AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್

IPL 2024: ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಈವರೆಗೆ 264 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 24 ಅರ್ಧಶತಕಗಳೊಂದಿಗೆ 5243 ರನ್​ ಕಲೆಹಾಕಿದ್ದಾರೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ನಾಯಕತ್ವದ ತ್ಯಜಿಸಿ ಆಟಗಾರನಾಗಿ ಕಾಣಿಸಿಕೊಂಡಿರುವ ಧೋನಿ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಧೋನಿಗೆ 42 ವರ್ಷ ವಯಸ್ಸಾಗಿದ್ದು, ಹೀಗಾಗಿ ಮುಂದಿನ ಸೀಸನ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್
MS Dhoni
TV9 Web
| Edited By: |

Updated on: May 21, 2024 | 8:29 AM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ವಿಡಿಯೋವೊಂದು ವೈರಲ್ ಆಗಿದೆ. ಹೀಗೆ ಏಕಾಏಕಿ ಧೋನಿಯ ವಿಡಿಯೋ ವೈರಲ್ ಆಗಲು ಮುಖ್ಯ ಕಾರಣ ಅವರು ಬಾರ್​ನಲ್ಲಿ ಕಾಣಿಸಿಕೊಂಡಿರುವುದು. ಆರ್​ಸಿಬಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಸಿಎಸ್​ಕೆ ತಂಡವು ಐಪಿಎಲ್ 2024 ರಿಂದ ಹೊರಬಿದ್ದಿದೆ. ಈ ಸೋಲಿನ ಬಳಿಕ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಬಾರ್​ನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಟ್ಯಾಗ್​ಲೈನ್​ನೊಂದಿಗೆ ವಿಡಿಯೋ ವೈರಲ್ ಆಗಿದೆ.

ಮೇಲ್ನೋಟಕ್ಕೆ ಈ ವಿಡಿಯೋ ಇತ್ತೀಚಿನದಲ್ಲ. ಏಕೆಂದರೆ ಸಿಎಸ್​ಕೆ ತಂಡದ ಸೋಲಿನ ಬಳಿಕ ಹತಾಶರಾಗಿದ್ದ ಧೋನಿ ಅಂದೇ ತವರಿಗೆ ತೆರಳಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಆರ್​ಸಿಬಿ ವಿರುದ್ಧದ ಸೋಲಿನ ಬಳಿಕ ಜಡೇಜಾ ಜೊತೆ ಬಾರ್​ನಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿಲ್ಲ.

ಇದಾಗ್ಯೂ ಈ ವಿಡಿಯೋ ಈ ಬಾರಿಯ ಐಪಿಎಲ್ ಸಂದರ್ಭದ್ದು ಎಂಬುದು ವಿಶೇಷ. ಏಕೆಂದರೆ ಧೋನಿ ಹಲವು ವರ್ಷಗಳ ಬಳಿಕ ಉದ್ದನೆಯ ಕೂದಲಿನೊಂದಿಗೆ ಕಾಣಿಸಿಕೊಂಡಿದ್ದರು. ಈ ವಿಡಿಯೋದಲ್ಲೂ ಲಾಂಗ್ ಹೇರ್ ಸ್ಟೈಲ್​ ಅನ್ನು ಕಾಣಬಹುದು. ಹೀಗಾಗಿ ಇದು ಈ ಬಾರಿಯ ಐಪಿಎಲ್ ವೇಳೆ ಸೆರೆ ಹಿಡಿಯಲಾದ ವಿಡಿಯೋ ಎಂಬುದು ಸ್ಪಷ್ಟ.

ಸದ್ಯ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಬಾರ್​ನಲ್ಲಿ ಚಿಲ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ನಾನಾ ರೀತಿಯ ಮೀಮ್ಸ್​ಗಳು ಕೂಡ ಹರಿದಾಡಲಾರಂಭಿಸಿದೆ.

ಇದನ್ನೂ ಓದಿ: MS Dhoni: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಧೋನಿ

ಹಸ್ತಲಾಘವ ಮಾಡದ ಧೋನಿ:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18 ರಂದು ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 27 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದರೆ, ಅತ್ತ ಸಿಎಸ್​ಕೆ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಈ ರಣರೋಚಕ ಪಂದ್ಯದ ಬಳಿಕ ಸಿಎಸ್​ಕೆ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡಿರಲಿಲ್ಲ ಎಂಬುದೇ ಅಚ್ಚರಿ. ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿ ಸಾಲಿನಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಪಂದ್ಯ ಗೆದ್ದ ಖುಷಿಯಲ್ಲಿದ್ದ ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಧೋನಿ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?