AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ನಿವೃತ್ತಿ ಘೋಷಿಸಿ 3 ವರ್ಷ ಕಳೆದರೂ ನಿಲ್ಲದ ABD ಕ್ರೇಝ್: ಇದಕ್ಕೆ ಸಾಕ್ಷಿ ಈ ವಿಡಿಯೋ

IPL 2025 RCB Unbox Event: IPL 2024: RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ ವೇಳೆ 157 ಪಂದ್ಯಗಳಿಂದ ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಸಹ ಬರೆದಿದ್ದಾರೆ. ಹೀಗೆ ಆರ್​ಸಿಬಿ ತಂಡದ ಆಪತ್ಬಾಂಧವನಾಗಿ ಗುರುತಿಸಿಕೊಂಡಿದ್ದ ಎಬಿ ಡಿವಿಲಿಯರ್ಸ್ ಅವರ ಕ್ರೇಝ್ ಇನ್ನೂ ಸಹ ನಿಂತಿಲ್ಲ. ಇದಕ್ಕೆ ಸಾಕ್ಷಿ ಈ ವಿಡಿಯೋ...

VIDEO: ನಿವೃತ್ತಿ ಘೋಷಿಸಿ 3 ವರ್ಷ ಕಳೆದರೂ ನಿಲ್ಲದ ABD ಕ್ರೇಝ್: ಇದಕ್ಕೆ ಸಾಕ್ಷಿ ಈ ವಿಡಿಯೋ
AB de Villiers
ಝಾಹಿರ್ ಯೂಸುಫ್
|

Updated on: Mar 18, 2025 | 7:24 AM

Share

ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಅಲಿಯಾಸ್ ಎಬಿಡಿ ಐಪಿಎಲ್​ನಿಂದ ನಿವೃತ್ತರಾಗಿ ಮೂರು ವರ್ಷಗಳೇ ಕಳೆದಿದೆ. 2021, ಅಕ್ಟೋಬರ್ 11 ರಂದು ಕೊನೆಯ ಬಾರಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಎಬಿಡಿ ಆರ್​ಸಿಬಿ ಅಭಿಮಾನಿಗಳ ಪಾಲಿಗೆ ಅಜರಾಮರ. ಇದಕ್ಕೆ ಸಾಕ್ಷಿ ಈ ಬಾರಿಯ ಆರ್​ಸಿಬಿ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಕೇಳಿ ಬಂದ ABD, ABD ಎಂಬ ಹರ್ಷೋದ್ಗಾರ.

ಹೌದು, ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ತಂಡದ ಅನ್​ಬಾಕ್ಸ್ ಕಾರ್ಯಕ್ರಮದಲ್ಲೂ ಎಬಿ ಡಿವಿಲಿಯರ್ಸ್ ಹೆಸರು ರಾರಾಜಿಸಿದೆ. ಅದು ಸಹ ಅಭಿಮಾನಿಗಳಿಂದಲೇ.

ಮೂರು ವರ್ಷಗಳ ಹಿಂದೆಯೇ ಅರ್​ಸಿಬಿ ತಂಡವನ್ನು ತೊರೆದಿರುವ ಎಬಿ ಡಿವಿಲಿಯರ್ಸ್ ಅವರನ್ನು ಅಭಿಮಾನಿಗಳು ಈ ವಿಶೇಷ ಕಾರ್ಯಕ್ರಮದಲ್ಲಿ ನೆನೆದಿದ್ದಾರೆ. ಅಲ್ಲದೆ ಸ್ಟೇಡಿಯಂನಲ್ಲಿದ್ದ ಆರ್​ಸಿಬಿ ಫ್ಯಾನ್ಸ್ ಎಬಿಡಿ ಹೆಸರನ್ನು ಕೂಗುವ ಮೂಲಕ ವಿಶೇಷ ಗೌರವವನ್ನು ಸಲ್ಲಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಎಬಿ ಡಿವಿಲಿಯರ್ಸ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಗಾರ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 11 ವರ್ಷಗಳ ಕಾಲ ಆಡಿದ್ದ ಎಬಿ ಡಿವಿಲಿಯರ್ಸ್ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಈ ವೇಳೆ 157 ಪಂದ್ಯಗಳನ್ನಾಡಿರುವ ಅವರು ಒಟ್ಟು 4522 ರನ್‌ಗಳನ್ನು ಕಲೆಹಾಕಿದ್ದರು.

ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಹೊಂದಿದ್ದಾರೆ. ಹಾಗೆಯೇ ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

ಇನ್ನು ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳನ್ನಾಡಿರುವ ಎಬಿ ಡಿವಿಲಿಯರ್ಸ್​ ಒಟ್ಟು 5162 ರನ್‌ ಕಲೆಹಾಕಿದ್ದಾರೆ. ಈ ವೇಳೆ 3 ಭರ್ಜರಿ ಶತಕಗಳು, 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ಪಂದ್ಯವಾಡಿದ ಹಾಗೂ ಅತೀ ಹೆಚ್ಚು ಕಾಲ ಆಡಿದ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಡಿವಿಲಿಯರ್ಸ್ ನಿರ್ಮಿಸಿದ್ದಾರೆ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಹೀಗೆ 11 ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ ಎಬಿ ಡಿವಿಲಿಯರ್ಸ್​ ಅವರನ್ನು ವಿಶೇಷ ಕಾರ್ಯಕ್ರಮದ ವೇಳೆ ಆರ್​ಸಿಬಿ ಅಭಿಮಾನಿಗಳು ಸ್ಮರಿಸುತ್ತಿರುವುದೇ ವಿಶೇಷ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ವಿಜಯೇಂದ್ರ ವ್ಯಂಗ್ಯ
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್
ಶಾಂತಿ ಮಾತುಕತೆ ಅಂತಿಮವಾಗಿಲ್ಲ, ಇವತ್ತೇ ಸಹಿ ಹಾಕಲ್ಲ ಎಂದ ಇರಾನ್