AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: KKR ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್

IPL 2024 Auction: ಈ ಬಾರಿಯ ಐಪಿಎಲ್​ಗೂ ಮುನ್ನ ಕೆಕೆಆರ್ ಫ್ರಾಂಚೈಸಿ ಒಟ್ಟು 12 ಆಟಗಾರರನ್ನು ಬಿಡುಗಡೆ ಮಾಡಿದೆ. ಹಾಗೆಯೇ 15 ಆಟಗಾರರನ್ನು ಉಳಿಸಿಕೊಂಡಿದೆ. ಅಂದರೆ ಈ ಮಿನಿ ಹರಾಜಿನ ಮೂಲಕ ಕೆಕೆಆರ್ ಒಟ್ಟು 10 ಆಟಗಾರರನ್ನು ಖರೀದಿಸುವ ಅವಕಾಶವನ್ನು ಹೊಂದಿದೆ.

IPL 2024: KKR ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್
Shreyas Iyer
TV9 Web
| Edited By: |

Updated on: Dec 14, 2023 | 5:24 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ (Shreyas Iyer) ಮುನ್ನಡೆಸಲಿದ್ದಾರೆ. ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡದ ನಾಯಕರಾಗಿದ್ದ ನಿತೀಶ್ ರಾಣಾ ಈ ಬಾರಿ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

ಐಪಿಎಲ್ 2022 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಿದ್ದರು. ಈ ವೇಳೆ ಕೆಕೆಆರ್ ತಂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಇದಾಗ್ಯೂ 401 ರನ್​ ಕಲೆಹಾಕುವ ಮೂಲಕ ಕ್ಯಾಪ್ಟನ್ ಅಯ್ಯರ್ ಮಿಂಚಿದ್ದರು.

ಆದರೆ 2023 ರಲ್ಲಿ ಗಾಯಗೊಂಡಿದ್ದ ಹಿನ್ನಲೆ ಶ್ರೇಯಸ್ ಅಯ್ಯರ್ ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಹೊಸ ನಾಯಕನಾಗಿ ನಿತೀಶ್ ರಾಣಾ ಅವರನ್ನು ಆಯ್ಕೆ ಮಾಡಲಾಗಿತ್ತು.

ಇದೀಗ ಕೆಕೆಆರ್ ಪರ ಮತ್ತೆ ಕಣಕ್ಕಿಳಿಯಲು ಸಜ್ಜಾಗಿರುವ ಶ್ರೇಯಸ್ ಅಯ್ಯರ್​​ಗೆ ಮತ್ತೆ ನಾಯಕನ ಸ್ಥಾನ ನೀಡಲು ಟೀಮ್ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಅದರಂತೆ ಐಪಿಎಲ್ ಸೀಸನ್ 17 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಶ್ರೇಯಸ್ ಮುನ್ನಡೆಸಲಿದ್ದಾರೆ.

12 ಆಟಗಾರರನ್ನು ರಿಲೀಸ್ ಮಾಡಿದ ಕೆಕೆಆರ್:

ಈ ಬಾರಿಯ ಐಪಿಎಲ್​ಗೂ ಮುನ್ನ ಕೆಕೆಆರ್ ಫ್ರಾಂಚೈಸಿ ಒಟ್ಟು 12 ಆಟಗಾರರನ್ನು ಬಿಡುಗಡೆ ಮಾಡಿದೆ. ಹಾಗೆಯೇ 15 ಆಟಗಾರರನ್ನು ಉಳಿಸಿಕೊಂಡಿದೆ. ಅಂದರೆ ಈ ಮಿನಿ ಹರಾಜಿನ ಮೂಲಕ ಕೆಕೆಆರ್ ಒಟ್ಟು 10 ಆಟಗಾರರನ್ನು ಖರೀದಿಸುವ ಅವಕಾಶವನ್ನು ಹೊಂದಿದೆ. ಹೀಗಾಗಿ ಈ ಬಾರಿ ಕೆಕೆಆರ್ ತಂಡದಲ್ಲಿ ಕೆಲ ಹೊಸ ಮುಖಗಳು ಕಾಣಿಸಿಕೊಳ್ಳುವುದು ಖಚಿತ ಎನ್ನಬಹುದು.

ಕೋಲ್ಕತ್ತಾ ನೈಟ್ ರೈಡರ್ಸ್ ​ ಬಿಡುಗಡೆ ಮಾಡಿದ ಆಟಗಾರರು: ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಆರ್ಯ ದೇಸಾಯಿ, ಡೇವಿಡ್ ವೀಝ, ಶಾರ್ದೂಲ್ ಠಾಕೂರ್, ನಾರಾಯಣ್ ಜಗದೀಸನ್, ಮಂದೀಪ್ ಸಿಂಗ್, ಕುಲ್ವಂತ್ ಖೆಜ್ರೋಲಿಯಾ, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಜಾನ್ಸನ್ ಚಾರ್ಲ್ಸ್.

ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?

ಕೋಲ್ಕತ್ತಾ ನೈಟ್ ರೈಡರ್ಸ್ ಉಳಿಸಿಕೊಂಡಿರುವ ಆಟಗಾರರು: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಝ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ವೈಭವ್ ಅರೋರಾ, ಸುಯಶ್ ಶರ್ಮಾ, ಕುಲ್ವಂತ್ ಖೆಜ್ರೋಲಿಯಾ, ಮನ್‌ದೀಪ್ ಸಿಂಗ್, ಜೇಸನ್ ರಾಯ್.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್