AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅತ್ಯದ್ಭುತ ಕ್ಯಾಚ್ ಹಿಡಿದ ರವಿ ಬಿಷ್ಣೋಯ್: ವಿಡಿಯೋ ಇಲ್ಲಿದೆ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್​-17 ರಲ್ಲಿ ಅತ್ಯುತ್ತಮ ಫೀಲ್ಡಿಂಗ್ ಕಂಡು ಬರುತ್ತಿದೆ. ಅದರಲ್ಲೂ ಇದೀಗ ರವಿ ಬಿಷ್ಣೋಯ್ ಹಿಡಿದಿರುವ ಕ್ಯಾಚ್​ವೊಂದು ಎಲ್ಲರನ್ನು ನಿಬ್ಬೆರಗಾಗಿಸಿದೆ. ಇದೀಗ ಬಿಷ್ಣೋಯ್ ಅವರ ಈ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

IPL 2024: ಅತ್ಯದ್ಭುತ ಕ್ಯಾಚ್ ಹಿಡಿದ ರವಿ ಬಿಷ್ಣೋಯ್: ವಿಡಿಯೋ ಇಲ್ಲಿದೆ
Ravi Bishnoi
TV9 Web
| Edited By: |

Updated on: Apr 08, 2024 | 11:22 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 21ನೇ ಪಂದ್ಯದಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದು ರವಿ ಬಿಷ್ಣೋಯ್ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಲ್​ಎಸ್​ಜಿ ತಂಡದ ನಾಯಕ ಕೆಎಲ್ ರಾಹುಲ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮಾರ್ಕಸ್ ಸ್ಟೋಯಿನಿಸ್ (53) ಅವರ ಅರ್ಧಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್ ಪೇರಿಸಿತು.

164 ರನ್​ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ (19) ಬೇಗನೆ ವಿಕೆಟ್ ಒಪ್ಪಿಸಿದರು. ಈ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ (1) ಅವರನ್ನು ಅದ್ಭುತ ಕ್ಯಾಚ್​ನೊಂದಿಗೆ ಪೆವಿಲಿಯನ್​ಗೆ ಕಳುಹಿಸುವಲ್ಲಿ ರವಿ ಬಿಷ್ಣೋಯ್ ಯಶಸ್ವಿಯಾದರು.

ರವಿ ಬಿಷ್ಣೋಯ್ ಎಸೆದ 8ನೇ ಓವರ್​ನ 2ನೇ ಎಸೆತದಲ್ಲಿ ಕೇನ್ ವಿಲಿಯಮ್ಸನ್ ನೇರವಾಗಿ ಹೊಡೆಯಲು ಯತ್ನಿಸಿದ್ದರು. ಆದರೆ ಬಿಷ್ಣೋಯ್ ಗೂಗ್ಲಿಯಿಂದ ಚೆಂಡು ನೇರವಾಗಿ ಗಾಳಿಯಲ್ಲಿ ಚಿಮ್ಮಿತ್ತು. ಕ್ಷಣಾರ್ಧದಲ್ಲಿ ಜಿಗಿದ ರವಿ ಬಿಷ್ಣೋಯ್ ಒಂದೇ ಕೈಯಲ್ಲಿ ಚೆಂಡನ್ನು ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದರು. ಇದೀಗ ಬಿಷ್ಣೋಯ್ ಅವರ ಈ ಅದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ರವಿ ಬಿಷ್ಣೋಯ್ ಹಿಡಿದಿರುವ ಕ್ಯಾಚ್ ವಿಡಿಯೋ:

ಸೋತ ಗುಜರಾತ್ ಟೈಟಾನ್ಸ್:

164 ರನ್​ಗಳ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟಿಂಗ್ ಬೆನ್ನಲುಬು ಮುರಿಯುವಲ್ಲಿ ಯುವ ವೇಗಿ ಯಶ್ ಠಾಕೂರ್ ಯಶಸ್ವಿಯಾದರು. 3.5 ಓವರ್​ಗಳಲ್ಲಿ 30 ರನ್ ನೀಡಿದ ಠಾಕೂರ್ 5 ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಗುಜರಾತ್ ಟೈಟಾನ್ಸ್ ತಂಡವು 18.5 ಓವರ್​ಗಳಲ್ಲಿ 130 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 33 ರನ್​ಗಳ ಜಯ ಸಾಧಿಸಿತು.

ಇದನ್ನೂ ಓದಿ: Dinesh Karthik: RCB ಅಭಿಮಾನಿಗಳು ನಿಷ್ಠಾವಂತರೇ… ಆದರೆ,

ಈ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಮೊದಲೆರಡು ಸ್ಥಾನಗಳಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳಿವೆ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್