AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಔಟಾದ ಬಳಿಕ ಕಣ್ಣೀರು ಹಾಕುತ್ತಾ ಕೂತ ರಾಹುಲ್ ತ್ರಿಪಾಠಿ

IPL 2024 KKR vs SRH: ಐಪಿಎಲ್​ನ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಎಸ್​ಆರ್​ಹೆಚ್​ ವಿರುದ್ಧ ಜಯ ಸಾಧಿಸಿ ಕೆಕೆಆರ್ ಫೈನಲ್​ಗೆ ಪ್ರವೇಶಿಸಿದೆ. ಇನ್ನು ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಎಸ್​ಆರ್​ಹೆಚ್​ ಎದುರಿಸಲಿದೆ.

IPL 2024: ಔಟಾದ ಬಳಿಕ ಕಣ್ಣೀರು ಹಾಕುತ್ತಾ ಕೂತ ರಾಹುಲ್ ತ್ರಿಪಾಠಿ
Rahul Tripathi
ಝಾಹಿರ್ ಯೂಸುಫ್
|

Updated on: May 22, 2024 | 7:58 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿ KKR ಫೈನಲ್​ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ SRH ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಭರ್ಜರಿ ಬ್ಯಾಟಿಂಗ್​ನ ನಿರೀಕ್ಷೆಯಲ್ಲಿದ್ದ ಸನ್​ರೈಸರ್ಸ್​​ ಹೈದರಾಬಾದ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಮಿಚೆಲ್ ಸ್ಟಾರ್ಕ್​ ಯಶಸ್ವಿಯಾದರು.

ಮೊದಲ ಓವರ್​ನ 2ನೇ ಎಸೆತದಲ್ಲೇ ಡೇಂಜರಸ್ ಟ್ರಾವಿಸ್ ಹೆಡ್ (0) ರನ್ನು ಸ್ಟಾರ್ಕ್​ ಬೌಲ್ಡ್ ಮಾಡಿದರು. ಇನ್ನು ವೈಭವ್ ಅರೋರ ಅಭಿಷೇಕ್ ಶರ್ಮಾ (3) ವಿಕೆಟ್ ಕಬಳಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ರಾಹುಲ್ ತ್ರಿಪಾಠಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೆ ಮತ್ತೊಂದೆಡೆ ಸೆಟೆದು ನಿಂತ ರಾಹುಲ್ ತ್ರಿಪಾಠಿ 35 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 55 ರನ್​ ಬಾರಿಸಿದರು.

ಈ ಹಂತದಲ್ಲಿ ಅಬ್ದುಲ್ ಸಮದ್ ನೀಡಿದ ರನ್ ಕರೆಯಿಂದ ರಾಹುಲ್ ತ್ರಿಪಾಠಿ ರನೌಟ್ ಆಗಬೇಕಾಯಿತು. ಮಹತ್ವದ ಪಂದ್ಯದಲ್ಲಿ ರನೌಟ್ ಆಗಿ ಹೊರ ನಡೆದಿದ್ದರಿಂದ ಹತಾಶರಾದ ತ್ರಿಪಾಠಿ ಪೆವಿಲಿಯನ್​ಗೆ ತೆರಳಿದ ಬಳಿಕ ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಕೂತು ಕಣ್ಣೀರು ಹಾಕುತ್ತಿರುವುದು ಕಂಡು ಬಂತು.

ಅಂದರೆ ಇಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದ ರಾಹುಲ್ ತ್ರಿಪಾಠಿ ವಿಕೆಟ್​ ಕೆಕೆಆರ್ ಪಾಲಿಗೆ ನಿರ್ಣಾಯಕವಾಗಿತ್ತು. ಅತ್ತ ತನ್ನ ಜವಾಬ್ದಾರಿಯನ್ನು ಪೂರ್ಣವಾಗಿ ನಿಭಾಯಿಸಲು ವಿಫಲರಾಗಿದ್ದರಿಂದ ರಾಹುಲ್ ತ್ರಿಪಾಠಿ ಕೂಡ ಭಾವುಕರಾದರು. ಹೀಗೆ ಔಟಾಗಿ ತೆರಳಿ ಕಣ್ಣೀರು ಹಾಕಿರುವ ಎಸ್​ಆರ್​ಹೆಚ್ ಬ್ಯಾಟರ್​ನ ಫೋಟೋಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು 19.3 ಓವರ್​ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಯಿತು. 160 ರನ್​ಗಳ ಸುಲಭ ಗುರಿ ಪಡೆದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಹಾಗೂ ಸುನಿಲ್ ನರೈನ್ ಉತ್ತಮ ಆರಂಭ ಒದಗಿಸಿದ್ದರು.

ಆ ಬಳಿಕ ಕಣಕ್ಕಿಳಿದ ವೆಂಟಕೇಶ್ ಅಯ್ಯರ್ (51) ಹಾಗೂ ಶ್ರೇಯಸ್ ಅಯ್ಯರ್ (58) ಅಜೇಯ ಅರ್ಧಶತಕ ಬಾರಿಸುವ ಮೂಲಕ 13.4 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಕೆಕೆಆರ್ ತಂಡ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಫೈನಲ್​ಗೆ ಪ್ರವೇಶಿಸಿದೆ.

ಇದನ್ನೂ ಓದಿ: IPL 2024: ಶೇಕ್ ಹ್ಯಾಂಡ್ ಮಾಡದ ಧೋನಿ: ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ ಕೊಹ್ಲಿ

ಇನ್ನು ಕೆಕೆಆರ್ ವಿರುದ್ದ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಕೆಕೆಆರ್ ವಿರುದ್ಧ ಫೈನಲ್ ಆಡಲಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್