AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!

IPL 2024, RCB vs RR: ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಭಯೋತ್ಪಾದಕ ಚಟುವಟಿಕೆಗಳ ಶಂಕೆ ಮೇರೆಗೆ ಗುಜರಾತ್ ಪೊಲೀಸರು ನಾಲ್ವರು ಶಸ್ತ್ರಾಸ್ತ್ರಧಾರಿಗಳನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಆದ್ದರಿಂದ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದೆ.

Breaking: ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!
ಆರ್​ಸಿಬಿ
ಪೃಥ್ವಿಶಂಕರ
|

Updated on:May 22, 2024 | 3:32 PM

Share

ಐಪಿಎಲ್ 2024 (IPL 2024) ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ರಾತ್ರಿ 7.30 ರಿಂದ ಆರಂಭವಾಗಲಿದೆ. ಒಂದೆಡೆ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದರೆ, ಮತ್ತೊಂದೆಡೆ ವಿರಾಟ್ ಕೊಹ್ಲಿಯ (Virat Kohli) ಸುರಕ್ಷತೆ ಆರ್​ಸಿಬಿಗೆ ದೊಡ್ಡ ಆತಂಕ ತಂದೊಡ್ಡಿದೆ. ಹೀಗಾಗಿ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ (RCB) ಅಭ್ಯಾಸವನ್ನು ರದ್ದುಗೊಳಿಸಿದೆ. ಅಲ್ಲದೆ ಪತ್ರಿಕಾಗೋಷ್ಠಿಯನ್ನು ಸಹ ನಡೆಸಿಲ್ಲ. ಮಹತ್ವದ ಪಂದ್ಯಕ್ಕೂ ಮುನ್ನ ಫ್ರಾಂಚೈಸಿಯ ಈ ನಡೆ ಆರ್‌ಸಿಬಿ ಅಭಿಮಾನಿಗಳ ಮನದಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದೆ.

ಎರಡೂ ತಂಡಗಳಿಂದ ಪತ್ರಿಕಾಗೋಷ್ಠಿ ರದ್ದು

ಆರ್‌ಸಿಬಿ ಮತ್ತು ರಾಜಸ್ಥಾನ್ ನಡುವಿನ ಪಂದ್ಯಕ್ಕಾಗಿ ಉಭಯ ತಂಡಗಳು ಸೋಮವಾರವೇ ಅಹಮದಾಬಾದ್‌ಗೆ ತಲುಪಿದ್ದವು. ಆರ್​ಸಿಬಿ ಕಳೆದ ಶನಿವಾರ ಚೆನ್ನೈ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿತ್ತು. ಆ ನಂತರ ತಂಡದ ಆಟಗಾರರು ಭಾನುವಾರ ಮತ್ತು ಸೋಮವಾರ ವಿಶ್ರಾಂತಿ ಪಡೆದಿದ್ದರು. ಇದರ ಹೊರತಾಗಿಯೂ, ಅಹಮದಾಬಾದ್ ತಲುಪಿದ ನಂತರ ಆರ್​ಸಿಬಿ, ಎಲಿಮಿನೇಟರ್ ಪಂದ್ಯದ ಮೊದಲು ಅಭ್ಯಾಸದ ಅವಧಿಯನ್ನು ರದ್ದುಗೊಳಿಸಿತು. ವಿರಾಟ್ ಕೊಹ್ಲಿಯ ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ತನ್ನ ಅಭ್ಯಾಸವನ್ನು ರದ್ದುಗೊಳಿಸಿದ್ದು, ಎರಡೂ ತಂಡಗಳು ಪತ್ರಿಕಾಗೋಷ್ಠಿ ನಡೆಸಿಲ್ಲ ಎಂದು ಗುಜರಾತ್ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಬಂಗಾಳಿ ದೈನಿಕ ಆನಂದಬಜಾರ್ ಪತ್ರಿಕೆ ಈ ಬಗ್ಗೆ ವರದಿ ಮಾಡಿದೆ.

ವಿಮಾನ ನಿಲ್ದಾಣದಲ್ಲಿ 4 ಶಂಕಿತರ ಬಂಧನ

ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಭಯೋತ್ಪಾದಕ ಚಟುವಟಿಕೆಗಳ ಶಂಕೆ ಮೇರೆಗೆ ಗುಜರಾತ್ ಪೊಲೀಸರು ನಾಲ್ವರು ಶಸ್ತ್ರಾಸ್ತ್ರಧಾರಿಗಳನ್ನು ಸೋಮವಾರ ರಾತ್ರಿ ಬಂಧಿಸಿದ್ದಾರೆ. ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಅವರಿಂದ ಶಸ್ತ್ರಾಸ್ತ್ರಗಳು, ಅನುಮಾನಾಸ್ಪದ ವೀಡಿಯೊಗಳು ಮತ್ತು ಪಠ್ಯ ಸಂದೇಶಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ನಾಲ್ವರು ಶಂಕಿತರ ಬಂಧನದಿಂದಾಗಿ ಆರ್‌ಸಿಬಿ ಟೆನ್ಷನ್‌ಗೆ ಒಳಗಾಗಿದ್ದು, ಈ ಕಾರಣಕ್ಕಾಗಿ ವಿರಾಟ್ ಕೊಹ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆರ್‌ಸಿಬಿ ಅಭ್ಯಾಸವನ್ನು ರದ್ದುಗೊಳಿಸಿದೆ. ಆದರೆ, ಈ ಘಟನೆಯ ನಂತರವೂ ರಾಜಸ್ಥಾನ ತಂಡ ಮೈದಾನದಲ್ಲಿ ಅಭ್ಯಾಸ ನಡೆಸಿದೆ. ಮತ್ತೊಂದೆಡೆ, ಎರಡೂ ತಂಡಗಳು ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿವೆ. ಅಭ್ಯಾಸದ ಅವಧಿಯನ್ನು ಏಕೆ ರದ್ದುಗೊಳಿಸಲಾಯಿತು ಎಂಬುದರ ಬ್ಗಗೆ ಆರ್​ಸಿಬಿ ಫ್ರಾಂಚೈಸಿ ಯಾವುದೇ ಅಧಿಕೃತ ಹೇಳಿಕೆಯಲ್ಲಿ ತಿಳಿಸದಿದ್ದರೂ, ವಿರಾಟ್ ಅವರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಭ್ಯಾಸವನ್ನು ರದ್ದುಗೊಳಿಸಲಾಗಿದೆ ಎಂದು ವರದಿ ಹೇಳುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Wed, 22 May 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ