VIDEO: ಯಾಕೆ ಮಹೀ ಭಾಯ್, ನಾಯಕತ್ವ ತೊರೆದೆ: ಕೊಹ್ಲಿ-ಧೋನಿ ಜುಗಲ್​ಬಂಧಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್​ 2024) ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಟಾಸ್ ಗೆದ್ದರೂ, ಸಿಎಸ್​ಕೆ ಚೇಸಿಂಗ್ ಮೂಲಕ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್​ನ ಮೊದಲ ಪಂದ್ಯದಲ್ಲಿ ಗೆದ್ದು ಸಿಎಸ್​ಕೆ ಶುಭಾರಂಭ ಮಾಡಿದೆ.

VIDEO: ಯಾಕೆ ಮಹೀ ಭಾಯ್, ನಾಯಕತ್ವ ತೊರೆದೆ: ಕೊಹ್ಲಿ-ಧೋನಿ ಜುಗಲ್​ಬಂಧಿ
Virat Kohli-MS Dhoni
Updated By: ಝಾಹಿರ್ ಯೂಸುಫ್

Updated on: Mar 23, 2024 | 8:01 AM

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರುತುರಾಜ್ ಗಾಯಕ್ವಾಡ್ ಸಿಎಸ್​ಕೆ ತಂಡದ ನಾಯಕನಾಗಿ ಶುಭಾರಂಭ ಮಾಡಿದ್ದಾರೆ. ಅಂದರೆ ಈ ಉದ್ಘಾಟನಾ ಪಂದ್ಯಕ್ಕೂ ಮುನ್ನವೇ ಧೋನಿ ತಮ್ಮ ನಾಯಕತ್ವವನ್ನು ಯುವ ಆಟಗಾರ ರುತುರಾಜ್​ಗೆ ಹಸ್ತಾಂತರಿಸಿದ್ದರು.

ಇದೀಗ ಸಿಎಸ್​ಕೆ ತಂಡದಲ್ಲಿ ಧೋನಿ ವಿಕೆಟ್​ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೇವಲ ಆಟಗಾರನಾಗಿ ಕಣಕ್ಕಿಳಿದಿದ್ದ ಧೋನಿಯ ಜೊತೆ ವಿರಾಟ್ ಕೊಹ್ಲಿ ಮೈದಾನದಲ್ಲೇ ಕುಶಲೋಪರಿ ವಿಚಾರಿಸಿದರು.

ಟಾಸ್ ಗೆದ್ದ ಬಳಿಕ ಆರ್​ಸಿಬಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ನೇರವಾಗಿ ಧೋನಿ ಬಳಿ ತೆರಳಿ ಹೆಗಲ ಮೇಲೆ ಕೈ ಹಾಕಿ ಅದೇನು ಮಾತನಾಡಿದರು. ಇದೀಗ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ನಡುವಣ ಫ್ರೆಂಡ್​ಶಿಪ್​ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಕ್ಕೆ ನಾನಾ ರೀತಿಯ ಪ್ರತಿಕ್ರಿಯೆಗಳು ಬರುತ್ತಿದ್ದು, ಕೆಲವರು ಧೋನಿ ಜೊತೆ ವಿರಾಟ್ ಕೊಹ್ಲಿ ನಾಯಕತ್ವ ತೊರೆದ ಬಗ್ಗೆ ವಿಚಾರಿಸಿರಬಹುದು ಎಂದರೆ, ಮತ್ತೆ ಕೆಲವರು ಆಟಗಾರನಾಗಿ ಕಣಕ್ಕಿಳಿದ ಸಿಎಸ್​ಕೆ ತಂಡದ ಮಾಜಿ ನಾಯಕನಿಗೆ ವಿರಾಟ್ ಕೊಹ್ಲಿ ಶುಭ ಹಾರೈಸಿರಬಹುದು ಎಂದಿದ್ದಾರೆ.

ಒಟ್ಟಿನಲ್ಲಿ ಮಹೀರಾಟ್ (ಮಹೇಂದ್ರ-ವಿರಾಟ್) ಜುಗಲ್​ಬಂಧಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದು, ಇಬ್ಬರು ಮಾಜಿ ನಾಯಕರುಗಳ ಗೆಳೆತನದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಧೋನಿ-ವಿರಾಟ್ ವಿಡಿಯೋ:

ಸಿಎಸ್​ಕೆ ಶುಭಾರಂಭ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

ಇದನ್ನೂ ಓದಿ: Virat Kohli: RCB ಸೋತರೂ, 2 ಭರ್ಜರಿ ದಾಖಲೆ ಬರೆದ ಕಿಂಗ್ ಕೊಹ್ಲಿ

ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ತಂಡವನ್ನು ಸೋಲಿಸಲು ಆರ್​ಸಿಬಿ ತಂಡಕ್ಕೆ ಸಾಧ್ಯವಾಗಿಲ್ಲ.

 

 

Published On - 7:57 am, Sat, 23 March 24