AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಯಾಕೆ ಮಹೀ ಭಾಯ್, ನಾಯಕತ್ವ ತೊರೆದೆ: ಕೊಹ್ಲಿ-ಧೋನಿ ಜುಗಲ್​ಬಂಧಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಟಾಸ್ ಗೆದ್ದರೂ, ಸಿಎಸ್​ಕೆ ಚೇಸಿಂಗ್ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್​ನ ಮೊದಲ ಪಂದ್ಯದಲ್ಲಿ ಗೆದ್ದು ಸಿಎಸ್​ಕೆ ಶುಭಾರಂಭ ಮಾಡಿದೆ.

VIDEO: ಯಾಕೆ ಮಹೀ ಭಾಯ್, ನಾಯಕತ್ವ ತೊರೆದೆ: ಕೊಹ್ಲಿ-ಧೋನಿ ಜುಗಲ್​ಬಂಧಿ
Virat Kohli-MS Dhoni
TV9 Web
| Edited By: |

Updated on:Mar 23, 2024 | 8:01 AM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ತಂಡದ ನಾಯಕನಾಗಿ ಶುಭಾರಂಭ ಮಾಡಿದ್ದಾರೆ. ಅಂದರೆ ಈ ಉದ್ಘಾಟನಾ ಪಂದ್ಯಕ್ಕೂ ಮುನ್ನವೇ ಧೋನಿ ತಮ್ಮ ನಾಯಕತ್ವವನ್ನು ಯುವ ಆಟಗಾರ ರುತುರಾಜ್​ಗೆ ಹಸ್ತಾಂತರಿಸಿದ್ದರು.

ಇದೀಗ ಸಿಎಸ್​ಕೆ ತಂಡದಲ್ಲಿ ಧೋನಿ ವಿಕೆಟ್​ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೇವಲ ಆಟಗಾರನಾಗಿ ಕಣಕ್ಕಿಳಿದಿದ್ದ ಧೋನಿಯ ಜೊತೆ ವಿರಾಟ್ ಕೊಹ್ಲಿ ಮೈದಾನದಲ್ಲೇ ಕುಶಲೋಪರಿ ವಿಚಾರಿಸಿದರು.

ಟಾಸ್ ಗೆದ್ದ ಬಳಿಕ ಆರ್​ಸಿಬಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ನೇರವಾಗಿ ಧೋನಿ ಬಳಿ ತೆರಳಿ ಹೆಗಲ ಮೇಲೆ ಕೈ ಹಾಕಿ ಅದೇನು ಮಾತನಾಡಿದರು. ಇದೀಗ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ನಡುವಣ ಫ್ರೆಂಡ್​ಶಿಪ್​ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಕ್ಕೆ ನಾನಾ ರೀತಿಯ ಪ್ರತಿಕ್ರಿಯೆಗಳು ಬರುತ್ತಿದ್ದು, ಕೆಲವರು ಧೋನಿ ಜೊತೆ ವಿರಾಟ್ ಕೊಹ್ಲಿ ನಾಯಕತ್ವ ತೊರೆದ ಬಗ್ಗೆ ವಿಚಾರಿಸಿರಬಹುದು ಎಂದರೆ, ಮತ್ತೆ ಕೆಲವರು ಆಟಗಾರನಾಗಿ ಕಣಕ್ಕಿಳಿದ ಸಿಎಸ್​ಕೆ ತಂಡದ ಮಾಜಿ ನಾಯಕನಿಗೆ ವಿರಾಟ್ ಕೊಹ್ಲಿ ಶುಭ ಹಾರೈಸಿರಬಹುದು ಎಂದಿದ್ದಾರೆ.

ಒಟ್ಟಿನಲ್ಲಿ ಮಹೀರಾಟ್ (ಮಹೇಂದ್ರ-ವಿರಾಟ್) ಜುಗಲ್​ಬಂಧಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದು, ಇಬ್ಬರು ಮಾಜಿ ನಾಯಕರುಗಳ ಗೆಳೆತನದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಧೋನಿ-ವಿರಾಟ್ ವಿಡಿಯೋ:

ಸಿಎಸ್​ಕೆ ಶುಭಾರಂಭ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

ಇದನ್ನೂ ಓದಿ: Virat Kohli: RCB ಸೋತರೂ, 2 ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ತಂಡವನ್ನು ಸೋಲಿಸಲು ಆರ್​ಸಿಬಿ ತಂಡಕ್ಕೆ ಸಾಧ್ಯವಾಗಿಲ್ಲ.

Published On - 7:57 am, Sat, 23 March 24

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ