IPL 2024: ರಿಷಬ್​ ಪಂತ್​ಗೆ ಸೋಲಿನ ಸ್ವಾಗತ

IPL 2024: ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಉತ್ತರವಾಗಿ ಪಂಜಾಬ್ 19.2 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಪಂಜಾಬ್ ಪರ ಸ್ಯಾಮ್ ಕರನ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಅರ್ಧಶತಕದ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

IPL 2024: ರಿಷಬ್​ ಪಂತ್​ಗೆ ಸೋಲಿನ ಸ್ವಾಗತ
ಡೆಲ್ಲಿ- ಪಂಜಾಬ್
Follow us
|

Updated on:Mar 23, 2024 | 8:13 PM

ಐಪಿಎಲ್ 2024 (IPL 2024) ರ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ (Punjab Kings vs Delhi Capitals) ತಂಡವನ್ನು 4 ವಿಕೆಟ್​ಗಳಿಂದ ಸೋಲಿಸುವ ಮೂಲಕ ಗೆಲುವಿನ ಆರಂಭವನ್ನು ಮಾಡಿದೆ. ಇತ್ತ ಬಹಳ ದಿನಗಳ ನಂತರ ಕ್ರಿಕೆಟ್ ಮೈದಾನಕ್ಕೆ ಕಾಲಿಟ್ಟ ರಿಷಬ್ ಪಂತ್​ಗೆ (Rishabh Pant) ಸೋಲಿನ ಸ್ವಾಗತ ಸಿಕ್ಕಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿತು. ಉತ್ತರವಾಗಿ ಪಂಜಾಬ್ 19.2 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಪಂಜಾಬ್ ಪರ ಸ್ಯಾಮ್ ಕರನ್ ಮತ್ತು ಲಿಯಾಮ್ ಲಿವಿಂಗ್ಸ್ಟೋನ್ ಅರ್ಧಶತಕದ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ವೇಳೆ ಸ್ಯಾಮ್ ಕರನ್ ಈ ಟೂರ್ನಿಯಲ್ಲಿ ಮೊದಲ ಅರ್ಧಶತಕ ದಾಖಲಿಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 47 ಎಸೆತಗಳನ್ನು ಎದುರಿಸಿದ ಕರನ್ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 63 ರನ್​ಗಳ ಇನ್ನಿಂಗ್ಸ್​ ಆಡಿ ಪೆವಿಲಿಯನ್ ಸೇರಿಕೊಂಡರು. ಕರನ್​​ಗೆ ಸಾಥ್ ನೀಡಿದ ಲಿಯಾಮ್ ಲಿವಿಂಗ್ಸ್ಟೋನ್ 21 ಎಸೆತಗಳಲ್ಲಿ 38 ರನ್​ಗಳ ಇನ್ನಿಂಗ್ಸ್ ಆಡಿದರು.

ಡೆಲ್ಲಿ ಇನ್ನಿಂಗ್ಸ್ ಹೀಗಿತ್ತು

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 174 ರನ್ ಗಳಿಸಿ ಗೆಲುವಿಗೆ 175 ರನ್‌ಗಳ ಸವಾಲನ್ನು ನೀಡಿತು. ಡೆಲ್ಲಿಗೆ ಮಿಚೆಲ್ ಮಾರ್ಷ್ ಮತ್ತು ಡೇವಿಡ್ ವಾರ್ನರ್ ಜೋಡಿ ಭರವಸೆಯ ಆರಂಭ ನೀಡಿತು. ಮೂರು ಓವರ್‌ಗಳಲ್ಲಿ ಇವರಿಬ್ಬರು 39 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಆದರೆ ನಾಲ್ಕನೇ ಓವರ್​ನಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಪತನವಾಯಿತು. ನಂತರ ಡೇವಿಡ್ ವಾರ್ನರ್ ಮತ್ತು ಶಾಯ್ ಹೋಪ್ ಜೊತೆಯಾದರು. ಈ ಜೋಡಿ 33 ರನ್‌ಗಳ ಜೊತೆಯಾಟವಾಡಿತು. ಆದರೆ ಈ ಜೋಡಿಯನ್ನು ಮುರಿಯುವಲ್ಲಿ ಹರ್ಷಲ್ ಪಟೇಲ್ ಯಶಸ್ವಿಯಾದರು. ಆ ಬಳಿಕ ಎಲ್ಲರಿಗಾಗಿ ಕಾದು ಕುಳಿತಿದ್ದ ರಿಷಬ್ ಪಂತ್ ಅಖಾಡಕ್ಕೆ ಇಳಿದರು. ಆದರೆ ತಮ್ಮ ಇನ್ನಿಂಗ್ಸ್​ನಲ್ಲಿ 12 ಎಸೆತಗಳನ್ನು ಎದುರಿಸಿದ ಅವರು 2 ಬೌಂಡರಿಗಳ ನೆರವಿನಿಂದ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಡೆಲ್ಲಿ ಪರ ಅದ್ಭುತ ಬ್ಯಾಟಿಂಗ್ ನಡೆಸಿದ ಅಭಿಷೇಕ್ ಪೊರೆಲ್ 10 ಎಸೆತಗಳಲ್ಲಿ 32 ರನ್ ಗಳಿಸಿದಲ್ಲದೆ ಕೊನೆಯ ಓವರ್‌ನಲ್ಲಿ 25 ರನ್ ಕೂಡ ಚಚ್ಚಿ ತಂಡವನ್ನು ಸ್ಪಧಾತ್ಮಕ ಮೊತ್ತಕೆ ಕೊಂಡೊಯ್ದರು.

ಗೆಲುವಿನ ಹೀರೋ ಕರನ್

ಡೆಲ್ಲಿ ನೀಡಿದ 174 ರನ್​ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪರ ನಾಯಕ ಶಿಖರ್ ಧವನ್ (22 ರನ್) ಹಾಗೂ ಜಾನಿ ಬೈರ್‌ಸ್ಟೋ (9 ರನ್) ವೇಗದ ಆರಂಭ ನೀಡಿದರು. ಆದರೆ ಈ ಇಬ್ಬರು ಒಂದೇ ಓವರ್​ನಲ್ಲಿ ಇಶಾಂತ್ ಶರ್ಮಾಗೆ ಬಲಿಯಾದರು. ಆ ನಂತರ ಜೊತೆಯಾದ ಪ್ರಭಾಸಿಮ್ರಾನ್ ಸಿಂಗ್ (26 ರನ್) ಹಾಗೂ ಸ್ಯಾಮ್ ಕರನ್ (63 ರನ್) ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು ತಂಡವನ್ನು ಶತಕದ ಸನಿಹಕ್ಕೆ ತಂದರು. ಆದರೆ ಪ್ರಭಾಸಿಮ್ರಾನ್ ವಿಕೆಟ್ ಬಳಿಕ ಬಂದ ಜಿತೇಶ್ ಶರ್ಮಾ (9 ರನ್) ಹಾಗೂ ಶಶಾಂಕ್ ಸಿಂಗ್ ಬೇಗನೇ ವಿಕೆಟ್ ಒಪ್ಪಿಸುವ ಮೂಲಕ ತಂಡವನ್ನು ಮತ್ತೆ ಹಿನ್ನಡೆಗೆ ತಳ್ಳಿದರು. ನಂತರ ಕರನ್ ಜೊತೆಯಾದ ಲಿಯಾಮ್ ಲಿವಿಂಗ್‌ಸ್ಟೋನ್ ಔಟಾಗದೆ 38 ಮತ್ತು ಹರ್‌ಪ್ರೀತ್ ಬ್ರಾರ್ 2 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಡೆಲ್ಲಿ ಮಾಡಿದ ತಪ್ಪುಗಳು ಸೋಲಿಗೆ ಕಾರಣ

ಒಂದರ್ಥದಲ್ಲಿ ಡೆಲ್ಲಿ ಸೋಲಿಗೆ ನಾಯಕ ರಿಷಬ್ ಪಂತ್ ತೆಗೆದುಕೊಂಡ ನಿರ್ಧಾರಗಳೇ ಕಾರಣ ಎನ್ನಬಹುದು. ಅದರಲ್ಲಿ ಮೊದಲ ತಪ್ಪೆಂದರೆ,  ಪೃಥ್ವಿ ಶಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳದಿರುವುದು. ಇದರೊಂದಿಗೆ ಪ್ರಮುಖ ವೇಗಿ ಮುಖೇಶ್ ಕುಮಾರ್ ಅವರನ್ನೂ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಇದೆಲ್ಲದರ ನಡುವೆ ಪಂದ್ಯದ ಮಧ್ಯದಲ್ಲಿ ಇಶಾಂತ್ ಶರ್ಮಾ ಗಾಯಗೊಂಡಿದ್ದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿತು. ಇದು ದೆಹಲಿ ಸೋಲಿಗೆ ಬಹುದೊಡ್ಡ ಕಾರಣವಾಗಿತ್ತು.

ಕೆಟ್ಟ ಫೀಲ್ಡಿಂಗ್ ಕೂಡ ಕಾರಣ

ಪಂತ್ ಅವರ ತಂತ್ರಗಾರಿಕೆ ಕೊರತೆಯೊಂದಿಗೆ ದೆಹಲಿಯ ಫೀಲ್ಡಿಂಗ್ ಕೂಡ ತೀರಾ ಕಳಪೆಯಾಗಿತ್ತು. ಟ್ರಿಸ್ಟಾನ್ ಸ್ಟ್ರಬ್ಸ್, ಸ್ಯಾಮ್ ಕರನ್ ಅವರ ಸುಲಭ ಕ್ಯಾಚ್ ಚೈಲಿದರು. ಇದರ ಲಾಭ ಪಡೆದ ಕರನ್ 63 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಇದಾದ ಬಳಿಕ 19ನೇ ಓವರ್​ನಲ್ಲಿ ಡೇವಿಡ್ ವಾರ್ನರ್ ಹರ್ ಪ್ರೀತ್ ಬ್ರಾರ್ ಅವರ ಸುಲಭ ಕ್ಯಾಚ್ ಕೈಬಿಟ್ಟರು. ಇದಲ್ಲದೇ ಹಲವು ಮಿಸ್‌ಫೀಲ್ಡ್‌ಗಳು ಸಹ ಕಂಡುಬಂದವು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sat, 23 March 24

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ