AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರಣರೋಚಕ ಹೋರಾಟದಲ್ಲಿ ಸನ್​ರೈಸರ್ಸ್ ಹೈದರಾಬಾದ್​​ಗೆ ರೋಚಕ ಜಯ

IPL 2024: ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 37 ಎಸೆತಗಳನ್ನು ಎದುರಿಸಿದ ನಿತೀಶ್ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 64 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್​ ಕಲೆಹಾಕಿತು.

IPL 2024: ರಣರೋಚಕ ಹೋರಾಟದಲ್ಲಿ ಸನ್​ರೈಸರ್ಸ್ ಹೈದರಾಬಾದ್​​ಗೆ ರೋಚಕ ಜಯ
SRH
TV9 Web
| Edited By: |

Updated on:Apr 09, 2024 | 11:30 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್‌ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಜಯ ಸಾಧಿಸಿದೆ. ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕರಾದ ಟ್ರಾವಿಸ್ ಹೆಡ್ (21) ಹಾಗೂ ಅಭಿಷೇಕ್ ಶರ್ಮಾ (16) ಬೇಗನೆ ಔಟಾದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಐಡೆನ್ ಮಾರ್ಕ್ರಾಮ್ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ನಿತೀಶ್ ರೆಡ್ಡಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 37 ಎಸೆತಗಳನ್ನು ಎದುರಿಸಿದ ನಿತೀಶ್ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 64 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 182 ರನ್​ ಕಲೆಹಾಕಿತು.

183 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಪಂಜಾಬ್ ಕಿಂಗ್ಸ್ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಜಾನಿ ಬೈರ್​ಸ್ಟೋವ್ (0) ಶೂನ್ಯಕ್ಕೆ ಔಟಾದರೆ, ಆ ಬಳಿಕ ಪ್ರಭ್​ಸಿಮ್ರಾನ್ ಸಿಂಗ್ (4) ಕೂಡ ಬೇಗನೆ ನಿರ್ಗಮಿಸಿದರು. ಇನ್ನು ನಾಯಕ ಶಿಖರ್ ಧವನ್ 14 ರನ್​ ಬಾರಿಸಿ ಪೆವಿಲಿಯನ್​ಗೆ ಹಿಂತಿರುಗಿದರು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ಯಾಮ್ ಕರನ್ (29), ಸಿಕಂದರ್ ರಾಝ (28) ಉತ್ತಮ ಕೊಡುಗೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ ಅಬ್ಬರಿಸಿದ ಶಶಾಂಕ್ ಸಿಂಗ್ ಹಾಗೂ ಅಶುತೋಷ್ ಶರ್ಮಾ ಪಂದ್ಯವನ್ನು ರಣರೋಚಕಘಟ್ಟದತ್ತ ಕೊಂಡೊಯ್ದರು.

ಕೊನೆಯ ಓವರ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡ 29 ರನ್​ಗಳ ಗುರಿ ಪಡೆದಿತ್ತು. ಜಯದೇವ್ ಉನಾದ್ಕಟ್ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲೇ ಅಶುತೋಷ್ ಸಿಕ್ಸ್ ಬಾರಿಸಿದರು. ಇದಾದ ಬಳಿಕ 2 ವೈಡ್ ಮೂಡಿಬಂತು. ಇನ್ನು 2ನೇ ಎಸೆತದಲ್ಲಿ ಮತ್ತೊಂದು ಸಿಕ್ಸ್ ಸಿಡಿಸಿದರು.

3ನೇ ಮತ್ತು 4ನೇ ಎಸೆತಗಳಲ್ಲಿ ಎರಡೆರಡು ರನ್ ಓಡಿದರು. ಮತ್ತೊಂದು ವೈಡ್. 5ನೇ ಎಸೆತದಲ್ಲಿ 1 ರನ್. ಕೊನೆಯ ಎಸೆತದಲ್ಲಿ 9 ರನ್ ಬೇಕಿದ್ದಾಗ ಶಶಾಂಕ್ ಸಿಂಗ್ ಸಿಕ್ಸ್ ಸಿಡಿಸಿದರು. ಈ ಸಿಕ್ಸ್​ನ ಹೊರತಾಗಿಯೂ ಸನ್​ರೈಸರ್ಸ್ ಹೈದರಾಬಾದ್ ತಂಡವು 2 ರನ್​ಗಳ ರೋಚಕ ಜಯ ಸಾಧಿಸಿತು.

ಈ ರೋಚಕ ಪೈಪೋಟಿಯಲ್ಲಿ ವಿರೋಚಿತ ಹೋರಾಟ ಪ್ರದರ್ಶಿಸಿದ ಶಶಾಂಕ್ ಸಿಂಗ್ 25 ಎಸೆತಗಳಲ್ಲಿ 1 ಸಿಕ್ಸ್, 6 ಫೋರ್​ಗಳೊಂದಿಗೆ ಅಜೇಯ 46 ರನ್ ಬಾರಿಸಿದರೆ, ಅಶುತೋಷ್ ಶರ್ಮಾ 15 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 33 ರನ್ ಸಿಡಿಸಿ ಮಿಂಚಿದರು.

ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಪ್ರಭ್​ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರನ್, ಸಿಕಂದರ್ ರಾಝ, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಕಗಿಸೊ ರಬಾಡ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಝ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನಾದ್ಕಟ್, ಟಿ ನಟರಾಜನ್.

Published On - 11:27 pm, Tue, 9 April 24

Follow Us
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಬೆಂಗಳೂರಿನ 64 ಪಿಜಿಗಳ ಮೇಲೆ ಆಹಾರ ಇಲಾಖೆಯ ದಿಢೀರ್ ದಾಳಿ!
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಸವದತ್ತಿಯಲ್ಲಿ ವಿಬಿಜಿ ರಾಮ್ ಜಿ ಕಾಮಗಾರಿ ವೇಳೆ ಕಾರ್ಮಿಕರಿಗೆ ನಿಧಿ ಪತ್ತೆ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು