AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈ ವಿರುದ್ಧ ವಿಲ್ ಜ್ಯಾಕ್ಸ್ ಕಣಕ್ಕೆ? ತಂಡ ಬದಲಿಸುವ ಒತ್ತಡದಲ್ಲಿ ಆರ್​ಸಿಬಿ

IPL 2024 MI vs RCB predicted playing XI: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ನ 25ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಮುಂಬೈನ ತವರು ವಾಂಖೆಡೆಯಲ್ಲಿ ನಡೆಯಲಿದೆ.

IPL 2024: ಮುಂಬೈ ವಿರುದ್ಧ ವಿಲ್ ಜ್ಯಾಕ್ಸ್ ಕಣಕ್ಕೆ? ತಂಡ ಬದಲಿಸುವ ಒತ್ತಡದಲ್ಲಿ ಆರ್​ಸಿಬಿ
ಮುಂಬೈ- ಆರ್​ಸಿಬಿ
ಪೃಥ್ವಿಶಂಕರ
|

Updated on: Apr 10, 2024 | 10:03 PM

Share

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​ನ (IPL 2024) 25ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs MI) ನಡುವೆ ನಡೆಯಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಮುಂಬೈನ ತವರು ವಾಂಖೆಡೆಯಲ್ಲಿ ನಡೆಯಲಿದೆ. ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದಲ್ಲಿ ಲೀಗ್‌ನಲ್ಲಿ ಸತತ ಮೂರು ಪಂದ್ಯಗಳನ್ನು ಸೋತಿರುವ ಮುಂಬೈ ತಂಡ ಇದೀಗ ಗೆಲುವಿನ ಹಳಿಗೆ ಮರಳಿದೆ. ಮುಂಬೈ ತನ್ನ ತವರು ನೆಲದಲ್ಲಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಜಯ ಸಾಧಿಸಿದೆ. ಇತ್ತ ಆರ್‌ಸಿಬಿ ತಂಡ ಕಳೆದ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಬೇಕಾಯಿತು. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಶತಕ ಬಾರಿಸಿದರ ಹೊರತಾಗಿಯೂ ತಂಡ ಸೋತಿತು. ಹೀಗಾಗಿ ಉಭಯ ತಂಡಗಳಿಗೂ ಈ ಪಂದ್ಯ ಮುಖ್ಯವಾಗಿದ್ದು, ಯಾವ ಆಡುವ ಹನ್ನೊಂದರ ಬಳಗದೊಂದಿಗೆ ಕಣಕ್ಕಿಳಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

ಮುಂಬೈ ತಂಡ ಬದಲಿಸುತ್ತಾ?

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ, ಮುಂಬೈ ತಂಡದ ಪರ ಸೂರ್ಯಕುಮಾರ್ ಯಾದವ್ ಖಾತೆ ತೆರೆಯದೆ ಔಟಾದರು ಎಂಬುದನ್ನು ಬಿಟ್ಟರೆ, ಉಳಿದಂತೆ ತಂಡದ ಪ್ರದರ್ಶನ ಅದ್ಭುತವಾಗಿತ್ತು. ಇಶಾನ್ ಕಿಶನ್ ಮತ್ತು ರೋಹಿತ್ ಉತ್ತಮ ಫಾರ್ಮ್‌ನಲ್ಲಿದ್ದು, ತಂಡಕ್ಕೆ ಉತ್ತಮ ಆರಂಭವನ್ನು ನೀಡುತ್ತಿದ್ದಾರೆ. ಇದಲ್ಲದೇ ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಅವರೊಂದಿಗೆ ಹಾರ್ದಿಕ್ ಪಾಂಡ್ಯ ಕೂಡ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದಾರೆ.

ಕೆಳ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಅವರಂತಹ ಪವರ್ ಹಿಟ್ಟರ್‌ಗಳಿದ್ದಾರೆ. ಬೌಲಿಂಗ್‌ನಲ್ಲಿ ಪಿಯೂಷ್ ಚಾವ್ಲಾ ಹೊರತುಪಡಿಸಿ ಉಳಿದವರೆಲ್ಲರೂ ಮಿಂಚಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅವರು ತಮ್ಮ ಗೆಲುವಿನ ಸಂಯೋಜನೆಯೊಂದಿಗೆ ಮೈದಾನಕ್ಕಿಳಿಯಲು ಬಯಸುತ್ತಾರೆ. ಹೀಗಾಗಿ, ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈ ಯಾವುದೇ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿಲ್ಲ.

IPL 2024 MI vs RCB Live Streaming: ಮುಂಬೈ- ಆರ್​ಸಿಬಿ ಫೈಟ್; ಪಂದ್ಯ ಎಲ್ಲಿ ನಡೆಯಲ್ಲಿದೆ ಗೊತ್ತಾ?

ಆರ್‌ಸಿಬಿ ತಂತ್ರಗಾರಿಕೆ ಬದಲಿಸಬೇಕಿದೆ

ಈ ಸೀಸನ್​ನಲ್ಲಿ ಆರ್​ಸಿಬಿ ತಂಡಕ್ಕೆ ವಿಶೇಷವಾದದ್ದೇನೂ ಇಲ್ಲ. ಈ ಸ್ಟಾರ್-ಸ್ಟಡ್ ಶೋ ನಿರಾಶೆಯನ್ನು ಮುಂದುವರೆಸಿದೆ. ವಿರಾಟ್ ಕೊಹ್ಲಿಯಂತಹ ಬ್ಯಾಟ್ಸ್​ಮನ್ ತಂಡದ ಪರ ಶತಕ ಬಾರಿಸಿದರೂ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಫಾಫ್ ಡು ಪ್ಲೆಸಿಸ್ ಉತ್ತಮ ಆರಂಭ ನೀಡಲು ವಿಫಲರಾಗಿದ್ದಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಬ್ಯಾಟ್ ಸದ್ದು ಮಾಡುತ್ತಿಲ್ಲ. ಕ್ಯಾಮೆರಾನ್ ಗ್ರೀನ್‌ಗೆ ಮುಕ್ತವಾಗಿ ಆಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತಂಡದ ಮಧ್ಯಮ ಕ್ರಮಾಂಕ ಸಂಪೂರ್ಣವಾಗಿ ವಿಫಲವಾಗಿದ್ದರೆ, ಇತ್ತ ಬೌಲಿಂಗ್ ಸಂಪೂರ್ಣವಾಗಿ ನಿಷ್ಪರಿಣಾಮಕಾರಿಯಾಗಿದೆ. ಇದೇ ಕಾರಣಕ್ಕೆ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡ ಬದಲಾದ ತಂತ್ರಗಾರಿಕೆಯೊಂದಿಗೆ ಮೈದಾನಕ್ಕಿಳಿಯಬಹುದಾಗಿದ್ದು, ಕೆಲ ದೊಡ್ಡ ಬದಲಾವಣೆಗಳನ್ನೂ ಕಾಣಬಹುದು.

ಎರಡೂ ಸಂಭಾವ್ಯ ತಂಡಗಳು

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಮೊಹಮ್ಮದ್ ನಬಿ, ರೊಮಾರಿಯೋ ಶೆಫರ್ಡ್, ಪಿಯೂಷ್ ಚಾವ್ಲಾ, ಜೆರಾಲ್ಡ್ ಕೋಟ್ಜಿ, ಜಸ್ಪ್ರೀತ್ ಬುಮ್ರಾ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್/ ವಿಲ್ ಜ್ಯಾಕ್ಸ್, ಕ್ಯಾಮೆರೂನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯ್ಯಾಶ್ ಪ್ರಭುದೇಸಾಯಿ, ರೀಸ್ ಟೋಪ್ಲಿ, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ