AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಆರ್​ಸಿಬಿಗೆ ಆಪತ್ಬಾಂಧವರಾದ ಡಿಕೆ- ಅನುಜ್; 174 ರನ್ ಟಾರ್ಗೆಟ್

IPL 2024: ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ಅನುಜ್ ರಾವೂತ್ ಹಾಗೂ ದಿನೇಶ್ ಕಾರ್ತಿಕ್​ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ.

IPL 2024: ಆರ್​ಸಿಬಿಗೆ ಆಪತ್ಬಾಂಧವರಾದ ಡಿಕೆ- ಅನುಜ್; 174 ರನ್ ಟಾರ್ಗೆಟ್
ಅನುಜ್- ದಿನೇಶ್ ಕಾರ್ತಿಕ್
ಪೃಥ್ವಿಶಂಕರ
|

Updated on:Mar 22, 2024 | 10:01 PM

Share

ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆಯುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಮೊದಲ ಐಪಿಎಲ್ (IPL 2024) ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ಅನುಜ್ ರಾವತ್ (Anuj Rawat) ಹಾಗೂ ದಿನೇಶ್ ಕಾರ್ತಿಕ್ (Dinesh Karthik)​ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ. ಈ ಮೂಲಕ ಸಿಎಸ್​ಕೆ ತಂಡಕ್ಕೆ 174 ರನ್​ಗಳ ಟಾರ್ಗೆಟ್ ನೀಡಿದೆ. ಆರಂಭದಲ್ಲೇ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆರ್​ಸಿವಿಗೆ ದಿನೇಶ್ ಕಾರ್ತಿಕ್ ಹಾಗೂ ಅನುಜ್ ರಾವತ್ ನೆರವಾದರು. ಈ ಇಬ್ಬರು ಕೊನೆಯ ಎಸೆತದವರಿಗೂ ಉಳಿದು 95 ರನ್​ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಗೌರವತ್ಮಾಕ ಮೊತ್ತಕ್ಕೆ ಕೊಂಡೊಯ್ದರು. ಇತ್ತ ಸಿಎಸ್​ಕೆ ಪರ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮುಸ್ತಫಿಜುರ್ ರೆಹಮಾನ್ ಪ್ರಮುಖ 4 ವಿಕೆಟ್ ಪಡೆದರು.

ಆರ್​ಸಿಬಿಗೆ ಉತ್ತಮ ಆರಂಭ

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭವನ್ನೇ ನೀಡಿದರು. ಈ ಇಬ್ಬರು ಮೊದಲ ವಿಕೆಟ್​ಗೆ 41 ರನ್​ಗಳ ಜೊತೆಯಾಟ ಹಂಚಿಕೊಂಡರು. ಆದರೆ ಈ ವೇಳೆ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ನಾಯಕ ಡುಪ್ಲೆಸಿಸ್, ಮುಸ್ತಫಿಜುರ್ ಬೌಲಿಂಗ್​ನಲ್ಲಿ 35 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆ ನಂತರ ಬಂದ ರಜತ್ ಪಾಟಿದರ್, ಐಪಿಎಲ್​ನಲ್ಲೂ ತಮ್ಮ ಕಳಪೆ ಫಾರ್ಮ್​ ಮುಂದುವರೆಸಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

IPL 2024: ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ..!

ಸೊನ್ನೆ ಸುತ್ತಿದ ರಜತ್- ಗ್ಲೆನ್

ಮೂರನೇ ಕ್ರಮಾಂಕದಲ್ಲಿ ಬಂದ ಭರವಸೆಯ ಬ್ಯಾಟರ್ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಯಾವುದೇ ಪರಿಣಾಮ ಬೀರದೆ ಮೊದಲ ಎಸೆತದಲ್ಲೇ ವಿಕೆಟ್​ ಕೀಪರ್​ಗೆ ಕ್ಯಾಚಿತ್ತು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಹೀಗಾಗಿ ಉತ್ತಮ ಆರಂಭದ ಹೊರತಾಗಿಯೂ ವಿಕೆಟ್​ಗಳ ದಿಢೀರ್​ ಪತನದಿಂದಾಗಿ ಸಂಕಷ್ಟಕ್ಕೆ ಸಿಲುಕಿತು. ಈ ವೇಳೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಕ್ಯಾಮರಾನ್ ಗ್ರೀನ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದರೆ ರಹಾನೆ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ವಿರಾಟ್ ಕೊಹ್ಲಿ ಇನ್ನಿಂಗ್ಸ್ 21 ರನ್​ಗಳಿಗೆ ಅಂತ್ಯವಾಯಿತು.

ಡಿಕೆ- ಅನುಜ್ 95 ರನ್ ಜೊತೆಯಾಟ

ಕೊಹ್ಲಿ ವಿಕೆಟ್ ಬಳಿಕ ಗ್ರೀನ್ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಅವರು ಕೂಡ 18 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ ತಂಡ ಕೇವಲ 78 ರನ್​ಗಳಿಗೆ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಜೊತೆಯಾದ ದಿನೇಶ್ ಕಾರ್ತಿಕ್ ಹಾಗೂ ಅನುಜ್ ರಾವತ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ಇಬ್ಬರು 95 ರನ್​ಗಳ ಜೊತೆಯಾಟದ ಜೊತೆಗೆ ತಂಡವನ್ನು 170 ರನ್​ಗಳ ಗಡಿ ದಾಟಿಸಿದರು.

ಮುಸ್ತಫಿಜುರ್ 4 ವಿಕೆಟ್

ಅಂತಿಮವಾಗಿ ಅನುಜ್ ರಾವತ್ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 48 ರನ್ ಕಲೆಹಾಕಿದರೆ, ದಿನೇಶ್ ಕಾರ್ತಿಕ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 38 ರನ್ ಸಿಡಿಸಿದರು. ಇನ್ನು ಸಿಎಸ್​ಕೆ ಪರ ಅದ್ಭುತವಾಗಿ ಬೌಲಿಂಗ್ ಮಾಡಿದ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ 29 ರನ್ ನೀಡಿ 4 ವಿಕೆಟ್ ಪಡೆದರೆ, ದೀಪಕ್ ಚಹಾರ್ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Fri, 22 March 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​