AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ರದ್ದಾಗುತ್ತಾ ಆರ್​ಸಿಬಿ- ಡೆಲ್ಲಿ ಪಂದ್ಯ?

Bengaluru Weather Report: ಬೆಂಗಳೂರಿನಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಪಂದ್ಯದ ದಿನವೂ ವರುಣನ ಅವಕೃಪೆ ಎದುರಾಗುವ ಭೀತಿ ಅಭಿಮಾನಿಗಳಲ್ಲಿತ್ತು. ಅದರಂತೆ ಇಂದು ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇಂದು ಮಧ್ಯಾಹ್ನನದಿಂದಲೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬಿರುಗಾಳಿ ಸಹಿತ ಧಾರಕಾರ ಮಳೆ ಸುರಿಯುತ್ತಿದೆ.

Breaking: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ರದ್ದಾಗುತ್ತಾ ಆರ್​ಸಿಬಿ- ಡೆಲ್ಲಿ ಪಂದ್ಯ?
ಬೆಂಗಳೂರಿನಲ್ಲಿ ಮಳೆ
ಪೃಥ್ವಿಶಂಕರ
|

Updated on:May 12, 2024 | 5:56 PM

Share

ಐಪಿಎಲ್ 2024  (IPL 2024) ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru vs Delhi Capitals) ತಂಡಗಳ ನಡುವೆ ಇಂದು ಸಂಜೆ 7:30ಕ್ಕೆ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪ್ಲೇ ಆಫ್​ಗೇರಲು ಉಭಯ ತಂಡಗಳಿಗೂ ಈ ಪಂದ್ಯ ನಡೆಯುವುದು ಅತ್ಯವಶ್ಯಕವಾಗಿದೆ. ಆದರೆ ಬೆಂಗಳೂರಿನಲ್ಲಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಪಂದ್ಯದ ದಿನವೂ ವರುಣನ ಅವಕೃಪೆ ಎದುರಾಗುವ ಭೀತಿ ಅಭಿಮಾನಿಗಳಲ್ಲಿತ್ತು. ಅದರಂತೆ ಇಂದು ನಡೆಯುವ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಇಂದು ಮಧ್ಯಾಹ್ನನದಿಂದಲೇ ಬೆಂಗಳೂರಿನಲ್ಲಿ ಮಳೆ ಸುರಿಯಲಾರಂಭಿಸಿದೆ. ಬಿರುಗಾಳಿ ಸಹಿತ ಧಾರಕಾರ ಮಳೆ ಸುರಿಯುತ್ತಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದು ಆರ್​ಸಿಬಿ ಪ್ಲೇಆಫ್​ಗೆ ಹತ್ತಿರವಾಗುವುದನ್ನು ನೋಡಬೇಕೆಂದುಕೊಂಡಿದ್ದ ಅಭಿಮಾನಿಗಳಲ್ಲಿ ಆತಂಕ ಮನೆಮಾಡಿದೆ.

ಧಾರಕಾರ ಮಳೆ

ಅಕ್ಯುವೆದರ್ ಪ್ರಕಾರ ಇಂದು ನಗರದಲ್ಲಿ ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿತ್ತು. ಅದರಂತೆ ಮಧ್ಯಾಹ್ನದಿಂದ ಮಳೆ ಆರಂಭವಾಗಿದೆ. ಅಲ್ಲದೆ ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗಲ್ಲಿದ್ದು, ಈ ವೇಳೆಯೂ ಅಂದರೆ ಸಂಜೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ವರದಿಯಾಗಿರುವಂತೆ ಸಂಜೆ ವೇಳೆಗೆ ಮಳೆ ಆರಂಭವಾದರೆ ಪಂದ್ಯಕ್ಕೆ ಅಡಚಣೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ಅತ್ಯಾಧುನಿಕ ತಂತ್ರಜ್ಞಾನ

ಅದಾಗ್ಯೂ ಎಷ್ಟೇ ಮಳೆ ಬಂದು ನಿಂತರು ಮೈದಾನವನ್ನು ಕೇವಲ ಅರ್ಧ ಗಂಟೆಯೊಳಗೆ ಪಂದ್ಯಕ್ಕೆ ಸಜ್ಜುಗೊಳಿಸುವ ತಂತ್ರಜ್ಞಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಳವಡಿಸಲಾಗಿದೆ. ಈ ಮೈದಾನಕ್ಕೆ ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಮೈದಾನದಲ್ಲಿ ನಿಂತ ಮಳೆ ನೀರನ್ನು ಬೇಗನೇ ಮೈದಾನದಿಂದ ಹೊರಹಾಕಬಹುದಾಗಿದೆ. ಆದ್ದರಿಂದ ಇಂದು ಮಳೆ ಬಂದು ನಿಂತರೂ ಪಂದ್ಯ ಆರಂಭವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ನಿರಂತರವಾಗಿ ಮಳೆಯಾದರೆ ಪಂದ್ಯವನ್ನು ಆರಂಭಿಸುವುದು ಕಷ್ಟಸಾಧ್ಯ.

ಚಿನ್ನಸ್ವಾಮಿ ಅಂಕಿಅಂಶ

ಈ ಮೈದಾನದಲ್ಲಿ ಇದುವರೆಗೆ 93 ಐಪಿಎಲ್ ಪಂದ್ಯಗಳು ನಡೆದಿವೆ. ಈ ಮೈದಾನದಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ತಂಡ ಅತಿ ಹೆಚ್ಚು ಪಂದ್ಯಗಳನ್ನು ಅಂದರೆ 50 ಪಂದ್ಯಗಳಲ್ಲಿ ಗೆದ್ದಿದೆ. ಉಳಿದಂತೆ 4 ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಈ ಮೈದಾನದಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 166 ಆಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:56 pm, Sun, 12 May 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ