AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCBಯಲ್ಲಿ ಬ್ರಿಟಿಷ್ ಪಡೆ… ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಟ್ರೋಫಿ ಎತ್ತಿ ಹಿಡಿದ ನಾಯಕರಲ್ಲಿ ಆಸ್ಟ್ರೇಲಿಯಾದ ಆ್ಯಡಂ ಗಿಲ್​ಕ್ರಿಸ್ಟ್ ಕೂಡ ಒಬ್ಬರು. 2009 ರಲ್ಲಿ ಡೆಕ್ಕನ್ ಚಾರ್ಜರ್ಸ್ ತಂಡವನ್ನು ಮುನ್ನಡೆಸಿ ಗಿಲ್​ಕ್ರಿಸ್ಟ್​ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು. ಹೀಗೆ ಐಪಿಎಲ್​ನ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ಗಿಲ್​ಕ್ರಿಸ್ಟ್​ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪ್ರದರ್ಶನ ಹೇಗಿರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
RCB - Adam Gilchrist
ಝಾಹಿರ್ ಯೂಸುಫ್
|

Updated on: Mar 22, 2025 | 10:25 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2025) ಚೊಚ್ಚಲ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಧ್ಯೇಯದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆ ಐಪಿಎಲ್​ ಸೀಸನ್-18 ಗಾಗಿ ಸಜ್ಜಾಗಿ ನಿಂತಿದೆ. ಈ ಸಜ್ಜಾಗುವಿಕೆಯ ನಡುವೆ ಆರ್​ಸಿಬಿ ತಂಡವು ಈ ಬಾರಿ ಕೂಡ ಸೋತು ಸುಣ್ಣವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ ಆಸ್ಟ್ರೇಲಿಯಾ ತಂಡದ ಮಾಜಿ ಆಟಗಾರ ಆ್ಯಡಂ ಗಿಲ್​ಕ್ರಿಸ್ಟ್​.

ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್​ ನಡೆಸುವ ಕ್ಲಬ್ ಪ್ರೈರಿ ಫೈರ್ ಪಾಡ್‌ಕ್ಯಾಸ್ಟ್‌ನಲ್ಲಿ ಐಪಿಎಲ್ ಕುರಿತು ಮಾತನಾಡಿದ ಆ್ಯಡಂ ಗಿಲ್​ಕ್ರಿಸ್ಟ್​, ಈ ಬಾರಿ ಆರ್​ಸಿಬಿ ತಂಡವು ಕೊನೆಯ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಇಂಗ್ಲೆಂಡ್ ಆಟಗಾರರು ಹೆಚ್ಚಿದ್ದಾರೆ. ಹೀಗಾಗಿ ಅವರು ಗೆಲ್ಲುವ ಸಾಧ್ಯತೆಯಿಲ್ಲ ಎಂದು ಗಿಲ್​ಕ್ರಿಸ್ಟ್, ಮೈಕಲ್ ವಾನ್ ಅವರ ಕಾಲೆಳೆದಿದ್ದಾರೆ.

ಈ ಮೂಲಕ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲುವುದನ್ನು ನಿರೀಕ್ಷಿಸಬೇಡಿ. ನಾನು ವಿರಾಟ್ ಕೊಹ್ಲಿಯ ವಿರೋಧಿ ಏನಲ್ಲ. ಆರ್​ಸಿಬಿ ಅಭಿಮಾನಿಗಳ ವಿರುದ್ಧವೂ ಇಲ್ಲ. ಇಂತಹ ಕಠೋರ ಹೇಳಿಕೆಗೆ ಮೊದಲೇ ನಾನು ಆರ್​ಸಿಬಿ ಫ್ಯಾನ್ಸ್​ ಬಳಿ ಕ್ಷಮೆಯಾಚಿಸುತ್ತೇನೆ. ಇಂತಹ ಆಟಗಾರರನ್ನು ಆಯ್ಕೆ ಮಾಡಿದ ನಿಮ್ಮ ಆಯ್ಕೆಗಾರರ ಬಳಿ ಮಾತನಾಡಡಿದರೆ ಉತ್ತಮ ಎಂದು ಆ್ಯಡಂ ಗಿಲ್​ಕ್ರಿಸ್ಟ್ ಹೇಳಿದ್ದಾರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಆ್ಯಡಂ ಗಿಲ್​ಕ್ರಿಸ್ಟ್ ಹೇಳಿದಂತೆ, ಈ ಬಾರಿ ಆರ್​ಸಿಬಿ ತಂಡದಲ್ಲಿ ಮೂವರು ಇಂಗ್ಲೆಂಡ್ ಆಟಗಾರರಿದ್ದಾರೆ. ಅವರೆಂದರೆ ಫಿಲ್ ಸಾಲ್ಟ್, ಲಿಯಾಮ್ ಲಿವಿಂಗ್​ಸ್ಟೋನ್ ಹಾಗೂ ಜೇಕಬ್ ಬೆಥೆಲ್. ಈ ಮೂವರು ಆಟಗಾರರು ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಅತ್ತ ಮೂವರು ಇಂಗ್ಲೆಂಡ್ ಪ್ಲೇಯರ್​ಗಳು ಭಾರತದ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿಯೇ ಆರ್​ಸಿಬಿ ತಂಡವು ಇಂಗ್ಲೆಂಡ್ ಆಟಗಾರರ ನೆರವಿನಿಂದ ಕಪ್ ಗೆಲ್ಲಲು ಸಾಧ್ಯವಿಲ್ಲ. ಈ ಬಾರಿ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಲಿದೆ ಎಂದು ಆ್ಯಡಂ ಗಿಲ್​ಕ್ರಿಸ್ಟ್ ಹೇಳಿದ್ದಾರೆ.

RCB ತಂಡದಲ್ಲಿರುವ ವಿದೇಶಿ ಆಟಗಾರರು:

  1. ಫಿಲ್ ಸಾಲ್ಟ್ (ಇಂಗ್ಲೆಂಡ್)
  2. ಲಿಯಾಮ್ ಲಿವಿಂಗ್​ಸ್ಟೋನ್ (ಇಂಗ್ಲೆಂಡ್)
  3. ಜೇಕಬ್ ಬೆಥೆಲ್ (ಇಂಗ್ಲೆಂಡ್)
  4. ಟಿಮ್ ಡೇವಿಡ್ (ಆಸ್ಟ್ರೇಲಿಯಾ)
  5. ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)
  6. ಲುಂಗಿ ಎನ್​ಗಿಡಿ (ಸೌತ್ ಆಫ್ರಿಕಾ)
  7. ರೊಮಾರಿಯೊ ಶೆಫರ್ಡ್ (ವೆಸ್ಟ್ ಇಂಡೀಸ್)
  8. ನುವಾನ್ ತುಷಾರ (ಶ್ರೀಲಂಕಾ

ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಾಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್