AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸೋಲಿನ ಬಳಿಕ ತಂಡದ ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಕಾವ್ಯಾ ಮಾರನ್ ಹೇಳಿದ್ದೇನು? ವಿಡಿಯೋ ನೋಡಿ

IPL 2024: ಕಪ್ ಜಯಿಸುವ ಅವಕಾಶವನ್ನು ಕೈಚೆಲ್ಲಿದ ಹೈದರಾಬಾದ್ ಆಟಗಾರರು ನಿರಾಸೆಯೊಂದಿಗೆ ಮೈದಾನ ತೊರೆದಿದ್ದರು. ತಂಡದ ಒಡತಿ ಕಾವ್ಯಾ ಮಾರನ್ ಕೂಡ ಗ್ಯಾಲರಿಯಲ್ಲಿ ಕುಳಿತು ತಂಡದ ಸೋಲಿಗೆ ಕಣ್ಣೀರು ಸುರಿಸಿದ್ದರು. ಆದರೆ ಈಗ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊವೊಂದು ಹರಿದಾಡುತ್ತಿದ್ದು, ಕಾವ್ಯಾ ಮಾರನ್ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

IPL 2024: ಸೋಲಿನ ಬಳಿಕ ತಂಡದ ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಕಾವ್ಯಾ ಮಾರನ್ ಹೇಳಿದ್ದೇನು? ವಿಡಿಯೋ ನೋಡಿ
ಕಾವ್ಯಾ ಮಾರನ್
ಪೃಥ್ವಿಶಂಕರ
|

Updated on: May 27, 2024 | 9:55 PM

Share

ತನ್ನ ಹೊಡಿಬಡಿ ಆಟದಿಂದ ಈ ಐಪಿಎಲ್​ನ (IPL 2024) ಮೆರುಗು ಹೆಚ್ಚಿಸಿದ ತಂಡವೆಂದರೆ ಅದು ಸನ್‌ರೈಸರ್ಸ್ ಹೈದರಾಬಾದ್ (SRH). ಲೀಗ್ ಹಂತದಲ್ಲಿ ಯಾವ ಎದುರಾಳಿಯನ್ನು ಬಿಡದೆ ರನ್ ಶಿಖರವನ್ನು ಕಟ್ಟಿದ ಹೈದರಾಬಾದ್ ತಂಡ ನಿರೀಕ್ಷೆಯಂತೆಯೇ ಫೈನಲ್ ತಲುಪಿತ್ತು. ಆದರೆ ಫೈನಲ್ ಪಂದ್ಯದಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಕೆಕೆಆರ್​ ಬೌಲರ್​ಗಳ ದಾಳಿಗೆ ನಲುಗಿ ಮಕಾಡೆ ಮಲಗಿತು. ಇಡೀ ಪಂದ್ಯವನ್ನು ಏಕಪಕ್ಷೀಯವಾಗಿಸಿದ ಕೆಕೆಆರ್ ತಂಡ ನಿರೀಕ್ಷೆಯಂತೆ ಕಪ್ ಜಯಿಸುವಲ್ಲಿ ಯಶಸ್ವಿಯಾಯಿತು. ಇತ್ತ ಮತ್ತೊಂದು ಕಪ್ ಜಯಿಸುವ ಅವಕಾಶವನ್ನು ಕೈಚೆಲ್ಲಿದ ಹೈದರಾಬಾದ್ ಆಟಗಾರರು ನಿರಾಸೆಯೊಂದಿಗೆ ಮೈದಾನ ತೊರೆದಿದ್ದರು. ತಂಡದ ಒಡತಿ ಕಾವ್ಯಾ ಮಾರನ್ (Kavya Maran) ಕೂಡ ಗ್ಯಾಲರಿಯಲ್ಲಿ ಕುಳಿತು ತಂಡದ ಸೋಲಿಗೆ ಕಣ್ಣೀರು ಸುರಿಸಿದ್ದರು. ಆದರೆ ಈಗ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೊವೊಂದು ಹರಿದಾಡುತ್ತಿದ್ದು, ಕಾವ್ಯಾ ಮಾರನ್ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ತಂಡದ ಪ್ರದರ್ಶನಕ್ಕೆ ಕಾವ್ಯಾ ಮೆಚ್ಚುಗೆ

ಪಂದ್ಯ ಮುಗಿದ ಬಳಿಕ ಸನ್ ರೈಸರ್ಸ್ ಹೈದರಾಬಾದ್ ತಂಡದ ಡ್ರೆಸ್ಸಿಂಗ್ ರೂಮ್‌ಗೆ ತೆರಳಿ ಕಾವ್ಯಾ ಮಾರನ್ ಆಟಗಾರರ ಆತ್ಮಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ‘ನೀವೆಲ್ಲರೂ ನಮಗೆ ಹೆಮ್ಮೆ ತಂದಿದ್ದೀರಿ. ನೀವೆಲ್ಲರೂ ಈ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದೀರಿ. ಅಲ್ಲದೆ ಟಿ20 ಕ್ರಿಕೆಟ್ ಅನ್ನು ಹೇಗೆ ಆಡಬೇಕು ಎಂಬುದನ್ನು ಎಲ್ಲರಿಗೂ ತೋರಿಸಿದ್ದೀರಿ. ಎಲ್ಲರೂ ನಮ್ಮ ಬಗ್ಗೆ ಮಾತನಾಡುತ್ತಿರುವುದೆ ಇದಕ್ಕೆ ಉದಾಹರಣೆಯಾಗಿದೆ.

ಇಂದು ನಮ್ಮ ಕೆಟ್ಟ ದಿನವಾಗಿತ್ತು. ನೀವೆಲ್ಲರೂ ಬಾಲ್ ಮತ್ತು ಬ್ಯಾಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದೀರಿ. ಆದರೆ ಕಳೆದ ಸೀಸನ್‌ ಅನ್ನು ನಾವು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದೊಂದಿಗೆ ಮುಕ್ತಾಯಗೊಳಿಸಿದ್ದವು. ಆದರೆ ಈ ಬಾರಿ ನಾವು ಫೈನಲ್ ಆಡಿದ್ದೇವೆ. ನಿಮ್ಮ ಆಟ ನೋಡಿದ ನಂತರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಆದ್ರೂ ಕೆಕೆಆರ್ ಪ್ರಶಸ್ತಿ ಗೆದ್ದಿದೆ. ಆದರೆ ನಾವು ಕ್ರಿಕೆಟ್ ಆಡುವ ರೀತಿ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಆಟಗಾರರ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಲ್ಲಿಂದ ತೆರಳಿದ್ದಾರೆ. ಸೋಲಿನಲ್ಲೂ ತಂಡದ ಪ್ರದರ್ಶನವನ್ನು ಹೊಗಳಿದ ಎಸ್​ಆರ್​ಹೆಚ್ ತಂಡದ ಒಡತಿಯ ನಡೆಯನ್ನು ಎಲ್ಲರೂ ಪ್ರಶಂಸಿಸುತ್ತಿದ್ದಾರೆ.

ಸೋತ ನಂತರ ಕಣ್ಣೀರಿಟ್ಟಿದ ಕಾವ್ಯಾ

ಕಾವ್ಯಾ ಮಾರನ್ ತನ್ನ ಆಟಗಾರರನ್ನು ಪ್ರೋತ್ಸಾಹಿಸಿದರೂ ಸಹ ತಂಡದ ಸೋಲಿನ ನಂತರ ಅವರಿಗೆ ತನ್ನನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಸ್ಟೇಡಿಯಂನಲ್ಲಿಯೇ ಭಾವುಕರಾದ ಕಾವ್ಯ ಕಣ್ಣೀರು ಸುರಿಸಿದ್ದರು. ಅಲ್ಲದೆ ತಮ್ಮ ದುಃಖವನ್ನು ಮರೆಮಾಚಲು ಕ್ಯಾಮರಾದ ಕಣ್ತಪಿಸಲು ಪ್ರಯತ್ನಿಸಿದರು. ಈ ಬಾರಿ ಚಾಂಪಿಯನ್ ಆಗಲು ಇದ್ದ ಉತ್ತಮ ಅವಕಾಶವನ್ನು ಕೈಚೆಲ್ಲಿದ ನಿರಾಸೆ ಕಾವ್ಯಾ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಆದಾಗ್ಯೂ, ಮುಂದಿನ ಬಾರಿ ಕಾವ್ಯಾ ಮಾರನ್‌ಗೆ ಇನ್ನಷ್ಟು ಕಠಿಣ ಸವಾಲು ಎದುರಾಗಲಿದೆ. ಏಕೆಂದರೆ ಮುಂದಿನ ಸೀಸನ್‌ಗೆ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ತಂಡದಲ್ಲಿ ಅವರು ಯಾರನ್ನು ಉಳಿಸಿಕೊಳ್ಳುತ್ತಾರೆ ಮತ್ತು ಯಾರನ್ನು ತಂಡದಿಂದ ಹೊರಹಾಕುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!