AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಿಚ್ ಬಿಸಿಯಾಗಿತ್ತು, ಅದಕ್ಕೆ ಸೋತೆವು ಎಂದ ಸಂಜು ಸ್ಯಾಮ್ಸನ್

IPL 2024: ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ 12 ಪಂದ್ಯಗಳನ್ನಾಡಿದೆ. ಈ ಮ್ಯಾಚ್​ಗಳಲ್ಲಿ 8 ಜಯ ಸಾಧಿಸಿರುವ ಸಂಜು ಸ್ಯಾಮ್ಸನ್ ಪಡೆಗೆ ಪ್ಲೇಆಫ್ ಹಂತಕ್ಕೇರಲು ಇನ್ನೂ ಒಂದು ಗೆಲುವಿನ ಅವಶ್ಯಕತೆಯಿದೆ. ಅದರಂತೆ ಪಂಜಾಬ್ ಕಿಂಗ್ಸ್ ಅಥವಾ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ಜಯ ಸಾಧಿಸಿದರೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.

IPL 2024: ಪಿಚ್ ಬಿಸಿಯಾಗಿತ್ತು, ಅದಕ್ಕೆ ಸೋತೆವು ಎಂದ ಸಂಜು ಸ್ಯಾಮ್ಸನ್
Sanju Samson
ಝಾಹಿರ್ ಯೂಸುಫ್
|

Updated on:May 13, 2024 | 10:13 AM

Share

IPL 2024: ಐಪಿಎಲ್​ನಲ್ಲಿ ಭಾನುವಾರ ನಡೆದ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಆರ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ.

ಪವರ್​ಪ್ಲೇನಲ್ಲಿ ಕೇವಲ 42 ರನ್ ಕಲೆಹಾಕಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿತು. ಅಲ್ಲದೆ 15ನೇ ಓವರ್​ ವೇಳೆ 3 ವಿಕೆಟ್ ಕಳೆದುಕೊಂಡು ಗಳಿಸಿದ್ದು ಕೇವಲ 91 ರನ್​ಗಳು ಮಾತ್ರ.

ಅತ್ತ ವಿಕೆಟ್ ಇದ್ದರೂ ರಾಜಸ್ಥಾನ್ ರಾಯಲ್ಸ್ ತಂಡ ಬಿರುಸಿನ ಬ್ಯಾಟಿಂಗ್​ಗೆ ಮುಂದಾಗಿರಲಿಲ್ಲ. ಅಲ್ಲದೆ ಅಂತಿಮವಾಗಿ 20 ಓವರ್​ಗಳಲ್ಲಿ 141 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. 142 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.2 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್, ಪಿಚ್​ ಬ್ಯಾಟಿಂಗ್​ಗೆ ಸಹಕಾರಿಯಾಗಿರಲಿಲ್ಲ ಎಂದಿದ್ದಾರೆ. ನಾವು ಕನಿಷ್ಠ 170 ರನ್​ಗಳಿಸುವ ಉದ್ದೇಶದೊಂದಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದೆವು. ಆದರೆ ಪವರ್​ಪ್ಲೇನಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದ್ದೆವು. ಇದರಿಂದ 20-25 ರನ್​ಗಳು ಕಡಿಮೆಯಾಯಿತು.

ಅಲ್ಲದೆ ಪಿಚ್ ಕೂಡ ಬಿಸಿಯಾಗಿತ್ತು. ನಾವು 2ನೇ ಇನಿಂಗ್ಸ್​ ವೇಳೆ ಪಿಚ್ ನಿಧಾನವಾಗುತ್ತದೆ ಅಂದುಕೊಂಡಿದ್ದೆವು. ಸಾಮಾನ್ಯವಾಗಿ ರಾತ್ರಿ ಮ್ಯಾಚ್​ನಲ್ಲಿ ದ್ವಿತೀಯ ಇನಿಂಗ್ಸ್ ವೇಳೆ ಇಬ್ಬನಿ ಇರುತ್ತದೆ. ಅದೇ ರೀತಿ ಸೆಕೆಂಡ್ ಇನಿಂಗ್ಸ್ ವೇಳೆ ಪಿಚ್ ಬೌಲರ್​ಗಳಿಗೆ ಸಹಕಾರಿಯಾಗಲಿದೆ ಎಂದು ಭಾವಿಸಿದ್ದೆ. ಆದರೆ ಬೇಸಿಗೆಯಿಂದಾಗಿ ಪಿಚ್ ಮೇಲ್ಮೈ ಬಿಸಿಯಾಗಿತ್ತು. ಇದರಿಂದ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವುದು ಸಿಎಸ್​ಕೆಗೆ ಕಷ್ಟವಾಗಿಲ್ಲ. ಇದೇ ಕಾರಣದಿಂದಾಗಿ ನಾವು ಸೋಲಬೇಕಾಯಿತು ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಪ್ಲೇಆಫ್ ರೇಸ್​ನಲ್ಲಿ ಸಿಎಸ್​ಕೆ:

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಗೆಲುವಿನೊಂದಿಗೆ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡವು 16 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಆರ್​ಆರ್ ತಂಡಕ್ಕೆ ಇನ್ನೂ 2 ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಪಂದ್ಯ ಗೆದ್ದರೆ ಪ್ಲೇಆಫ್ ಹಂತಕ್ಕೇರಲಿದೆ.

ಇದನ್ನೂ ಓದಿ: IPL 2024: CSK ವಿರುದ್ಧ RCB ಎಷ್ಟು ರನ್​ಗಳ ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

ಇನ್ನು ಸಿಎಸ್​ಕೆ ತಂಡವು ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಲು ತನ್ನ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಗೆಲ್ಲಬೇಕು. ಇತ್ತ ಆರ್​ಸಿಬಿ ತಂಡಕ್ಕೂ ಪ್ಲೇಆಫ್ ಚಾನ್ಸ್ ಇದ್ದು, ಹೀಗಾಗಿ ಸಿಎಸ್​ಕೆ ತಂಡವನ್ನು ಸೋಲಿಸಿ ಮುಂದಿನ ಹಂತಕ್ಕೇರುವುದನ್ನು ಎದುರು ನೋಡುತ್ತಿದೆ.

Published On - 9:03 am, Mon, 13 May 24

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ