AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿ- ರಾಜಸ್ಥಾನ್ ಪಂದ್ಯ ಮಳೆಗಾಹುತಿ? ಇಂದು ಅಹಮದಾಬಾದ್‌ ಹವಾಮಾನ ಹೇಗಿರಲಿದೆ?

IPL 2024 RCB vs RR Eliminator Ahmedabad Weather Report: ಇಲ್ಲಿಯವರೆಗೆ ಐಪಿಎಲ್ 2024 ರಲ್ಲಿ ಒಟ್ಟು 3 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ, ಆದ್ದರಿಂದ ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುಬಹುದು ಎಂಬುದು ಅಭಿಮಾನಿಗಳ ಆತಂಕವಾಗಿದೆ. ಈ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಪಂದ್ಯದ ವೇಳೆ ಅಹಮದಾಬಾದ್‌ನ ಹವಾಮಾನ ಹೇಗಿರುತ್ತದೆ ಎಂಬುದರ ವಿವರ ಇಲ್ಲಿದೆ.

IPL 2024: ಆರ್​ಸಿಬಿ- ರಾಜಸ್ಥಾನ್ ಪಂದ್ಯ ಮಳೆಗಾಹುತಿ? ಇಂದು ಅಹಮದಾಬಾದ್‌ ಹವಾಮಾನ ಹೇಗಿರಲಿದೆ?
ಆರ್​ಸಿಬಿ- ರಾಜಸ್ಥಾನ್
ಪೃಥ್ವಿಶಂಕರ
|

Updated on:May 22, 2024 | 5:35 PM

Share

ಐಪಿಎಲ್ 2024 ರ (IPL 2024) ಎಲಿಮಿನೇಟರ್ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ನಡೆಯಲಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಒಂದೆಡೆ ಈ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲಿ ಉತ್ಸುಕತೆ ಮೂಡಿದ್ದರೆ, ಮತ್ತೊಂದೆಡೆ ಈ ಪಂದ್ಯ ಮಳೆಗೆ ಕೊಚ್ಚಿ ಹೋಗಬಹುದೆಂಬ ಆತಂಕವೂ ಅಭಿಮಾನಿಗಳಲ್ಲಿ ಮೂಡಿದೆ. ಇಲ್ಲಿಯವರೆಗೆ ಐಪಿಎಲ್ 2024 ರಲ್ಲಿ ಒಟ್ಟು 3 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ, ಆದ್ದರಿಂದ ಇಂದಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸುಬಹುದು ಎಂಬುದು ಅಭಿಮಾನಿಗಳ ಆತಂಕವಾಗಿದೆ. ಈ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಪಂದ್ಯದ ವೇಳೆ ಅಹಮದಾಬಾದ್‌ನ ಹವಾಮಾನ (Ahmedabad Weather Report) ಹೇಗಿರುತ್ತದೆ ಎಂಬುದರ ವಿವರ ಇಲ್ಲಿದೆ.

ಅಹಮದಾಬಾದ್‌ನ ಹವಾಮಾನ ಹೇಗಿದೆ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ಕ್ವಾಲಿಫೈಯರ್ 2 ಕ್ಕೆ ಮುನ್ನಡೆಯುತ್ತದೆ. ಇತ್ತ ಸೋತ ತಂಡ ಟ್ರೋಫಿ ರೇಸ್‌ನಿಂದ ಹೊರಗುಳಿಯುತ್ತದೆ. ಹೀಗಾಗಿ ಇಂತಹ ರೋಚಕ ಪಂದ್ಯ ಮಳೆಯಿಂದಾಗಿ ನಿಂತು ಹೋಗುವುದನ್ನು ಯಾರೂ ಬಯಸುವುದಿಲ್ಲ. ಇದೀಗ ಈ ಬಗ್ಗೆ ಹವಾಮಾನ ಇಲಾಖೆ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. ಎಲಿಮಿನೇಟರ್ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂದ್ಯದ ವೇಳೆ ಅಹಮದಾಬಾದ್‌ನಲ್ಲಿ ವಾತಾವರಣ ಸ್ಪಷ್ಟವಾಗಿರಲಿದ್ದು. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದಿಲ್ಲ ಎಂದು ವರದಿಯಲ್ಲಿ ತಿಳಿಸಿದೆ.

Breaking: ಅಹಮದಾಬಾದ್‌ನಲ್ಲಿ ನಾಲ್ವರು ಶಸ್ತ್ರಾಸ್ತ್ರಧಾರಿಗಳ ಬಂಧನ! ಅಭ್ಯಾಸ ರದ್ದುಗೊಳಿಸಿದ ಆರ್​ಸಿಬಿ..!

ಪಂದ್ಯ ರದ್ದಾದರೆ ಯಾರಿಗೆ ಲಾಭ?

ಈ ಪಂದ್ಯದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲದಿದ್ದರೂ ಪ್ರಕೃತಿ ಕೃಪೆ ತೋರದೇ ಮಳೆಯಿಂದಾಗಿ ಪಂದ್ಯ ರದ್ದಾದರೆ ಫಲಿತಾಂಶ ಏನಾಗಬಹುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಅಷ್ಟಕ್ಕೂ ಇಂದು ಮಳೆ ಬಂದರೆ ಪಂದ್ಯವನ್ನು ಇನ್ನೊಂದು ದಿನ ನಡೆಸುವ ಸಲುವಾಗಿ ಎಲ್ಲಾ ಕ್ವಾಲಿಫೈಯರ್ ಪಂದ್ಯಗಳಿಗೆ ಮೀಸಲು ದಿನವನ್ನು ಇರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯ ಮಳೆಯಿಂದ ರದ್ದಾದರೂ, ಮೀಸಲು ದಿನದಂದು ಪಂದ್ಯ ನಡೆಯಲಿದೆ. ಮೀಸಲು ದಿನವೂ ಪಂದ್ಯ ನಡೆಯದಿದ್ದರೆ, ರಾಜಸ್ಥಾನವು ನೇರವಾಗಿ ಕ್ವಾಲಿಫೈಯರ್ 2 ಗೆ ಪ್ರವೇಶಿಸುತ್ತದೆ. ಏಕೆಂದರೆ ರಾಜಸ್ಥಾನ ತಂಡ ಅಂಕಪಟ್ಟಿಯಲ್ಲಿ ಆರ್​ಸಿಬಿಗಿಂತ ಮೇಲಿದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾದರೆ ರಾಜಸ್ಥಾನಕ್ಕೆ ನೇರವಾಗಿ ಲಾಭವಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:33 pm, Wed, 22 May 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ