IPL 2024: ಮೊದಲ ಪಂದ್ಯಕ್ಕಾಗಿ ಚೆನ್ನೈ ತಲುಪಿದ ಆರ್​ಸಿಬಿಗೆ ಅದ್ಧೂರಿ ಸ್ವಾಗತ; ವಿಡಿಯೋ ನೋಡಿ

IPL 2024: ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಅನ್​ಬಾಕ್ಸ್ ಕಾರ್ಯಕ್ರಮ ನಡೆಸಿಕೊಟ್ಟ ಆರ್​ಸಿಬಿ ಪಡೆ ಈಗ ತನ್ನ ಮೊದಲ ಐಪಿಎಲ್ ಪಂದ್ಯಕ್ಕಾಗಿ ಚೆನ್ನೈ ತಲುಪಿದೆ. ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಸೇರಿದಂತೆ ತಂಡದ ಎಲ್ಲಾ ಆಟಗಾರರು ಚಾರ್ಟರ್ಡ್ ಫ್ಲೈಟ್ ಮೂಲಕ ಚೆನ್ನೈ ತಲುಪಿದ್ದಾರೆ.

IPL 2024: ಮೊದಲ ಪಂದ್ಯಕ್ಕಾಗಿ ಚೆನ್ನೈ ತಲುಪಿದ ಆರ್​ಸಿಬಿಗೆ ಅದ್ಧೂರಿ ಸ್ವಾಗತ; ವಿಡಿಯೋ ನೋಡಿ
ಆರ್​ಸಿಬಿ

Updated on: Mar 20, 2024 | 3:00 PM

ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಅನ್​ಬಾಕ್ಸ್ ಕಾರ್ಯಕ್ರಮ ನಡೆಸಿಕೊಟ್ಟ ಆರ್​ಸಿಬಿ (RCB) ಪಡೆ ಈಗ ತನ್ನ ಮೊದಲ ಐಪಿಎಲ್ (IPL 2024) ಪಂದ್ಯಕ್ಕಾಗಿ ಚೆನ್ನೈ ತಲುಪಿದೆ. ವಿರಾಟ್ ಕೊಹ್ಲಿ (Virat Kohli), ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಸೇರಿದಂತೆ ತಂಡದ ಎಲ್ಲಾ ಆಟಗಾರರು ಚಾರ್ಟರ್ಡ್ ಫ್ಲೈಟ್ ಮೂಲಕ ಚೆನ್ನೈ ತಲುಪಿದ್ದಾರೆ. ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ಮಾರ್ಚ್ 22 ರಂದು ಚೆನ್ನೈನಲ್ಲಿ ಆತಿಥೇಯ ಸಿಎಸ್​ಕೆ ವಿರುದ್ಧ (RCB vs CSK) ಆಡಬೇಕಾಗಿದೆ. ಇದು ಈ ಟಿ20 ಲೀಗ್‌ನ 17 ನೇ ಆವೃತ್ತಿಯ ಮೊದಲ ಪಂದ್ಯವಾಗಿದೆ. ಹೀಗಾಗಿ ಲೀಗ್ ಅನ್ನು ಗೆಲುವಿನೊಂದಿಗೆ ಆರಂಭಿಸುವುದು ಉಭಯ ತಂಡಗಳ ಗುರಿಯಾಗಿದೆ. ಅದಕ್ಕಾಗಿಯೇ ಎರಡೂ ತಂಡಗಳು ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದು, ಉದ್ಘಾಟನಾ ಪಂದ್ಯದಲ್ಲೇ ಅಬ್ಬರಿಸುವ ಸುಳಿವು ನೀಡಿವೆ.

ಎಲ್ಲೆಲ್ಲೂ ಕೊಹ್ಲಿ ನಾಮ ಜಪ

ಇತ್ತ ಮೊದಲ ಪಂದ್ಯಕ್ಕಾಗಿ ಬೆಂಗಳೂರಿನಿಂದ ಚೆನ್ನೈಗೆ ಬಂದಿಳಿದ ಆರ್​ಸಿಬಿ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ದೊರಕಿತು. ಅದರಲ್ಲೂ ಬರೋಬ್ಬರಿ 2 ತಿಂಗಳ ನಂತರ ಕ್ರಿಕೆಟ್ ಲೋಕದಲ್ಲಿ ಕಾಣಿಸಿಕೊಳ್ಳುತ್ತಿರುವ ವಿರಾಟ್​ ಕೊಹ್ಲಿಯ ಹೆಸರು ಇಡೀ ವಿಮಾನ ನಿಲ್ದಾಣದ ತುಂಬ ಪ್ರತಿಧ್ವನಿಸಿತು. ಅಲ್ಲಿ ನೆರೆದಿದ್ದ ಅಭಿಮಾನಿಗಳು ವಿರಾಟ್-ವಿರಾಟ್ ಎಂದು ಘೋಷಣೆಗಳನ್ನು ಕೂಗಲಾರಂಭಿಸಿದರು. ಭದ್ರತಾ ಪಡೆಗಳು ಸುತ್ತುವರಿದಿರುವ ವಿರಾಟ್ ಕೊಹ್ಲಿ ವಿಮಾನ ನಿಲ್ದಾಣದಿಂದ ಹೊರಬರುತ್ತಿರುವುದು ಕಂಡುಬಂತು. ವಿಮಾನ ನಿಲ್ದಾಣದಿಂದ ತಂಡದ ಬಸ್ ಏರಿದ ವಿರಾಟ್ ಇತರ ಆಟಗಾರರೊಂದಿಗೆ ಹೋಟೆಲ್‌ಗೆ ತೆರಳಿದರು.

ಧೋನಿ ಭರ್ಜರಿ ಅಭ್ಯಾಸ

ಇನ್ನೇರಡು ದಿನಗಳಲ್ಲಿ ಐಪಿಎಲ್ ಆರಂಭವಾಗಲಿದ್ದು, ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಸಿಎಸ್​ಕೆ ಅಖಾಡಕ್ಕಿಳಿಯಲಿದೆ. ಹೀಗಾಗಿ ತಂಡದ ನಾಯಕ ಎಂಎಸ್ ಧೋನಿ ಚೆಪಾಕ್ ಮೈದಾನದಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಅದರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಧೋನಿ ತನ್ನ ಸಿಗ್ನೇಚರ್ ಶಾಟ್ ಹೆಲಿಕಾಪ್ಟರ್ ಶಾಟ್ ಅಭ್ಯಾಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

ಮೊದಲ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್, ದಿನೇಶ್ ಕಾರ್ತಿಕ್, ಕರ್ಣ್ ಶರ್ಮಾ, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಆಕಾಶ್ ದೀಪ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Wed, 20 March 24

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us