AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರಿಷಬ್ ಪಂತ್​ಗೆ ಭಾವನಾತ್ಮಕ ಸ್ವಾಗತ ಕೋರಿದ ಡೆಲ್ಲಿ ಕ್ಯಾಪಿಟಲ್ಸ್; ವಿಡಿಯೋ

IPL 2024, Rishabh Pant: ಕಾರು ಅಪಘಾತಕ್ಕೀಡಾಗಿ ವರ್ಷದಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್​ ಪಂತ್ ಪೂರ್ಣ ಫಿಟ್ ಆಗಿದ್ದಾರೆ ಎಂದು ಎನ್​ಸಿಎ ವರದಿ ನೀಡಿದೆ. ಎನ್​ಸಿಎನಿಂದ ವರದಿ ಸಿಕ್ಕ ಬಳಿಕ ಅತೀವ ಸಂತಸದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸ್ ತನ್ನ ತಂಡದ ನಾಯಕನನ್ನು ಅದ್ಧೂರಿಯಾಗಿ ತನ್ನ ತಂಡಕ್ಕೆ ಸ್ವಾಗತ ಕೋರಿದೆ.

IPL 2024: ರಿಷಬ್ ಪಂತ್​ಗೆ ಭಾವನಾತ್ಮಕ ಸ್ವಾಗತ ಕೋರಿದ ಡೆಲ್ಲಿ ಕ್ಯಾಪಿಟಲ್ಸ್; ವಿಡಿಯೋ
ರಿಷಬ್ ಪಂತ್
ಪೃಥ್ವಿಶಂಕರ
|

Updated on:Mar 13, 2024 | 6:45 PM

Share

17ನೇ ಆವೃತ್ತಿಯ ಐಪಿಎಲ್ (IPL 2024) ಆರಂಭಕ್ಕೆ ಇನ್ನು 10 ದಿನಗಳಿಗೂ ಕಡಿಮೆ ಸಮಯ ಉಳಿದಿದೆ. ಮಾರ್ಚ್​ 22 ರಿಂದ ಆರಂಭವಾಗಲಿರುವ ಐಪಿಎಲ್​ಗೆ ಎಲ್ಲಾ ತಂಡಗಳು ಈಗಾಗಲೇ ತಯಾರಿ ಆರಂಭಿಸಿವೆ. ಅದರಂತೆ ಒಮ್ಮೆಯೂ ಐಪಿಎಲ್ ಪ್ರಶಸ್ತಿ ಗೆಲ್ಲದ ಡೆಲ್ಲಿ ಕ್ಯಾಪಿಟಲ್ಸ್ ಕೂಡ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಕಟ್ಟಲು ಶ್ರಮಿಸುತ್ತಿದೆ. ಈ ನಡುವೆ ತಂಡಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದ್ದು, ಕಾರು ಅಪಘಾತಕ್ಕೀಡಾಗಿ ವರ್ಷದಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್ ರಿಷಬ್​ ಪಂತ್ (Rishabh Pant) ಪೂರ್ಣ ಫಿಟ್ ಆಗಿದ್ದಾರೆ ಎಂದು ಎನ್​ಸಿಎ ವರದಿ ನೀಡಿದೆ. ಎನ್​ಸಿಎನಿಂದ ವರದಿ ಸಿಕ್ಕ ಬಳಿಕ ಅತೀವ ಸಂತಸದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಫ್ರಾಂಚೈಸ್ ತನ್ನ ತಂಡದ ನಾಯಕನನ್ನು ಅದ್ಧೂರಿಯಾಗಿ ತನ್ನ ತಂಡಕ್ಕೆ ಸ್ವಾಗತ ಕೋರಿದೆ. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ತುಂಬಾ ಮಿಸ್ ಮಾಡಿಕೊಂಡಿದ್ದೇವೆ

ರಿಷಬ್​ ಪಂತ್​ರನ್ನು ಮತ್ತೆ ತಂಡಕ್ಕೆ ಕರೆತರುವ ಕೆಲಸವನ್ನು ಡೆಲ್ಲಿ ಫ್ರಾಂಚೈಸಿ ಪುಟ್ಟ ಬಾಲಕನಿಗೆ ನೀಡಿದೆ. ಅದರಂತೆ ಡೆಲ್ಲಿ ತಂಡದ ಜೆರ್ಸಿ ಹಿಡಿದು ಪಂತ್ ಮನೆಯತ್ತ ಹೆಜ್ಜೆಹಾಕುವ ಈ ಪೋರ, ಪಂತ್​ಗೆ ತಂಡದ ಜೆರ್ಸಿ ನೀಡಿ, ನಿಮ್ಮನ್ನು ನಾವು ತುಂಬಾ ಮಿಸ್ ಮಾಡಿಕೊಂಡಿದ್ದೇವೆ ರಿಷಬ್ ಅಣ್ಣ ಎಂದಿದ್ದಾನೆ. ಆ ಪುಟ್ಟ ಪೋರನಿಂದ ಜೆರ್ಸಿ ಇರುವ ಉಡುಗೊರೆ ಬಾಕ್ಸ್ ಪಡೆದ ಪಂತ್, ಅದನ್ನು ತೆರೆದು ಅದರಲ್ಲಿದ್ದ ಜೆರ್ಸಿಯನ್ನು ಧರಿಸಿಕೊಂಡು ಮತ್ತೊಮ್ಮೆ ಘರ್ಜಿಸಲು ನಾನು ಸಿದ್ಧವಾಗಿದ್ದೇನೆ ಎಂದಿದ್ದಾರೆ.

ಪವಾಡ ಎಂದ ಬಿಸಿಸಿಐ

ಇನ್ನು ಪಂತ್ ಗಾಯದ ಬಗ್ಗೆ ಹಾಗೂ ಅವರ ಚೇತರಿಕೆಯ ಬಗ್ಗೆ ಬಿಸಿಸಿಐ ಕೂಡ ವಿಡಿಯೋವೊಂದನ್ನು ಹರಿಬಿಟ್ಟಿದೆ. ಅದರಲ್ಲಿ ಎನ್​ಸಿಎ ಫಿಸಿಯೋ ಮತ್ತು ವೈದ್ಯರು ಪಂತ್‌ಗೆ ಯಾವ ರೀತಿಯ ಗಾಯಗಳಾಗಿದ್ದವು ಎಂಬುದನ್ನು ವಿವರಿಸುತ್ತಿದ್ದಾರೆ. ಅದರಂತೆ ಪಂತ್ ಕಾಲಿನ ಎಲ್ಲಾ ಲಿಗಮೆಂಟ್​ಗಳು ಮುರಿದು ಹೋಗಿದ್ದವು ಎಂಬುದು ಬೆಳಕಿಗೆ ಬಂದಿದೆ. ವೈದ್ಯರ ಕಠಿಣ ಪರಿಶ್ರಮ ಮತ್ತು ಪಂತ್ ಅವರ ಇಚ್ಛಾಶಕ್ತಿ ಅದ್ಭುತಗಳನ್ನು ಮಾಡಿದೆ ಎಂದಿದ್ದಾರೆ. ಅಲ್ಲದೆ ರಿಷಬ್ ಪಂತ್ ಕೂಡ ತಾನು ಅನುಭವಿಸಿದ ಕಷ್ಟಗಳ ಬಗ್ಗೆ ಮಾತನಾಡಿದ್ದು, ಇಷ್ಟೆಲ್ಲ ನೋವುಗಳನ್ನು ಅನುಭವಿಸಿದ ನಂತರ ಇದೀಗ ಮತ್ತೆ ಕ್ರಿಕೆಟ್ ಆಡುತ್ತಿರುವುದು ಯಾವುದೇ ಮ್ಯಾಜಿಕ್‌ಗಿಂತ ಕಡಿಮೆಯಿಲ್ಲ ಎಂದಿದ್ದಾರೆ.

ಟಿ20 ವಿಶ್ವಕಪ್ ಆಡ್ತಾರಾ ಪಂತ್?

ಇನ್ನು 2022 ರ ಡಿಸೆಂಬರ್ ನಂತರ ಮೊದಲ ಬಾರಿಗೆ ಕ್ರಿಕೆಟ್​ ಕಣಕ್ಕೆ ಕಾಲಿಡುತ್ತಿರುವ ರಿಷಬ್ ಪಂತ್ ಮಾರ್ಚ್ 23 ರಂದು ಮೊಹಾಲಿಯಲ್ಲಿ ನಡೆಯಲ್ಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇಡೀ ಟೂರ್ನಿಯಲ್ಲಿ ಪಂತ್ ಉತ್ತಮ ಪ್ರದರ್ಶನ ನೀಡಿದರೆ, ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗಲಿದೆ ಎಂದು ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರೇ ಹೇಳಿದ್ದಾರೆ. ಹೀಗಾಗಿ ಪಂತ್​ ಐಪಿಎಲ್​ನಲ್ಲಿ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Wed, 13 March 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ