AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: KKR vs SRH ನಡುವೆ ಫೈನಲ್ ಫೈಟ್

IPL 2024: ಈ ಬಾರಿಯ ಐಪಿಎಲ್​ನ ಲೀಗ್ ಹಂತದ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದ ತಂಡಗಳೇ ಇದೀಗ ಫೈನಲ್​ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅದರಂತೆ ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಲಿದೆ.

IPL 2024: KKR vs SRH ನಡುವೆ ಫೈನಲ್ ಫೈಟ್
KKR vs SRH
ಝಾಹಿರ್ ಯೂಸುಫ್
|

Updated on: May 25, 2024 | 7:01 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)​ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಮೇ 21 ರಂದು ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ತಂಡವನ್ನು ಮಣಿಸಿ ಕೆಕೆಆರ್​ ಫೈನಲ್​ ಪ್ರವೇಶಿಸಿತ್ತು. ಇನ್ನು ಮೇ 22 ರಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದುಕೊಂಡಿತ್ತು.

ಅದರಂತೆ ಶುಕ್ರವಾರ (ಮೇ 24) ನಡೆದ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಫೈನಲ್​ಗೆ ಪ್ರವೇಶಿಸಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಕೇವಲ 120 ರನ್​ಗಳಿಗೆ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್ ಹಾಗೂ ರಾಹುಲ್ ತ್ರಿಪಾಠಿ ವಿಕೆಟ್ ಕಳೆದುಕೊಂಡು ಎಸ್ಆರ್​ಹೆಚ್ ತಂಡ ಸಂಕಷ್ಟಕ್ಕೆ ಸಿಲುಕಿತು.  ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಹೆನ್ರಿಕ್ ಕ್ಲಾಸೆನ್ (50) ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು.

176 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ (42) ಉತ್ತಮ ಆರಂಭ ಒದಗಿಸಿದ್ದರು. ಆದರೆ ಆ ಬಳಿಕ ದಾಳಿಗಿಳಿದ ಸ್ಪಿನ್ನರ್​ಗಳಾದ ಶಹಬಾಝ್ ಅಹ್ಮದ್ ಹಾಗೂ ಅಭಿಷೇಕ್ ಶರ್ಮಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

4 ಓವರ್​ಗಳಲ್ಲಿ ಕೇವಲ 23 ರನ್ ನೀಡಿದ ಶಹಬಾಝ್ ಅಹ್ಮದ್ 3 ವಿಕೆಟ್ ಕಬಳಿಸಿದರೆ, ಅಭಿಷೇಕ್ ಶರ್ಮಾ 4 ಓವರ್​ಗಳಲ್ಲಿ 24 ರನ್ ನೀಡಿ 2 ವಿಕೆಟ್ ಪಡೆದರು. ಪರಿಣಾಮ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ 4 ಓವರ್​ಗಳಲ್ಲಿ 73 ರನ್ ಗಳಿಸಬೇಕಿತ್ತು.

ಈ ಹಂತದಲ್ಲಿ ಯುವ ದಾಂಡಿಗ ಧ್ರುವ್ ಜುರೇಲ್ (56) ಬಿರುಸಿನ ಅರ್ಧಶತಕ ಪೂರೈಸಿದರು. ಆದರೆ ಮತ್ತೊಂದು ತುದಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 139 ರನ್​ಗಳಿಸಿ ರಾಜಸ್ಥಾನ್ ರಾಯಲ್ಸ್ 36 ರನ್​ಗಳಿಂದ  ಸೋಲೊಪ್ಪಿಕೊಂಡಿದೆ.

ಈ ಗೆಲುವಿನೊಂಧಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡವು ಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಮೇ 26 ರಂದು ಭಾನುವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಫೈಟ್​ನಲ್ಲಿ ಕೆಕೆಆರ್ ಮತ್ತು ಎಸ್ಆರ್​ಹೆಚ್ ತಂಡಗಳು ಮುಖಾಮುಖಿಯಾಗಲಿದೆ.

ಸನ್​ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಟ್ರಾವಿಸ್ ಹೆಡ್ , ಅಭಿಷೇಕ್ ಶರ್ಮಾ , ರಾಹುಲ್ ತ್ರಿಪಾಠಿ , ನಿತೀಶ್ ರೆಡ್ಡಿ , ಐಡೆನ್ ಮಾರ್ಕ್ರಾಮ್ , ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್) , ಅಬ್ದುಲ್ ಸಮದ್ , ಪ್ಯಾಟ್ ಕಮಿನ್ಸ್ (ನಾಯಕ) , ಭುವನೇಶ್ವರ್ ಕುಮಾರ್ , ಜಯದೇವ್ ಉನದ್ಕತ್ , ಟಿ ನಟರಾಜನ್, ಶಹಬಾಝ್ ಅಹ್ಮದ್ (ಇಂಪ್ಯಾಕ್ಟ್ ಪ್ಲೇಯರ್).

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ RCB ತಂಡವನ್ನು ತೊರೆಯಲು ಇದು ಸಕಾಲ: ಕೆವಿನ್ ಪೀಟರ್ಸನ್

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಟಾಮ್ ಕೊಹ್ಲರ್-ಕ್ಯಾಡ್ಮೋರ್ , ಸಂಜು ಸ್ಯಾಮ್ಸನ್ (ನಾಯಕ) , ರಿಯಾನ್ ಪರಾಗ್ , ಧ್ರುವ್ ಜುರೆಲ್ , ರೋವ್​ಮನ್ ಪೊವೆಲ್ , ರವಿಚಂದ್ರನ್ ಅಶ್ವಿನ್ , ಟ್ರೆಂಟ್ ಬೌಲ್ಟ್ , ಅವೇಶ್ ಖಾನ್ , ಸಂದೀಪ್ ಶರ್ಮಾ , ಯುಜ್ವೇಂದ್ರ ಚಹಲ್, ಶಿಮ್ರಾನ್ ಹೆಟ್ಮೆಯರ್ (ಇಂಪ್ಯಾಕ್ಟ್ ಪ್ಲೇಯರ್).

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!