AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸತತ ಸೋಲು… ಬೇಸರ ಹೊರಹಾಕಿದ ಸಂಜು ಸ್ಯಾಮ್ಸನ್

IPL 2024: ಐಪಿಎಲ್​​ನ (IPL 2024) 65ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿದೆ . ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ ತಂಡದ 20 ಓವರ್​ಗಳಲ್ಲಿ 144 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು 18.5 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡ 5 ವಿಕೆಟ್​ಗಳ ಜಯ ಸಾಧಿಸಿತು.

IPL 2024: ಸತತ ಸೋಲು... ಬೇಸರ ಹೊರಹಾಕಿದ ಸಂಜು ಸ್ಯಾಮ್ಸನ್
Sanju Samson
ಝಾಹಿರ್ ಯೂಸುಫ್
|

Updated on:May 16, 2024 | 7:54 AM

Share

IPL 2024:  ರಾಜಸ್ಥಾನ್ ರಾಯಲ್ಸ್ (Rajastan Royals) ತಂಡವು ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿದೆ. ಮೊದಲ 9 ಪಂದ್ಯಗಳಲ್ಲಿ 8 ಜಯ ಸಾಧಿಸಿ ಅಬ್ಬರಿಸಿದ್ದ ರಾಜಸ್ಥಾನ್ ತಂಡವು ದ್ವಿತೀಯಾರ್ಧದ ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಅದರಲ್ಲೂ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದರು. ಈ ಪಂದ್ಯದಲ್ಲಿ ಸೋಲಿನ ಬಳಿಕ ಮಾತನಾಡಿದ ನಾಯಕ ಸಂಜು ಸ್ಯಾಮ್ಸನ್, ತಂಡದ ಪ್ರದರ್ಶನದ ಬಗ್ಗೆ ಬೇಸರ ಹೊರಹಾಕಿದ್ದಾರೆ.

ನಾವು ಇನ್ನೂ ಹೆಚ್ಚಿನ ರನ್​ ಗಳಿಸಬೇಕಿತ್ತು. ನನ್ನ ಪ್ರಕಾರ 10-15 ರನ್ ಕಡಿಮೆ ಕಲೆಹಾಕಿದ್ದೆವು. ಬರ್ಸಾಪರಾ ಪಿಚ್​ನಲ್ಲಿ ಸುಲಭವಾಗಿ 160 ರನ್​ ಕಲೆಹಾಕಬಹುದಾಗಿತ್ತು. ಆದರೆ ನಾವು ನಮ್ಮ ನೈಜ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದ್ದೇವೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಕಳೆದ ನಾಲ್ಕು ಪಂದ್ಯಗಳಿಂದ ನಾವು ವೈಫಲ್ಯಗಳನ್ನು ಅನುಭವಿಸುತ್ತಿದ್ದೇವೆ. ಹೀಗಾಗಿಯೇ 4 ಮ್ಯಾಚ್ ಸೋತಿದ್ದೇವೆ. ಇದಕ್ಕೆ ಮುಖ್ಯ ಕಾರಣ ತಂಡವಾಗಿ ಸಾಂಘಿಕ ಪ್ರದರ್ಶನ ನೀಡದಿರುವುದು. ನಮ್ಮಲ್ಲಿ ಹಲವು ಮ್ಯಾಚ್​ ವಿನ್ನರ್​ಗಳಿದ್ದಾರೆ. ಆದರೆ ಯಾರೂ ಕೂಡ ಪಂದ್ಯ ಗೆಲ್ಲಿಸಿಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ. ಯಾರಾದೂ ಒಬ್ಬರು ಪಂದ್ಯ ಗೆಲ್ಲಿಸುವಂತಹ ಇನಿಂಗ್ಸ್ ಆಡೇಬೇಕಿದೆ ಎಂದು ಇದೇ ವೇಳೆ ಸಂಜು ಸ್ಯಾಮ್ಸನ್ ಹೇಳಿದರು.

ಈ ಹಿಂದೆ ನಾವು 200 ಪ್ಲಸ್​ ರನ್​ಗಳನ್ನು ಸುಲಭವಾಗಿ ಕಲೆಹಾಕಿದ್ದೇವೆ. ಇದೀಗ ರನ್​ಗಳಿಸಲು ಪರದಾಡುತ್ತಿದ್ದೇವೆ. ಪಂಜಾಬ್ ಕಿಂಗ್ಸ್ ವಿರುದ್ಧ 160-170 ರನ್​ ಬಾರಿಸಿದ್ದರೂ ಅದು ಉತ್ತಮ ಮೊತ್ತವಾಗುತ್ತಿತ್ತು. ಆದರೆ ನಾವು ಬ್ಯಾಟಿಂಗ್ ವೇಳೆ ಜಾಣತನದ ಆಟ ಪ್ರದರ್ಶಿಸುವಲ್ಲಿ ವಿಫಲವಾಗಿದ್ದೇವೆ. ಆಶಾದಾಯಕವಾಗಿ, ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ. ಅಲ್ಲದೆ ಕೊನೆಯ ಲೀಗ್ ಪಂದ್ಯದಲ್ಲಿ ಜಯ ಸಾಧಿಸುತ್ತೇವೆ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಪ್ಲೇಆಫ್​ಗೆ ರಾಜಸ್ಥಾನ್ ರಾಯಲ್ಸ್​:

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸೋತರೂ ರಾಜಸ್ಥಾನ್ ರಾಯಲ್ಸ್ ತಂಡವು ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಅಂದರೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡವು ಟಾಪ್-4 ನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಏಕೆಂದರೆ ಆರ್​ಆರ್​ ತಂಡವು ಈಗಾಗಲೇ 16 ಅಂಕಗಳನ್ನು ಕಲೆಹಾಕಿದೆ.

ಇದನ್ನೂ ಓದಿ: IPL 2024: SRH ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯ..!

ಇನ್ನು ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ತಂಡಗಳಿಗೆ ಮಾತ್ರ 16 ಅಂಕಗಳನ್ನು ಸಂಪಾದಿಸಲು ಅವಕಾಶವಿದೆ. ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 16 ಅಂಕಗಳನ್ನು ಕಲೆಹಾಕಿದರೂ ರಾಜಸ್ಥಾನ್ ರಾಯಲ್ಸ್ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿಯೇ ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೂ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ.

Published On - 7:53 am, Thu, 16 May 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ