಡಿದ್ದು ಮತ್ಯಾರೂ ಅಲ್ಲ, ಸೌತ್ ಆಫ್ರಿಕಾ ತಂಡದ ಮಾಜಿ ಕಾರ್ಯಕ್ಷಮತೆ ವಿಶ್ಲೇಷಕ ಪ್ರಸನ್ನ ಅಗೋರಂ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಸನ್ನ ಅವರು, ಭಾರತದ ಮೂವರು ದಿಗ್ಗಜ ಆಟಗಾರರು ಕೊನೆಯ ಬಾರಿ ಐಪಿಎಲ್​ನಲ್ಲಿ (IPL 2024) ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಇಂತಹದೊಂದು ಶಾಕಿಂಗ್ ಸುದ್ದಿ ನೀಡಿದ್ದು ಮತ್ಯಾರೂ ಅಲ್ಲ, ಸೌತ್ ಆಫ್ರಿಕಾ ತಂಡದ ಮಾಜಿ ಕಾರ್ಯಕ್ಷಮತೆ ವಿಶ್ಲೇಷಕ ಪ್ರಸನ್ನ ಅಗೋರಂ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಸನ್ನ ಅವರು, ಭಾರತದ ಮೂವರು ದಿಗ್ಗಜ ಆಟಗಾರರು ಕೊನೆಯ ಬಾರಿ ಐಪಿಎಲ್​ನಲ್ಲಿ (IPL 2024) ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

2 / 6
ಆದರೆ ಆ ಮೂವರು ಆಟಗಾರರು ಯಾರು ಎಂಬುದನ್ನು ಪ್ರಸನ್ನ ಅವರು ಬಹಿರಂಗಪಡಿಸಿಲ್ಲ. ಇದಾಗ್ಯೂ ಈ ಆಟಗಾರರು ಈ ಹಿಂದೆ ಐಪಿಎಲ್ ಟ್ರೋಫಿ ಗೆದ್ದಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇಲ್ಲ ಎಂಬುದು ಖಚಿತ. ಏಕೆಂದರೆ ಆರ್​ಸಿಬಿ ಇದುವರೆಗೆ ಟ್ರೋಫಿ ಎತ್ತಿ ಹಿಡಿದಿಲ್ಲ.

ಆದರೆ ಆ ಮೂವರು ಆಟಗಾರರು ಯಾರು ಎಂಬುದನ್ನು ಪ್ರಸನ್ನ ಅವರು ಬಹಿರಂಗಪಡಿಸಿಲ್ಲ. ಇದಾಗ್ಯೂ ಈ ಆಟಗಾರರು ಈ ಹಿಂದೆ ಐಪಿಎಲ್ ಟ್ರೋಫಿ ಗೆದ್ದಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಹೀಗಾಗಿ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಇಲ್ಲ ಎಂಬುದು ಖಚಿತ. ಏಕೆಂದರೆ ಆರ್​ಸಿಬಿ ಇದುವರೆಗೆ ಟ್ರೋಫಿ ಎತ್ತಿ ಹಿಡಿದಿಲ್ಲ.

3 / 6
ಇತ್ತ ಪ್ರಸನ್ನ ಅವರ ಟ್ವೀಟ್ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಹೆಸರು ಮುನ್ನಲೆಗೆ ಬಂದಿದೆ. ಏಕೆಂದರೆ ಈ ಮೂವರು ಆಟಗಾರರು ಈಗಾಗಲೇ ಐಪಿಎಲ್ ಟ್ರೋಫಿ ಗೆದ್ದಿದ್ದಾರೆ. ಇಲ್ಲಿ ಅಶ್ವಿನ್ ಅವರಿಗೆ 37 ವರ್ಷವಾಗಿದ್ದರೆ, ರೋಹಿತ್ ಶರ್ಮಾ ಅವರ ವಯಸ್ಸು 36 ವರ್ಷಗಳು.

ಇತ್ತ ಪ್ರಸನ್ನ ಅವರ ಟ್ವೀಟ್ ಬೆನ್ನಲ್ಲೇ ಮಹೇಂದ್ರ ಸಿಂಗ್ ಧೋನಿ, ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಹೆಸರು ಮುನ್ನಲೆಗೆ ಬಂದಿದೆ. ಏಕೆಂದರೆ ಈ ಮೂವರು ಆಟಗಾರರು ಈಗಾಗಲೇ ಐಪಿಎಲ್ ಟ್ರೋಫಿ ಗೆದ್ದಿದ್ದಾರೆ. ಇಲ್ಲಿ ಅಶ್ವಿನ್ ಅವರಿಗೆ 37 ವರ್ಷವಾಗಿದ್ದರೆ, ರೋಹಿತ್ ಶರ್ಮಾ ಅವರ ವಯಸ್ಸು 36 ವರ್ಷಗಳು.

4 / 6
ಹೀಗಾಗಿ 42 ವರ್ಷದ ಮಹೇಂದ್ರ ಸಿಂಗ್ ಧೋನಿಯೊಂದಿಗೆ ಮುಂಬೈ ಇಂಡಿಯನ್ಸ್​ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ  ರಾಜಸ್ಥಾನ್ ರಾಯಲ್ಸ್ ತಂಡದ ಹಿರಿಯ ಸ್ಪಿನ್ನರ್ ಅಶ್ವಿನ್ ವಿದಾಯ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಹೀಗಾಗಿ 42 ವರ್ಷದ ಮಹೇಂದ್ರ ಸಿಂಗ್ ಧೋನಿಯೊಂದಿಗೆ ಮುಂಬೈ ಇಂಡಿಯನ್ಸ್​ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಹಿರಿಯ ಸ್ಪಿನ್ನರ್ ಅಶ್ವಿನ್ ವಿದಾಯ ಹೇಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

5 / 6
ಅಂದಹಾಗೆ ಪ್ರಸನ್ನ ಅಗೋರಂ ಈ ಹಿಂದೆ ಐಪಿಎಲ್​​ನಲ್ಲಿ ಆರ್​ಸಿಬಿ, ರೈಸಿಂಗ್ ಪುಣೆ ಜೈಂಟ್ಸ್, ಡೆಲ್ಲಿ ಡೇರ್​ ಡೇವಿಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಹೇಳಿಕೆಯಂತೆ ಈ ಬಾರಿ ಮೂವರು ಆಟಗಾರರು ವಿದಾಯ ಹೇಳುವುದು ಬಹುತೇಕ ಖಚಿತ. ಆದರೆ ಆ ಆಟಗಾರರು ಯಾರೆಲ್ಲಾ ಎಂಬುದನ್ನು ತಿಳಿಯಲು ಐಪಿಎಲ್ ಆರಂಭದವರೆಗೆ ಕಾಯಲೇಬೇಕು. (ಚಿತ್ರ- ಎಬಿಡಿ ಜೊತೆ ಪ್ರಸನ್ನ ಅಗೋರಂ)

ಅಂದಹಾಗೆ ಪ್ರಸನ್ನ ಅಗೋರಂ ಈ ಹಿಂದೆ ಐಪಿಎಲ್​​ನಲ್ಲಿ ಆರ್​ಸಿಬಿ, ರೈಸಿಂಗ್ ಪುಣೆ ಜೈಂಟ್ಸ್, ಡೆಲ್ಲಿ ಡೇರ್​ ಡೇವಿಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರ ಕಾರ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಹೇಳಿಕೆಯಂತೆ ಈ ಬಾರಿ ಮೂವರು ಆಟಗಾರರು ವಿದಾಯ ಹೇಳುವುದು ಬಹುತೇಕ ಖಚಿತ. ಆದರೆ ಆ ಆಟಗಾರರು ಯಾರೆಲ್ಲಾ ಎಂಬುದನ್ನು ತಿಳಿಯಲು ಐಪಿಎಲ್ ಆರಂಭದವರೆಗೆ ಕಾಯಲೇಬೇಕು. (ಚಿತ್ರ- ಎಬಿಡಿ ಜೊತೆ ಪ್ರಸನ್ನ ಅಗೋರಂ)

6 / 6

Published On - 1:12 pm, Sat, 16 December 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು