Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 – 2016 ರ ನಡುವೆ ಸಾಮ್ಯತೆ: ಫೈನಲ್​ನಲ್ಲಿ RCB vs SRH ಮುಖಾಮುಖಿ?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಲಿದೆ.

IPL 2024 - 2016 ರ ನಡುವೆ ಸಾಮ್ಯತೆ: ಫೈನಲ್​ನಲ್ಲಿ RCB vs SRH ಮುಖಾಮುಖಿ?
RCB vs SRH
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 21, 2024 | 9:22 AM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮತ್ತೊಮ್ಮೆ  ಪ್ಲೇಆಫ್ ಹಂತದಲ್ಲಿ ಕಾಣಿಸಿಕೊಂಡಿದೆ. ಇಲ್ಲಿ ಎಸ್​ಆರ್​ಹೆಚ್ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವಾಡುತ್ತಿದ್ದರೆ, ಅತ್ತ ಆರ್​ಸಿಬಿ ಎಲಿಮಿನೇಟರ್ ಪಂದ್ಯವಾಡಲಿದೆ. ಈ ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಉಭಯ ತಂಡಗಳಿಗೂ ಫೈನಲ್​ಗೆ ಪ್ರವೇಶಿಸುವ ಅವಕಾಶವಿದೆ.

ಅಂದರೆ ಆರ್​ಸಿಬಿ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಿದರೆ 2ನೇ ಕ್ವಾಲಿಫೈಯರ್​ಗೆ ಎಂಟ್ರಿ ಕೊಡಲಿದೆ. ಅತ್ತ ಮೊದಲ ಕ್ವಾಲಿಫೈಯರ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡ ಕೆಕೆಆರ್ ವಿರುದ್ಧ ಗೆದ್ದರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

ಇನ್ನು 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ಗೆದ್ದರೆ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. 2016ರ ಫೈನಲ್ ಸೋಲಿನ ಲೆಕ್ಕ ಚುಕ್ತಾ ಮಾಡಲು ಇಂತಹದೊಂದು ಮುಖಾಮುಖಿಯನ್ನು ಆರ್​ಸಿಬಿ ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ.

ಕಾಕತಾಳೀಯ ಎಂಬಂತೆ 2016 ಮತ್ತು 2024 ಪ್ಲೇಆಫ್ ಹಂತದ ಪಂದ್ಯಗಳಿಗೆ ಮತ್ತು ಆಟಗಾರರ ಪ್ರದರ್ಶನಕ್ಕೆ ಸಾಕಷ್ಟು ಸಾಮ್ಯತೆಗಳಿವೆ. ಹೀಗಾಗಿ ಈ ಬಾರಿ ಸನ್​ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್​ಗೇರಲಿದೆ ಎಂಬ ವಾದ ಇದೀಗ ಮಹತ್ವ ಪಡೆದುಕೊಂಡಿದೆ. ಇದಕ್ಕೆ ಮುಖ್ಯ ಕಾರಣ ಈ ಕೆಳಗಿನ ಅಂಶಗಳು…

ಐಪಿಎಲ್​ 2016 2024 ನಡುವಣ ಸಾಮ್ಯತೆ:

ಐಪಿಎಲ್ 2016:-

  • 2016 ರಲ್ಲಿ ಆರ್​ಸಿಬಿ, ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದ್ದವು.
  • ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್​ನ ವಿಜೇತರಾಗಿದ್ದರು.
  • ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸಿದ್ದು ಆಸ್ಟ್ರೇಲಿಯಾ ಆಟಗಾರ. (ಡೇವಿಡ್ ವಾರ್ನರ್)
  • ಎಸ್​ಆರ್​ಹೆಚ್ ತಂಡದ ಪರ ಆರಂಭಿಕರಾಗಿ ಎಡಗೈ ದಾಂಡಿಗರು ಕಣಕ್ಕಿಳಿದಿದ್ದರು.
  • ಸ್ಟಾರ್ ಆಟಗಾರರಾದ ಧೋನಿ ಮತ್ತು ರೋಹಿತ್ ಶರ್ಮಾ ಪ್ಲೇಆಫ್ ಸುತ್ತಿನಲ್ಲಿರಲಿಲ್ಲ.
  • 2016 ರಲ್ಲಿ ಎಸ್​ಆರ್​ಹೆಚ್​ ಪರ ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ ಆಸ್ಟ್ರೇಲಿಯನ್.
  • ಎಸ್​ಆರ್​ಹೆಚ್​ ತಂಡ ಫೇರ್ ಪ್ಲೇ ಪ್ರಶಸ್ತಿ ಗೆದ್ದುಕೊಂಡಿದ್ದರು.

ಐಪಿಎಲ್ 2024:-

  • ಆರ್​ಸಿಬಿ, ಎಸ್​ಆರ್​ಹೆಚ್ ಮತ್ತು ಕೆಕೆಆರ್ ತಂಡಗಳು ಪ್ಲೇಆಫ್​ನಲ್ಲಿ ಕಾಣಿಸಿಕೊಂಡಿದೆ.
  • ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.
  • ಎಸ್​ಆರ್​ಹೆಚ್ ತಂಡವನ್ನು ಮುನ್ನಡೆಸುತ್ತಿರುವುದು ಆಸ್ಟ್ರೇಲಿಯಾ ಆಟಗಾರ (ಪ್ಯಾಟ್ ಕಮಿನ್ಸ್​)
  • ಧೋನಿ ಮತ್ತು ರೋಹಿತ್ ಶರ್ಮಾ ಇರುವ ತಂಡಗಳು ಪ್ಲೇಆಫ್ ಹಂತಕ್ಕೇರಿಲ್ಲ.
  • ಎಸ್​ಆರ್​ಹೆಚ್ ತಂಡದ ಪರ ಆರಂಭಿಕರಾಗಿ ಎಡಗೈ ದಾಂಡಿಗರು ಕಣಕ್ಕಿಳಿಯುತ್ತಿದ್ದಾರೆ.
  • ಈ ಬಾರಿ ಎಸ್​ಆರ್​ಹೆಚ್​ ಪರ ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ ಆಸ್ಟ್ರೇಲಿಯನ್.
  • ಫೇರ್ ಪ್ಲೇ ಪ್ರಶಸ್ತಿ ಸುತ್ತಿನಲ್ಲಿ ಎಸ್​ಆರ್​ಹೆಚ್ ತಂಡ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್

ಅಂದರೆ 2016 ಮತ್ತು 2024 ರ ಐಪಿಎಲ್ ನಡುವೆ ಸಾಕಷ್ಟು ಸಾಮ್ಯತೆಗಳಿದ್ದು, ಹೀಗಾಗಿ 2016 ರಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ ಎಂಬ ವಾದವನ್ನು ಮುಂದಿಡಲಾಗುತ್ತಿದೆ. ಅದರಂತೆ RCB vs SRH ಫೈನಲ್ ಪಂದ್ಯವಾಡಲಿದೆಯಾ ಕಾದು ನೋಡಬೇಕಿದೆ.

ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್