AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಡಗೈ ದಾಂಡಿಗರು ಇರಲಿಲ್ಲ, ಅದಕ್ಕೆ ಸೋತೆವು ಎಂದ ಸಂಜು ಸ್ಯಾಮ್ಸನ್

IPL 2024: ಐಪಿಎಲ್ 2024ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ ಜರುಗಲಿರುವ ಈ ಪಂದ್ಯವು ಚೆನ್ನನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ರ ಚಾಂಪಿಯನ್ ಆಗಿ ಹೊರಹೊಮ್ಮಲಿದೆ.

IPL 2024: ಎಡಗೈ ದಾಂಡಿಗರು ಇರಲಿಲ್ಲ, ಅದಕ್ಕೆ ಸೋತೆವು ಎಂದ ಸಂಜು ಸ್ಯಾಮ್ಸನ್
Sanju Samson
ಝಾಹಿರ್ ಯೂಸುಫ್
|

Updated on:May 25, 2024 | 8:35 AM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಮುಗ್ಗರಿಸಿದೆ. ಫೈನಲ್​ಗೇರಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 36 ರನ್​ಗಳಿಂದ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆರ್​ಆರ್ ತಂಡದ ಐಪಿಎಲ್ ಅಭಿಯಾನ ಅಂತ್ಯಗೊಂಡಿದೆ.

ಈ ಸೋಲಿನ ಬಳಿಕ ಮಾತನಾಡಿದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್, ಇದೊಂದು ಮಹತ್ವದ ಪಂದ್ಯವಾಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ನಾವು ಬೌಲಿಂಗ್ ಮಾಡಿದ ರೀತಿ ನನಗೆ ನಿಜಕ್ಕೂ ಹೆಮ್ಮೆ ತಂದಿದೆ. ಆದರೆ ಬ್ಯಾಟಿಂಗ್​ನಲ್ಲಿ ನಾವು ಎಡವಿದೆವು. ಅದರಲ್ಲೂ ಸ್ಪಿನ್ ದಾಳಿ ವಿರುದ್ಧ ಮಧ್ಯಮ ಓವರ್​ಗಳಲ್ಲಿ ನಮ್ಮಲ್ಲಿ ಉತ್ತಮ ಆಯ್ಕೆಗಳ ಕೊರತೆ ಕಂಡುಬಂದಿತು. ಅಲ್ಲಿಯೇ ನಾವು ಪಂದ್ಯ ಕಳೆದುಕೊಂಡೆವು ಎಂದು ಹೇಳಿದ್ದಾರೆ.

ದ್ವಿತೀಯ ಇನಿಂಗ್ಸ್​ ವೇಳೆ ಪಿಚ್ ಸ್ಪಿನ್ನರ್​ಗಳಿಗೆ ಸಹಕಾರಿಯಾಗಿತ್ತು. ಅದರಲ್ಲೂ ಸನ್​ರೈಸರ್ಸ್ ಹೈದರಾಬಾದ್ ಸ್ಪಿನ್ನರ್​ಗಳು ಈ ಟರ್ನಿಂಗ್​ಗಳನ್ನು ಪರಿಣಾಮಕಾರಿಯಾಗಿ ಬಳಸಲು ಪ್ರಾರಂಭಿಸಿದರು. ನಮ್ಮ ಬಲಗೈ ಬ್ಯಾಟ್ಸ್‌ಮನ್‌ಗಳ ವಿರುದ್ಧ ಮಧ್ಯಮ ಓವರ್‌ಗಳಲ್ಲಿ ಎಡಗೈ ಸ್ಪಿನ್ನರ್​ಗಳು ಉತ್ತಮ ದಾಳಿ ಸಂಘಟಿಸಿದರು.

ನಮ್ಮ ಬ್ಯಾಟಿಂಗ್​ ಲೈನಪ್​ನಲ್ಲಿ ಎಡಗೈ ಬ್ಯಾಟರ್​ಗಳು ಇಲ್ಲದಿರುವುದು ಕೂಡ ನಮ್ಮ ಸೋಲಿಗೆ ಕಾರಣವಾಯಿತು. ಶಿಮ್ರಾನ್ ಹೆಟ್ಮೆಯರ್ ಅವರನ್ನು ಹೊರತುಪಡಿಸಿ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಎಡಗೈ ಬ್ಯಾಟರ್​ಗಳಿರಲಿಲ್ಲ. ಹೀಗಾಗಿ ನಾವು ಎಡಗೈ ಸ್ಪಿನ್ನರ್​ಗಳ ವಿರುದ್ಧ ರಿವರ್ಸ್ ಸ್ವೀಪ್ ಮಾಡುವುದು ಅನಿವಾರ್ಯವಾಗಿತ್ತು. ಇಲ್ಲ ಕ್ರೀಸ್ ಕಚ್ಚಿ ನಿಲ್ಲಬೇಕಿತ್ತು. ಇದೇ ವೇಳೆ ಎಸ್​ಆರ್​ಹೆಚ್ ತಂಡದ ಎಡಗೈ ಸ್ಪಿನ್ನರ್​ಗಳು ಮಧ್ಯಮ ಓವರ್​ಗಳಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸಿ ಇಡೀ ಪಂದ್ಯದ ಗತಿಯನ್ನೇ ಬದಲಿಸಿ ಬಿಟ್ಟರು. ಇದುವೇ ನಮ್ಮ ಸೋಲಿಗೆ ಪ್ರಮುಖ ಕಾರಣ ಎಂದು ಸಂಜು ಸ್ಯಾಮ್ಸನ್ ಹೇಳಿದ್ದಾರೆ.

ಫೈನಲ್​ಗೆ ಎಂಟ್ರಿ ಕೊಟ್ಟ ಎಸ್​ಆರ್​ಹೆಚ್:

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ಪರ ಹೆನ್ರಿಕ್ ಕಾಸ್ಲೆನ್ (50) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕದ ನೆರವಿನಿಂದ ಎಸ್​ಆರ್​ಹೆಚ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು.

176 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್ ತಂಡದ ಪರ ಧ್ರುವ್ ಜುರೇಲ್ ಅಜೇಯ 56 ರನ್ ಬಾರಿಸಿದರು. ಇದಾಗ್ಯೂ ಮಧ್ಯಮ ಕ್ರಮಾಂಕದ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 139 ರನ್ ಬಾರಿಸಿ ರಾಜಸ್ಥಾನ್ ರಾಯಲ್ಸ್ ತಂಡವು 36 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಇದನ್ನೂ ಓದಿ: Virat Kohli: ಈ ಸಲ ಆರೆಂಜ್ ಕ್ಯಾಪ್ ನಮ್ದೆ

ಈ ಗೆಲುವಿನೊಂದಿಗೆ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್​ಗೆ ಅರ್ಹತೆ ಪಡೆದುಕೊಂಡಿದ್ದು, ಮೇ 26 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

Published On - 8:35 am, Sat, 25 May 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ