AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಾಟಲಿ ಎಸೆದು, ದಯಾಳ್ ಮೇಲೆ ಉಗ್ರರೂಪ ತಾಳಿದ್ರಾ ಕೊಹ್ಲಿ..? ವಿಡಿಯೋ ವೈರಲ್

IPL 2024: ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಇದೇ ವೇಳೆ ನಿರ್ಣಾಯಕ ಹಂತದಲ್ಲಿ ಆರ್​ಸಿಬಿ ವೇಗಿ ಯಶ್ ದಯಾಳ್ ಕೆಟ್ಟ ಬೌಲಿಂಗ್ ಮಾಡುವ ಮೂಲಕ ದುಬಾರಿಯಾಗಿದ್ದಕ್ಕೆ ವಿರಾಟ್ ಕೊಹ್ಲಿ ಮೈದಾನದಲ್ಲೇ ಉಗ್ರರೂಪ ತಾಳಿದ ಘಟನೆ ಇದೀಗ ಎಲ್ಲೆಡೆ ಭಾರಿ ವೈರಲ್ ಆಗುತ್ತಿದೆ.

IPL 2024: ಬಾಟಲಿ ಎಸೆದು, ದಯಾಳ್ ಮೇಲೆ ಉಗ್ರರೂಪ ತಾಳಿದ್ರಾ ಕೊಹ್ಲಿ..? ವಿಡಿಯೋ ವೈರಲ್
ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:May 23, 2024 | 6:35 PM

Share

ಐಪಿಎಲ್ (IPL) ಟ್ರೋಫಿ ಗೆಲ್ಲುವುದು ಆರ್‌ಸಿಬಿ (RCB) ಪಾಲಿಗೆ ಮತ್ತೆ ಕನಸಾಗಿಯೇ ಉಳಿದಿದೆ. ಲೀಗ್​​ನಲ್ಲಿ ಆರ್​ಸಿಬಿ ಅದ್ಭುತವಾದ ಪುನರಾಗಮನವನ್ನು ಮಾಡಿದಾಗ ಎಲ್ಲರೂ ಈ ತಂಡ ಕಪ್ ಗೆಲ್ಲುತ್ತದೆ ಎಂದು ಭಾವಿಸಿದ್ದರು. ಅಲ್ಲದೆ ಇಷ್ಟು ವರ್ಷ ಸಾಧ್ಯವಾಗದೆ ಇರುವುದು ಈ ಐಪಿಎಲ್ ಸೀಸನ್‌ನಲ್ಲಿ ಸಾಧ್ಯವಾಗಬಹುದು ಎಂದು ಒಂದು ಕ್ಷಣ ಎಲ್ಲರಿಗೂ ಅನಿಸಿತು. ಆದರೆ ಆರ್‌ಸಿಬಿ ಆಟಗಾರರು ಮತ್ತು ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳು ತಮ್ಮ ಮನದಲ್ಲಿ ಮೂಡಿಸಿಕೊಂಡಿದ್ದ ಕನಸುಗಳು ಕನಸಾಗಿಯೇ ಉಳಿದಿದೆ. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಇದೇ ವೇಳೆ ನಿರ್ಣಾಯಕ ಹಂತದಲ್ಲಿ ಆರ್​ಸಿಬಿ ವೇಗಿ ಯಶ್ ದಯಾಳ್ (Yash Dayal) ಕೆಟ್ಟ ಬೌಲಿಂಗ್ ಮಾಡುವ ಮೂಲಕ ದುಬಾರಿಯಾಗಿದ್ದಕ್ಕೆ ವಿರಾಟ್ ಕೊಹ್ಲಿ (Virat Kohli) ಮೈದಾನದಲ್ಲೇ ಉಗ್ರರೂಪ ತಾಳಿದ ಘಟನೆ ಇದೀಗ ಎಲ್ಲೆಡೆ ಭಾರಿ ವೈರಲ್ ಆಗುತ್ತಿದೆ.

ಬಾಟಲಿ ಎಸೆದು ನಿಂದಿಸಿದ್ರಾ ವಿರಾಟ್?

ವಾಸ್ತವವಾಗಿ ರಾಜಸ್ಥಾನದ ಇನಿಂಗ್ಸ್‌ನ 17 ನೇ ಓವರ್‌ ಬೌಲ್ ಮಾಡುವ ಜವಬ್ದಾರಿಯನ್ನು ಯಶ್ ದಯಾಲ್ ಅವರಿಗೆ ನೀಡಲಾಯಿತು. ಮೊದಲ ಎರಡು ಎಸೆತಗಳಲ್ಲಿ ಕೇವಲ 2 ರನ್ ನೀಡಿದ್ದ ಯಶ್ ದಯಾಳ್ ಮತ್ತೆ ಗೆಲುವಿನ ಆಸೆ ಚಿಗುರಿಸಿದ್ದರು. ಆದರೆ ಇದರ ನಂತರ ಅವರು ಎರಡು ಕೆಟ್ಟ ಎಸೆತಗಳನ್ನು ಎಸೆದರು, ಅದರಲ್ಲಿ ಶಿಮ್ರಾನ್ ಹೆಟ್ಮೆಯರ್ ಸತತ ಎರಡು ಬೌಂಡರಿಗಳನ್ನು ಬಾರಿಸಿದರು. ಮೂರನೇ ಎಸೆತದಲ್ಲಿ ಫುಲ್ ಟಾಸ್ ಬೌಲ್ ಮಾಡಿದ ದಯಾಳ್ ಮುಂದಿನ ಎಸೆತವನ್ನು ಆಫ್ ಸ್ಟಂಪ್ ಹೊರಗೆ ಬೌಲ್ ಮಾಡಿದರು. ಈ ಎರಡು ಕೆಟ್ಟ ಎಸೆತಗಳಲ್ಲಿ 8 ರನ್ ಬಂದವು.

Virat Kohli, IPL 2024: ಐಪಿಎಲ್​ನಲ್ಲಿ ಇತಿಹಾಸ ಬರೆದ ಕಿಂಗ್ ಕೊಹ್ಲಿ..!

ನಿರ್ಣಾಯಕ ಹಂತದಲ್ಲಿ ಕೆಟ್ಟ ಬೌಲಿಂಗ್ ಮಾಡಿದ ಯಶ್ ದಯಾಳ್​ರನ್ನು ನೋಡಿ ಇನ್ನಿಲ್ಲದಂತೆ ಕೋಪ ಹೊರಹಾಕಿದ್ದಾರೆ. ಇಲ್ಲಿಗೆ ನಿಲ್ಲದ ಕೊಹ್ಲಿ, ಎನರ್ಜಿ ಡ್ರಿಂಕ್ ಕುಡಿದು ಬಾಟಲಿಯನ್ನು ಬೌಂಡರಿ ಲೈನ್ ಮೇಲೆ ಎಸೆದರು. ಜೊತೆಗೆ ಏನನ್ನೋ ಗೊಣಗುತ್ತಿರುವಂತೆಯೂ ಕಂಡುಬಂತು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಆರ್‌ಸಿಬಿ ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಕಾರಣ

ಕಳೆದ 6 ಪಂದ್ಯಗಳಲ್ಲಿ ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ್ದ ಆರ್​ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿತು. ನಾಯಕ ಡುಪ್ಲೆಸಿಸ್ 17 ರನ್ ಗಳಿಸಿ ಔಟಾದರೆ, ಕೊಹ್ಲಿ 24 ಎಸೆತಗಳಲ್ಲಿ 33 ರನ್, ಗ್ರೀನ್ 27 ರನ್ ಮತ್ತು ಪಾಟಿದಾರ್ 34 ರನ್‌ಗಳ ಇನ್ನಿಂಗ್ಸ್ ಆಡಿದರು. ಆದರೆ ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಅಲ್ಲದೆ, ಮ್ಯಾಕ್ಸ್‌ವೆಲ್ ಖಾತೆಯನ್ನು ತೆರೆಯಲಾಗಿಲ್ಲ. ಹೀಗಾಗಿ ಆರ್‌ಸಿಬಿ ತಂಡ ಕೇವಲ 172 ರನ್ ಗಳಿಸಲಷ್ಟೇ ಶಕ್ತವಾಗಿದ್ದು, ಇದು ರಾಜಸ್ಥಾನಕ್ಕೆ ಸುಲಭವಾಗಿ ಗುರಿ ಬೆನ್ನಟ್ಟಲು ಸಹಾಯ ಮಾಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Thu, 23 May 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ