AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್

IPL 2024: ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಈವರೆಗೆ 264 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 24 ಅರ್ಧಶತಕಗಳೊಂದಿಗೆ 5243 ರನ್​ ಕಲೆಹಾಕಿದ್ದಾರೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ನಾಯಕತ್ವದ ತ್ಯಜಿಸಿ ಆಟಗಾರನಾಗಿ ಕಾಣಿಸಿಕೊಂಡಿರುವ ಧೋನಿ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಧೋನಿಗೆ 42 ವರ್ಷ ವಯಸ್ಸಾಗಿದ್ದು, ಹೀಗಾಗಿ ಮುಂದಿನ ಸೀಸನ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್
MS Dhoni
TV9 Web
| Edited By: |

Updated on: May 21, 2024 | 8:29 AM

Share

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅವರ ವಿಡಿಯೋವೊಂದು ವೈರಲ್ ಆಗಿದೆ. ಹೀಗೆ ಏಕಾಏಕಿ ಧೋನಿಯ ವಿಡಿಯೋ ವೈರಲ್ ಆಗಲು ಮುಖ್ಯ ಕಾರಣ ಅವರು ಬಾರ್​ನಲ್ಲಿ ಕಾಣಿಸಿಕೊಂಡಿರುವುದು. ಆರ್​ಸಿಬಿ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋತ ಬಳಿಕ ಸಿಎಸ್​ಕೆ ತಂಡವು ಐಪಿಎಲ್ 2024 ರಿಂದ ಹೊರಬಿದ್ದಿದೆ. ಈ ಸೋಲಿನ ಬಳಿಕ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಬಾರ್​ನಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಟ್ಯಾಗ್​ಲೈನ್​ನೊಂದಿಗೆ ವಿಡಿಯೋ ವೈರಲ್ ಆಗಿದೆ.

ಮೇಲ್ನೋಟಕ್ಕೆ ಈ ವಿಡಿಯೋ ಇತ್ತೀಚಿನದಲ್ಲ. ಏಕೆಂದರೆ ಸಿಎಸ್​ಕೆ ತಂಡದ ಸೋಲಿನ ಬಳಿಕ ಹತಾಶರಾಗಿದ್ದ ಧೋನಿ ಅಂದೇ ತವರಿಗೆ ತೆರಳಿದ್ದರು ಎಂದು ವರದಿಯಾಗಿತ್ತು. ಹೀಗಾಗಿ ಆರ್​ಸಿಬಿ ವಿರುದ್ಧದ ಸೋಲಿನ ಬಳಿಕ ಜಡೇಜಾ ಜೊತೆ ಬಾರ್​ನಲ್ಲಿ ಕಾಣಿಸಿಕೊಂಡಿರುವ ಸಾಧ್ಯತೆಯಿಲ್ಲ.

ಇದಾಗ್ಯೂ ಈ ವಿಡಿಯೋ ಈ ಬಾರಿಯ ಐಪಿಎಲ್ ಸಂದರ್ಭದ್ದು ಎಂಬುದು ವಿಶೇಷ. ಏಕೆಂದರೆ ಧೋನಿ ಹಲವು ವರ್ಷಗಳ ಬಳಿಕ ಉದ್ದನೆಯ ಕೂದಲಿನೊಂದಿಗೆ ಕಾಣಿಸಿಕೊಂಡಿದ್ದರು. ಈ ವಿಡಿಯೋದಲ್ಲೂ ಲಾಂಗ್ ಹೇರ್ ಸ್ಟೈಲ್​ ಅನ್ನು ಕಾಣಬಹುದು. ಹೀಗಾಗಿ ಇದು ಈ ಬಾರಿಯ ಐಪಿಎಲ್ ವೇಳೆ ಸೆರೆ ಹಿಡಿಯಲಾದ ವಿಡಿಯೋ ಎಂಬುದು ಸ್ಪಷ್ಟ.

ಸದ್ಯ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ಬಾರ್​ನಲ್ಲಿ ಚಿಲ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ನಾನಾ ರೀತಿಯ ಮೀಮ್ಸ್​ಗಳು ಕೂಡ ಹರಿದಾಡಲಾರಂಭಿಸಿದೆ.

ಇದನ್ನೂ ಓದಿ: MS Dhoni: ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಧೋನಿ

ಹಸ್ತಲಾಘವ ಮಾಡದ ಧೋನಿ:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 18 ರಂದು ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 27 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಪ್ರವೇಶಿಸಿದರೆ, ಅತ್ತ ಸಿಎಸ್​ಕೆ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಈ ರಣರೋಚಕ ಪಂದ್ಯದ ಬಳಿಕ ಸಿಎಸ್​ಕೆ ತಂಡದ ಮಾಜಿ ನಾಯಕ ಧೋನಿ ಆರ್​ಸಿಬಿ ಆಟಗಾರರೊಂದಿಗೆ ಹಸ್ತಲಾಘವ ಮಾಡಿರಲಿಲ್ಲ ಎಂಬುದೇ ಅಚ್ಚರಿ. ಪಂದ್ಯ ಮುಗಿದ ಬಳಿಕ ಸಿಎಸ್​ಕೆ ಆಟಗಾರರು ಹಸ್ತಲಾಘವ ನೀಡಲು ಸರದಿ ಸಾಲಿನಲ್ಲಿ ನಿಂತಿದ್ದರು. ಈ ಸಾಲಿನಲ್ಲಿ ಧೋನಿ ಮುಂಚೂಣಿಯಲ್ಲಿದ್ದರು. ಆದರೆ ಅತ್ತ ಪಂದ್ಯ ಗೆದ್ದ ಖುಷಿಯಲ್ಲಿದ್ದ ಆರ್​ಸಿಬಿ ಆಟಗಾರರು ಸಂಭ್ರಮದಲ್ಲಿ ತೊಡಗಿಸಿಕೊಂಡಿದ್ದರು.

ಈ ವೇಳೆ ಆರ್​ಸಿಬಿ ಆಟಗಾರರನ್ನು ಕಾಯದೇ ಮಹೇಂದ್ರ ಸಿಂಗ್ ಧೋನಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಧೋನಿ ನಡೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!