AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ ಬೌಲಿಂಗ್ ದಾಳಿಯನ್ನು ಗೇಲಿ ಮಾಡಿ ನಕ್ಕ ಅಯ್ಯರ್..! ವಿಡಿಯೋ ವೈರಲ್

IPL 2024: ವಿಡಿಯೋದಲ್ಲಿರುವಂತೆ ವೆಂಕಟೇಶ್ ಅಯ್ಯರ್ ಮೊದಲು, ಆರ್​ಸಿಬಿ ಇಡೀ ಪಂದ್ಯಾವಳಿಯಲ್ಲೇ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಅವರನ್ನು ಎದುರಿಸುವುದು ಸಾಕಷ್ಟು ಸವಾಲಿನದ್ದಾಗಿದೆ ಎಂದಿದ್ದಾರೆ. ಆದರೆ, ಈ ಹೇಳಿಕೆ ನೀಡಿದ ಕೆಲವೇ ಸೆಕೆಂಡ್​ಗಳ ನಂತರ ಅಯ್ಯರ್ ನಗಲು ಆರಂಭಿಸಿದ್ದಾರೆ

IPL 2024: ಆರ್​ಸಿಬಿ ಬೌಲಿಂಗ್ ದಾಳಿಯನ್ನು ಗೇಲಿ ಮಾಡಿ ನಕ್ಕ ಅಯ್ಯರ್..! ವಿಡಿಯೋ ವೈರಲ್
ವೆಂಕಟೇಶ್ ಅಯ್ಯರ್
ಪೃಥ್ವಿಶಂಕರ
|

Updated on:Apr 22, 2024 | 6:26 PM

Share

2024 ರ ಐಪಿಎಲ್​ನಲ್ಲೂ (IPL 2024) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಥಿತಿ ಬದಲಾಗಲಿಲ್ಲ. ಪ್ರತಿ ಬಾರಿಯಂತೆ ಈ ಬಾರಿಯೂ ತಂಡ ನಿರಾಸೆಯೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಕಳೆದೆರಡು ಆವೃತ್ತಿಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಆರ್​ಸಿಬಿ, ಈ ಬಾರಿ ಲೀಗ್​ ಹಂತದಲ್ಲೇ ತನ್ನ ಪಯಣ ಮುಗಿಸಿದೆ. ಪ್ರತಿ ಸೀಸನ್‌ನಂತೆ ಈ ಸೀಸನ್​ನಲ್ಲೂ ಆರ್‌ಸಿಬಿ ತನ್ನ ದುರ್ಬಲ ಬೌಲಿಂಗ್​ನಿಂದಾಗಿ ಲೀಗ್​ನಿಂದ ಹೊರಬೀಳಬೇಕಾಯಿತು. ಇದೀಗ ಹರಾಜಿನಲ್ಲಿ ಉತ್ತಮ ವೇಗಿಗಳನ್ನು ಖರೀದಿಸಲು ಮುಂದಾಗದ ಆರ್​ಸಿಬಿ ಮ್ಯಾನೇಜ್‌ಮೆಂಟ್ ವಿರುದ್ಧ ಅಭಿಮಾನಿಗಳು ಕಿಡಿ ಕಾರುತ್ತಿದ್ದಾರೆ. ಇದೆಲ್ಲದರ ನಡುವೆ ಕೆಕೆಆರ್ ತಂಡದ ಆಟಗಾರ ವೆಂಕಟೇಶ್ ಅಯ್ಯರ್ (Venkatesh Iyer), ಆರ್​ಸಿಬಿ ಬೌಲಿಂಗ್ ದಾಳಿಯ ಬಗ್ಗೆ ಲೇವಡಿ ಮಾಡಿರುವ ವಿಡಿಯೋವೊಂದು ಬಾರಿ ವೈರಲ್ ಆಗುತ್ತಿದೆ.

ವೆಂಕಟೇಶ್ ಅಯ್ಯರ್ ಲೇವಡಿ

36 ನೇ ಐಪಿಎಲ್‌ ಪಂದ್ಯದಲ್ಲಿ ಕೆಕೆಆರ್ ಮತ್ತು ಆರ್​ಸಿಬಿ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಕೆಕೆಆರ್ ಒಂದು ರನ್‌ನಿಂದ ಗೆದ್ದುಕೊಂಡಿತು. ಈ ಸೋಲಿನೊಂದಿಗೆ ಆರ್‌ಸಿಬಿಯ ಪ್ಲೇಆಫ್‌ನ ಕನಸು ಬಹುತೇಕ ಭಗ್ನವಾದಂತಿದೆ. ಈ ಪಂದ್ಯಕ್ಕೂ ಮುನ್ನ ಕೆಕೆಆರ್‌ನ ಸ್ಫೋಟಕ ಬ್ಯಾಟ್ಸ್‌ಮನ್ ವೆಂಕಟೇಶ್ ಅಯ್ಯರ್ ಆರ್‌ಸಿಬಿಯ ಬೌಲಿಂಗ್ ದಾಳಿಯ ಬಗ್ಗೆ ಮಾತನಾಡಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

Breaking: ಅಂಪೈರ್ ಜೊತೆ ವಾಗ್ವಾದ; ಕೊಹ್ಲಿ ವಿರುದ್ಧ ಕ್ರಮಕೈಗೊಂಡ ಬಿಸಿಸಿಐ..!

ಈ ವಿಡಿಯೋದಲ್ಲಿ ವೆಂಕಟೇಶ್ ಅಯ್ಯರ್ ಆರ್​ಸಿಬಿ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿರುವುದನ್ನು ಕಾಣಬಹುದಾಗಿದೆ. ವಿಡಿಯೋದಲ್ಲಿರುವಂತೆ ವೆಂಕಟೇಶ್ ಅಯ್ಯರ್ ಮೊದಲು, ‘ಆರ್​ಸಿಬಿ ಇಡೀ ಪಂದ್ಯಾವಳಿಯಲ್ಲೇ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಅವರನ್ನು ಎದುರಿಸುವುದು ಸಾಕಷ್ಟು ಸವಾಲಿನದ್ದಾಗಿದೆ ಎಂದಿದ್ದಾರೆ’. ಆದರೆ, ಈ ಹೇಳಿಕೆ ನೀಡಿದ ಕೆಲವೇ ಸೆಕೆಂಡ್​ಗಳ ನಂತರ ಅಯ್ಯರ್ ನಗಲು ಆರಂಭಿಸಿದ್ದಾರೆ.

ಇದೀಗ ಅಯ್ಯರ್ ಅವರ ವರ್ತನೆಯನ್ನು ನೋಡಿದ ನೆಟ್ಟಿಗರು, ಅಯ್ಯರ್ ಬೇಕಂತಲೇ ಆರ್​ಸಿಬಿ ಬೌಲಿಂಗ್ ವಿಭಾಗವನ್ನು ಲೇವಡಿ ಮಾಡಿದ್ದಾರೆ ಎಂದಿದ್ದಾರೆ. ಇನ್ನು ಈ ವಿಡಿಯೋ ನೋಡಿದ ಆರ್​ಸಿಬಿ ಅಭಿಮಾನಿಗಳು ಅಯ್ಯರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಈ ಘಟನೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಆರ್‌ಸಿಬಿಗೆ ಏಕೈಕ ಗೆಲುವು

ಇನ್ನು ಈ ಆವೃತ್ತಿಯಲ್ಲಿ ಆರ್​ಸಿಬಿ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ತಂಡ ಇದುವರೆಗೆ 8 ಪಂದ್ಯಗಳನ್ನು ಆಡಿದೆ. ಇದರಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಏಳು ಪಂದ್ಯಗಳಲ್ಲಿ ಸೋತಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Mon, 22 April 24

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'