AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs RR, IPL 2024: ಟಾಸ್ ಸೋತ ಆರ್​ಸಿಬಿ; ಎಲಿಮಿನೇಟರ್ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ

RCB vs RR, IPL 2024: ಇಂದು ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

RCB vs RR, IPL 2024: ಟಾಸ್ ಸೋತ ಆರ್​ಸಿಬಿ; ಎಲಿಮಿನೇಟರ್ ಪಂದ್ಯಕ್ಕೆ ಉಭಯ ತಂಡಗಳು ಹೀಗಿವೆ
ಆರ್​ಸಿಬಿ- ರಾಜಸ್ಥಾನ್
ಪೃಥ್ವಿಶಂಕರ
|

Updated on:May 22, 2024 | 7:16 PM

Share

ಇಂದು ಐಪಿಎಲ್ 2024 ರ (IPL 2024) ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು (RCB vs RR) ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯ ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್​ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇತ್ತ ಈ ಪಂದ್ಯದಲ್ಲಿ ಸೋತ ತಂಡದ ಪಯಣ ಇಲ್ಲಿಗೇ ನಿಲ್ಲಲಿದೆ. ಇನ್ನು ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಆರ್​ಸಿಬಿ ಕಳೆದ ತಂಡವನ್ನೇ ಕಣಕ್ಕಿಳಿಸಿದರೆ, ರಾಜಸ್ಥಾನ್ ತಂಡ ಕೂಡ ಯಾವುದೇ ಬದಲಾವಣೆ ಮಾಡಿಲ್ಲ.

ಉಭಯ ತಂಡಗಳು ಹೀಗಿವೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮೊರೊರ್, ಕರ್ಣ್ ಶರ್ಮಾ, ಯಶ್ ದಯಾಲ್, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್.

ಇಂಪ್ಯಾಕ್ಟ್ ಪ್ಲೇಯರ್: ಸ್ವಪ್ನಿಲ್ ಸಿಂಗ್, ಅನುಜ್ ರಾವತ್, ಸುಯ್ಯಾಶ್ ಪ್ರಭುದೇಸಾಯಿ,  ವೈಶಾಕ್ ವಿಜಯ್​ಕುಮಾರ್, ಹಿಮಾಂಶು ಶರ್ಮಾ.

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.

ಇಂಪ್ಯಾಕ್ಟ್ ಪ್ಲೇಯರ್: ನಾಂದ್ರೆ ಬರ್ಗರ್, ಶುಭಂ ದುಬೆ, ಡೊನೊವನ್ ಫೆರೇರಾ, ತನುಷ್ ಕೋಟ್ಯಾನ್, ಶಿಮ್ರಾನ್ ಹೆಟ್ಮೆಯರ್.

RCB vs RR Eliminator Live Score, IPL 2024: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ಬ್ಯಾಟಿಂಗ್

ಲೀಗ್ ಹಂತದಲ್ಲಿ ಉಭಯರ ಪ್ರದರ್ಶನ

ಲೀಗ್ ಹಂತದಲ್ಲಿ ಉಭಯ ತಂಡಗಳ ಪ್ರದರ್ಶನದ ಬಗ್ಗೆ ಮಾತನಾಡುವುದಾದರೆ, ರಾಜಸ್ಥಾನ್ ರಾಯಲ್ಸ್ ಆಡಿರುವ 14 ಪಂದ್ಯಗಳಲ್ಲಿ 8 ರಲ್ಲಿ ಗೆದ್ದಿದ್ದು 5 ರಲ್ಲಿ ಸೋತಿದೆ.  1 ಪಂದ್ಯ ಮಳೆಯಿಂದ ರದ್ದಾಗಿದೆ. ಈ ಮೂಲಕ ತಂಡವು 17 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಕಳಪೆ ಆರಂಭದ ನಂತರ ಆರ್‌ಸಿಬಿ ಪ್ರಬಲ ಪುನರಾಗಮನವನ್ನು ಮಾಡಿ ಪ್ಲೇಆಫ್​ಗೆ ಲಗ್ಗೆ ಇಟ್ಟಿತು. ಪ್ರಸಕ್ತ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡಿರುವ 14 ಪಂದ್ಯಗಳಲ್ಲಿ 7 ಪಂದ್ಯಗಳನ್ನು ಗೆದ್ದಿದೆ. ಈ ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ಸೀಸನ್​ನ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಿತು. ಈ ಪಂದ್ಯವನ್ನು ಆರ್‌ಆರ್ 6 ವಿಕೆಟ್‌ಗಳಿಂದ ಗೆದ್ದಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Wed, 22 May 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ