AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ವಿರಾಟ್ ಕೊಹ್ಲಿಗಾಗಿ ಹಲಸಿನ ಹಣ್ಣು ತಂದ RCB ಅಭಿಮಾನಿ

IPL 2024 RCB vs CSK: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ 10 ಪಂದ್ಯಗಳಲ್ಲಿ ಗೆದ್ದರೆ, ಸಿಎಸ್​ಕೆ ತಂಡವು 21 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಇದೀಗ 33ನೇ ಬಾರಿ ಉಭಯ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಬಾರಿ ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದೆ ಎಂಬುದೇ ಕುತೂಹಲ.

IPL 2024: ವಿರಾಟ್ ಕೊಹ್ಲಿಗಾಗಿ ಹಲಸಿನ ಹಣ್ಣು ತಂದ RCB ಅಭಿಮಾನಿ
Virat Kohli-Fan
ಝಾಹಿರ್ ಯೂಸುಫ್
|

Updated on: May 18, 2024 | 1:25 PM

Share

ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿಗೆ (Virat Kohli) ವಿಶೇಷ ಉಡುಗೊರೆ ನೀಡಲು ಅಭಿಮಾನಿಯೊಬ್ಬರು ಮುಂದಾಗಿದ್ದಾರೆ. ಅದು ಅಂತಿಂಥ ಉಡುಗೊರೆಯಲ್ಲ, ಬದಲಾಗಿ ವಿಶ್ವ ಪ್ರಸಿದ್ದ ತೂಬಗೆರೆ ಹಲಸಿನ ಹಣ್ಣಿನ ಗಿಫ್ಟ್.

ಹೌದು, ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿಯಾಗಿರುವ ಅಂಬರೀಶ್ ಅವರು ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಹಲಸಿನ ಹಣ್ಣಿನೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲದೆ ಆರ್​ಸಿಬಿ-ಸಿಎಸ್​ಕೆ ನಡುವಣ ಪಂದ್ಯದ ವೇಳೆ ಈ ಹಲಸಿನ ಹಣ್ಣನ್ನು ವಿರಾಟ್ ಕೊಹ್ಲಿಗೆ ಉಡುಗೊರೆಯಾಗಿ ನೀಡುವ ಬಯಕೆ ಹೊಂದಿದ್ದಾರೆ.

ದೇಶ ವಿದೇಶದಲ್ಲಿ ಪ್ರಸಿದ್ದಿಯಾಗಿರುವ ತೂಬಗೆರೆ ಹಲಸಿನ ಹಣ್ಣನ್ನು ವಿರಾಟ್ ಕೊಹ್ಲಿಗೆ ನೀಡಿ ಆರ್​ಸಿಬಿ ತಂಡಕ್ಕೆ ಶುಭಕೋರಬೇಕು. ಈ ಮೂಲಕ ಸಿಎಸ್​ಕೆ ತಂಡದ ವಿರುದ್ಧ ಆರ್​ಸಿಬಿ ಗೆದ್ದು ಪ್ಲೇಆಫ್​ಗೆ ಪ್ರವೇಶಿಸಬೇಕೆಂದು ವೃತ್ತಿಯಲ್ಲಿ ರೈತರಾಗಿರುವ ಅಂಬರೀಶ್ ಅವರ ಮಹದಾಶೆ.

ಅದರಂತೆ ಇದೀಗ ಘಾಟಿ‌ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿರುವ ಅಂಬರೀಶ್, ಇತಿಹಾಸ ಪ್ರಸಿದ್ಧ ತೂಬಗೆರೆಯ ಹಲಸಿನ ಹಣ್ಣಿನೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಕರುನಾಡ ಮಣ್ಣಿನಲ್ಲಿ ಮೂಡಿಬಂದಿರುವ ಈ ವಿಶ್ವ ಪ್ರಸಿದ್ಧ ಜಾಕ್ ಫ್ರೂಟ್​ ವಿರಾಟ್ ಕೊಹ್ಲಿಯ ಕೈ ಸೇರಲಿದೆಯಾ ಕಾದು ನೋಡಬೇಕಿದೆ.

ದೇವೇಗೌಡರಿಗೂ ಹಲಸಿನ ಹಣ್ಣಿನ ಗಿಫ್ಟ್:

ಇಂದು (ಮೇ 18) 91ನೇ ಹುಟ್ಟುಹಬ್ಬ ಆಚರಿಸಿರುವ ಮಾಜಿ ಪ್ರಧಾನಿ ಹೆಚ್​.ಡಿ ದೇವೆಗೌಡರ ಅವರಿಗೂ ಅಂಬರೀಶ್ ತೂಬಗೆರೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಮೂಲಕ ಜೆಡಿಎಸ್​ನ ವರಿಷ್ಠ ನಾಯಕನಿಗೆ ಶುಭಾಶಯ ಕೋರಿದ್ದಾರೆ.

ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡರಿಗೆ ಹಲಸಿನ ಹಣ್ಣು ನೀಡುತ್ತಿರುವ ಅಂಬರೀಶ್

ಪ್ಲೇಆಫ್ ನಿರ್ಣಾಯಕ ಪಂದ್ಯ:

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಪ್ಲೇಆಫ್ ನಿರ್ಣಾಯಕ ಪಂದ್ಯ ನಡೆಯಲಿದೆ. ಅಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಜಯ ಸಾಧಿಸಿದರೆ ಪ್ಲೇಆಫ್ ಹಂತಕ್ಕೇರಲಿದೆ. ಒಂದು ವೇಳೆ ಆರ್​ಸಿಬಿ ತಂಡವು 11 ಎಸೆತಗಳನ್ನು ಬಾಕಿ ಇರಿಸಿ ಅಥವಾ 18 ರನ್​ಗಳಿಂದ ಜಯ ಸಾಧಿಸಿದರೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇದನ್ನೂ ಓದಿ: RCB vs CSK: 5 ಓವರ್​ಗಳ​ ಪಂದ್ಯ ನಡೆದರೆ, RCB ಎಷ್ಟು ಎಸೆತಗಳಲ್ಲಿ ಗೆಲ್ಲಬೇಕು? ಇಲ್ಲಿದೆ ಮಾಹಿತಿ

ಉಭಯ ತಂಡಗಳ ಮುಖಾಮುಖಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ 10 ಪಂದ್ಯಗಳಲ್ಲಿ ಗೆದ್ದರೆ, ಸಿಎಸ್​ಕೆ ತಂಡವು 21 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಅಂದರೆ ಇಲ್ಲಿ ಉಭಯ ತಂಡಗಳ ಮುಖಾಮುಖಿಯಲ್ಲಿ ಸಿಎಸ್​ಕೆ ತಂಡ ಮೇಲುಗೈ ಹೊಂದಿರುವುದು ಸ್ಪಷ್ಟ. ಇದಾಗ್ಯೂ ನಿರ್ಣಾಯಕ ಮ್ಯಾಚ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ಗೆ ಸೋಲುಣಿಸಿ ಆರ್​ಸಿಬಿ ಪ್ಲೇಆಫ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

Follow Us
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?
ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!
ಶಾಸಕ ಯತ್ನಾಳ್​​ ಪುತ್ರನ ಆರತಕ್ಷತೆಯಲ್ಲಿ ಜನವೋ ಜನ!
ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ
ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ ಮಾಡಿದ ಒಂಟಿ ದಂತದ ಕಾಡಾನೆ
ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ ಮಾಡಿದ ಒಂಟಿ ದಂತದ ಕಾಡಾನೆ
ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ